ವಾಟರ್ ಟ್ಯಾಂಕರ್ ಹಗರಣ: ಶೀಲಾ ದೀಕ್ಷಿತ್ ಗೆ ನೋಟಿಸ್
ನವದೆಹಲಿ, ಜುಲೈ 04: ಉತ್ತರಪ್ರದೇಶದ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶೀಲಾ ದೀಕ್ಷಿತ್ ಅವರಿಗೆ ದೆಹಲಿ ಸಿಎಂ ಆಗಿದ್ದ ಕಾಲದಲ್ಲಿನ ಹಗರಣವೊಂದು ಕಾಡುತ್ತಿದೆ. ವಾಟರ್ ಟ್ಯಾಂಕರ್ ಹಗರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೆಸರು ಸಿಲುಕಿಕೊಂಡಿದ್ದು, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಿಂದ ವಿಚಾರಣೆಗಾಗಿ ನೋಟಿಸ್ ಜಾರಿಗೊಂಡಿದೆ.
ಆಗಸ್ಟ್ 26ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಹಾಗೂ ದೆಹಲಿ ಜಲಮಂಡಳಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನೋಟಿಸ್ ಜಾರಿಗೊಳಿಸಿದೆ.

ವಾಟರ್ ಟ್ಯಾಂಕರ್ ಪ್ರಕರಣಕ್ಕೆ ಸಂಬಂಧಿಸಿ ಶೀಲಾ ದೀಕ್ಷಿತ್ ಅವರ ಮೇಲೂ ಆರೋಪ ಕೇಳಿಬಂದಿದೆ. ಹೀಗಾಗಿ ನೋಟಿಸ್ ಜಾರಿ ಮಾಡಿದ್ದೇವೆ. ಅಗಸ್ಟ್ 26ರಂದು ವಿಚಾರಣೆ ನಡೆಸಲಾಗುವುದು ಎಂದು ಎಸಿಬಿ ಮುಖ್ಯಸ್ಥ ಎಂಕೆ ಮೀನಾ ತಿಳಿಸಿದ್ದಾರೆ.
ಜೂನ್ 20ರಂದು ಶೀಲಾ ದೀಕ್ಷಿತ್ ವಿರುದ್ಧ ಎಸಿಬಿ ಪ್ರಕರಣ ದಾಖಲಿಸಿತ್ತು. ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಅರವಿಂಡ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಪ್ರಬಲವಾದ ಆರೋಪ ಮಾಡಿದೆ. ಈ ಬಗ್ಗೆ ದಾಖಲಾತಿಗಳನ್ನು ಬಿಡುಗಡೆ ಮಾಡಿದೆ. ಈ ಹಗರಣದಿಂದ ಸರ್ಕಾರಕ್ಕೆ ಸುಮಾರು 400 ಕೋಟಿ ರೂ. ನಷ್ಟವಾಗಿದೆ ಎಂದು ಎಸಿಬಿ ತನ್ನ ವರದಿಯಲ್ಲಿ ಹೇಳಿದೆ.
ಆದರೆ, ಇದೊಂದು ರಾಜಕೀಯ ಪ್ರೇರಿತ ದೂರು, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಶೀಲಾ ದೀಕ್ಷಿತ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಂ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಎಸಿಬಿ ಪಡೆಯಲಿದೆ. (ಪಿಟಿಐ)
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications