ರಾಜ್ಯದಲ್ಲಿ ನಾವು ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ ಎಂದ ಡಿಕೆಶಿ, ಸಿದ್ದರಾಮಯ್ಯ
ನವದೆಹಲಿ, ಫೆಬ್ರವರಿ 25: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇದಕ್ಕೂ ಮುನ್ನ ಹಲವು ರಾಜ್ಯ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, "ನಿನ್ನೆ ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದೇವೆ. ಹದಿನೈದು ನಾಯಕರು ಗುರುವಾರ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದೇವೆ. ಭೇಟಿ ವೇಳೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ್ ಸೇರಿದಂತೆ ಹಿರಿಯ ನಾಯಕರು ಇದ್ದರು," ಎಂದರು.
ಕರ್ನಾಟಕ ರಾಜ್ಯದ ರಾಜಕೀಯ ಬೆಳವಣಿಗಗಳ ಬಗ್ಗೆ ಮಾಹಿತಿ ನೀಡಿದ್ದು, ಪಕ್ಷದ ಸಂಘಟನೆ ಬಗ್ಗೆ ವಿವರಣೆ ನೀಡಿದ್ದೇವೆ. ಚುನಾವಣೆಗೆ ಇನ್ನು ಒಂದು ವರ್ಷ ಸಮಯ ಇದೆ. ಜನರ ಸಮಸ್ಯೆಗಳನ್ನು ಆಧರಿಸಿ ಮುಂದೆ ಹೋರಾಟ ಮಾಡಲು ಹೈಕಮಾಂಡ್ ಸೂಚಿಸಿದೆ. ಜನರ ನಡುವೆ ಇರುವಂತೆ ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದು ಹೇಳಿದರು.

"ಫೆ.27ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ ಡಿ.ಕೆ. ಶಿವಕುಮಾರ್, ಪಾದಯಾತ್ರೆ ನಿಲ್ಲಿಸಿದ ಸ್ಥಳದಿಂದ ಮತ್ತೆ ಆರಂಭವಾಗಲಿದೆ. ಬಹಳಷ್ಟು ಸಂಘಟನೆಗಳು ಹೋರಾಟಕ್ಕೆ ಬೆಂಬಲ ಘೋಷಿಸುವುದಾಗಿ ಹೇಳಿದ್ದವು. ಈಗ ಎಲ್ಲ ಕಲಾವಿದರಿಗೆ ಮನವಿ ಮಾಡುತ್ತಿದ್ದೇನೆ. ಕುಡಿಯುವ ನೀರಿನ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಕಾಂಗ್ರೆಸ್ ಪರ ಮನವಿ ಮಾಡುತ್ತೇನೆ. ರಾಜ್ಯದ ಹಿತಕ್ಕೆ ಎಲ್ಲರೂ ಒಂದಾಗಬೇಕು," ಎಂದರು.
ನಂತರ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, "ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಾತಾವರಣ ನಿರ್ಮಾಣವಾಗುತ್ತಿದೆ. ಆಪರೇಷನ್ ಮೂಲಕ ಅಧಿಕಾರಕ್ಕೆ ಬಂದರೂ ಬಿಜೆಪಿ ಏನು ಅಭಿವೃದ್ಧಿ ಕೆಲಸ ಮಾಡಿಲ್ಲ. ರಾಜ್ಯದ ಜನರು ಶಾಪ ಹಾಕುತ್ತಿದ್ದಾರೆ, ಕಣ್ಣಿರಲ್ಲಿ ಕೈತೊಳೆಯುತ್ತಿದ್ದಾರೆ," ಎಂದು ದೂರಿದರು.

"ಕೋವಿಡ್ ಅನ್ನು ಸರಿಯಾಗಿ ನಿಭಾಯಿಸದೇ ಸರ್ಕಾರ ನಿಷ್ಕ್ರಿಯವಾಗಿದ್ದು, ರಾಜ್ಯವನ್ನು ಬಿಜೆಪಿ ಆರ್ಥಿಕವಾಗಿ ದಿವಾಳಿ ಮಾಡಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯದ ನಾಯಕರ ಜೊತೆಗೆ ಸಭೆ ನಡೆಸಿದರು. ರಾಜ್ಯದ ಪರಿಸ್ಥಿತಿಗಳ ಬಗ್ಗೆ ಚರ್ಚೆ ಮಾಡಿದರು. ಚುನಾವಣೆ ತಂತ್ರಗಳನ್ನು ಮಾಡುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹೈಕಮಾಂಡ್ ಬೆಂಬಲ ನೀಡುವುದಾಗಿ ತಿಳಿಸಿದೆ," ಎಂದರು.
ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷರು, ಸಿಎಲ್ಪಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎನ್ನುವ ಸಂದೇಶ ಸಿಕ್ಕಿದೆ. ನಾವು ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬಿಜೆಪಿ ಭಿನ್ನಬಿಪ್ರಾಯಗಳಿವೆ ಎಂದು ಸ್ಪಷ್ಟಪಡಿಸಿದರು.
ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಹೀಗಾಗಿ ಸಣ್ಣಪುಟ್ಟ ವ್ಯತಾಸಗಳಿರುತ್ತವೆ. ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ಮಾತನಾಡಿದರೆ ಅದನ್ನು ಬಿಜೆಪಿ ನಾಯಕರು ಬೆಂಬಲಿಸುತ್ತಾರೆ. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ತಪ್ಪು ಎಂದು ಹೇಳಿದ್ದಾರೆ.

ಇಷ್ಟೆಲ್ಲ ಆದರೂ ಸಿಎಂ, ರಾಜ್ಯಾಧ್ಯಕ್ಷರು ಈಶ್ವರಪ್ಪರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಶವ ಇಟ್ಟುಕೊಂಡು ರಾಜಕೀಯ ಮಾಡಿದ್ದಾರೆ. 144 ಸೆಕ್ಷನ್ ಜಾರಿ ಇದ್ದರೂ ಶವಯಾತ್ರೆಯಲ್ಲಿ ಭಾಗಿಯಾಗಿ ಕಾನೂನು ಉಲ್ಲಂಘಿಸಿದ್ದಾರೆ. ಅದಕ್ಕೂ ಕ್ರಮ ತೆಗೆದುಕೊಳ್ಳಬೇಕಿತ್ತು. ಕ್ರಮ ಕೈಗೊಳ್ಳದ ಹಿನ್ನೆಲೆ ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ವಜಾ ಮಾಡಲು ಮನವಿ ಮಾಡಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮೇಕೆದಾಟು ಯೋಜನೆ ನೆನೆಗುದಿಗೆ ಬಿದ್ದ ಯೋಜನೆ. ನಮ್ಮ ಸರ್ಕಾರ ಡಿಪಿಆರ್ ತಯಾರು ಮಾಡಿತ್ತು. ಕೆಲವು ಪರಿಶೀಲನೆ ನಡೆಸಿ ವಾಪಸ್ ಕಳುಹಿಸಿದ್ದರು. ಆಗ ಮೈತ್ರಿ ಸರ್ಕಾರ ಇತ್ತು, ಡಿ.ಕೆ. ಶಿವಕುಮಾರ್ ಮರು ಮನವಿ ಮಾಡಡಿದ್ದರು. ಕೇವಲ ಪರಿಸರ ಅನುಮತಿ ಮಾತ್ರ ಅವಶ್ಯಕತೆ ಇದೆ. ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರ ಬಂದು 2 ವರ್ಷಳಾಗಿದೆ. ಈ ಅವಧಿಯಲ್ಲಿ ಒಂದು ಪರಿಸರ ಅನುನತಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಿದರು.
ನಮ್ಮ ರಾಜ್ಯದಲ್ಲಿ ಮಾಡುವ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದನ್ನು ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ. ಈ ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಪೂರೈಕೆಯಾಗಲಿದೆ. ಬಿಜೆಪಿ ಮನಸ್ಸು ಮಾಡಿದರೆ ಎರಡು ಮೂರು ತಿಂಗಳಲ್ಲಿ ಅನುಮತಿ ಪಡೆಯಬಹುದಿತ್ತು. ಈವರೆಗೂ ಅನುಮತಿ ಪಡೆದಿಲ್ಲ. ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪಾದಯಾತ್ರೆ ಮಾಡುತ್ತಿದ್ದೇವೆ. ರಾಜಕೀಯ ಕಾರಣಕ್ಕೆ ಪಾದಯಾತ್ರೆ ಮಾಡುತ್ತಿಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications