ಕೇಜ್ರಿವಾಲ್ ಗೆ ಜೀವ ಬೆದರಿಕೆ, ಪೊಲೀಸ್ ಭದ್ರತೆ!
ನವದೆಹಲಿ, ಜ.13 : ಆಮ್ ಆದ್ಮಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಬಂದಿದೆ. ಟ್ಯಾಂಕರ್ ಮಾಫಿಯಾದಿಂದ ಸಿಎಂಗೆ ಜೀವ ಬೆದರಿಕೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸೋಮವಾರದಿಂದ ಕೇಜ್ರಿವಾಲ್ ಅವರಿಗೆ ಝೆಡ್ ಮಾದರಿ ಭದ್ರತೆ ನೀಡಲು ಮುಂದಾಗಿದ್ದಾರೆ.
ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅಧಿಕಾರ ವಹಿಸಿಕೊಂಡ ನಂತರ ಜನರಿಗೆ ಪ್ರತಿದಿನ 700 ಲೀ ನೀರು ಉಚಿತವಾಗಿ ಪೂರೈಕೆ ಮಾಡುವುದಾಗಿ ಘೋಷಿಸಿದ್ದರು. ಇದರಿಂದ ನಷ್ಟ ಅನುಭವಿಸುವ ಟ್ಯಾಂಕರ್ ಮಾಫಿಯಾದ ಜನರು ಸಿಎಂಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ. [ಉಚಿತ ನೀರು ಪೂರೈಕೆಗೆ ಅಸ್ತು]

ಗುಪ್ತಚರ ಇಲಾಖೆ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಝೆಡ್ ಕೆಟಗರಿ ಭದ್ರತೆ ನೀಡಲು ಮುಂದಾಗಿದ್ದಾರೆ. ಸೋಮವಾರದಿಂದಲೇ ಕೇಜ್ರಿವಾಲ್ ಅವರಿಗೆ ಭದ್ರತೆ ದೊರೆಯಲಿದೆ. ಆದರೆ, ಭದ್ರತೆಯನ್ನು ಅವರು ನಿರಾಕರಿಸಿದ್ದು, ಪೊಲೀಸರು ಅವರ ಮನವೊಲಿಸುತ್ತಿದ್ದಾರೆ.
ಸಿಎಂ ಸ್ಥಾನಕ್ಕೆ ಏರಿದ ಬಳಿಕ ಅರವಿಂದ್ ಕೇಜ್ರಿವಾಲ್ ತಮಗೆ ಪೊಲೀಸ್ ಭದ್ರತೆ ಬೇಡ ಎಂದು ಹೇಳುತ್ತಿದ್ದರು. ಉತ್ತರ ಪ್ರದೇಶದ ಆಮ್ ಆದ್ಮಿ ಕಚೇರಿ ಮೇಲೆ ದಾಳಿ ನಡೆದ ನಂತರ ಪೊಲೀಸರು ಅವರಿಗೆ ಭದ್ರತೆ ಪಡೆಯುವಂತೆ ಮನವಿ ಮಾಡಿದ್ದರು. ಆದರೆ, ಅದನ್ನು ಕೇಜ್ರಿವಾಲ್ ನಿರಾಕರಿಸಿದ್ದರು. ಸದ್ಯ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಝೆಡ್ ಮಾದರಿ ಭದ್ರತೆ ನೀಡಲು ಪೊಲೀಸರು ನಿರ್ಧರಿಸಿದ್ದಾರೆ. [ಪಕ್ಷದ ಕಚೇರಿ ಮೇಲೆ ದಾಳಿ]
ಅರವಿಂದ್ ಕೇಜ್ರಿವಾಲ್ ಅವರಿಗೆ ಭದ್ರತೆ ನೀಡುವ ಜೊತೆಗೆ ಅವರ ಕುಟುಂಬ ಸದಸ್ಯರಿಗೂ ಭದ್ರತೆ ದೊರೆಯಲಿದೆ. ಝೆಡ್ ಮಾದರಿ ಭದ್ರತೆ ಅನ್ವಯ, ಸಿಎಂ, ಅವರ ನಿವಾಸ, ಅವರ ಕುಟುಂಬದ ಸದಸ್ಯರಿಗೆ ಭದ್ರತೆ ದೊರೆಯಲಿದೆ. ಸಿಎಂ ಸ್ಥಾನಕ್ಕೆ ಏರಿದ ನಂತರ ಕೇಜ್ರಿವಾಲ್ ಭದ್ರತೆ ನಿರಾಕರಿಸಿದ್ದರು. ಆದರೆ, ಈಗ ಅನಿವಾರ್ಯವಾಗಿ ಅವರು ಭದ್ರತೆಯನ್ನು ಪಡೆದುಕೊಳ್ಳಬೇಕಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications