ರಾಹುಲ್ ಗಾಂಧಿ ಒಬ್ಬ ಸಲಿಂಗಕಾಮಿ ಎಂದು ಕೇಳಿದ್ದೇವೆ: ಸ್ವಾಮಿ ಚಕ್ರಪಾಣಿ
ನವದೆಹಲಿ, ಜನವರಿ 3: ವೀರ್ ಸಾವರ್ಕರ್ ಅವರಿಗೂ ನಾಥೂರಾಮ್ ಗೋಡ್ಸೆಗೂ ದೈಹಿಕ ಸಂಪರ್ಕವಿತ್ತು ಎಂದು ಕಾಂಗ್ರೆಸ್ ಸೇವಾ ದಳ ಬಿಡುಗಡೆ ಮಾಡಿರುವ ಕಿರು ಪುಸ್ತಕದಲ್ಲಿ ಪ್ರಕಟಿಸಿರುವುದಕ್ಕೆ ಹರಿಹಾಯ್ದಿರುವ ಅಖಿಲ ಭಾರತ ಹಿಂದೂ ಮಹಾಸಭಾ ಅಧ್ಯಕ್ಷ ಸ್ವಾಮಿ ಚಕ್ರಪಾಣಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಸಲಿಂಗಕಾಮಿ ಎಂಬುದನ್ನು ನಾವು ಕೇಳಿದ್ದೇವೆ ಎಂದಿದ್ದಾರೆ.
ಸಾವರ್ಕರ್ ಮತ್ತು ಗೋಡ್ಸೆ ನಡುವೆ ದೈಹಿಕ ಸಂಪರ್ಕವಿತ್ತು ಎಂಬ ಆರೋಪವೇ ಹಾಸ್ಯಾಸ್ಪದ ಎಂದು ಸ್ವಾಮಿ ಚಕ್ರಪಾಣಿ ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಕಿಡಿಕಾರಿದ್ದಾರೆ.
'ಇದೇ ರೀತಿ ರಾಹುಲ್ ಗಾಂಧಿ ಒಬ್ಬ ಸಲಿಂಗಕಾಮಿ ಎಂಬ ಹೇಳಿಕೆಯನ್ನೂ ನಾವು ಕೇಳಿದ್ದೇವೆ' ಎಂದು ಸ್ವಾಮಿ ಹೇಳಿದ್ದಾರೆ.

'ವೀರ್ ಸಾವರ್ಕರ್ ಕಿತನೇ ವೀರ್' ಎಂಬ ಕಿರು ಪುಸ್ತಕವನ್ನು ಕಾಂಗ್ರೆಸ್ ಸೇವಾ ದಳದ ಹತ್ತು ದಿನಗಳ ಶಿಬಿರದ ವೇಲೆ ವಿತರಿಸಲಾಗಿತ್ತು. ಗೋಡ್ಸೆ ತನ್ನ ಬ್ರಹ್ಮಚರ್ಯ ಸ್ವೀಕರಿಸಿದ ಅವಧಿಯಿಂದ ದೈಹಿಕ ಸಂಪರ್ಕ ಹೊಂದಿದ್ದ ವಿವರಗಳು ಲಭ್ಯವಾಗಿವೆ. ಅವರದು ಸಲಿಂಗಕಾಮವಾಗಿತ್ತು. ಅವರ ರಾಜಕೀಯ ಗುರು ಸಾವರ್ಕರ್ ಅವರೇ ಗೋಡ್ಸೆಯ ಸಂಗಾತಿಯಾಗಿದ್ದರು' ಎಂದು ಅದರಲ್ಲಿ ಬರೆಯಲಾಗಿದೆ.
ಈ ಪುಸ್ತಕವು ಭಾರಿ ವಿವಾದ ಸೃಷ್ಟಿಸಿದೆ. ತನಗೆ ಸಿಕ್ಕಿರುವ ಪುರಾವೆಗಳ ಆಧಾರದಲ್ಲಿ ಲೇಖಕರು ಈ ಬರಹ ಬರೆದಿದ್ದಾರೆ. ಆದರೆ ಅವರು ಸಲಿಂಗಕಾಮಿ ಆಗಿದ್ದರೇ ಅಥವಾ ಅಲ್ಲವೇ ಎಂಬುದು ನಮಗೆ ಮುಖ್ಯವಲ್ಲ. ಇಂದು ನಮ್ಮ ದೇಶದಲ್ಲಿ ಪ್ರತಿಯಬ್ಬರೂ ಅವರದ್ದೇ ಆದ ಆದ್ಯತೆಯಲ್ಲಿ ಬದುಕುವ ಕಾನೂನಾತ್ಮಕ ಹಕ್ಕಿದೆ ಎಂದು ಕಾಂಗ್ರೆಸ್ ಸೇವಾ ದಳ ಮುಖ್ಯಸ್ಥ ಲಾಲ್ಜಿ ದೇಸಾಯಿ ಸಮರ್ಥಿಸಿಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನ ಮಿತ್ರಪಕ್ಷವಾಗಿರುವ ಶಿವಸೇನಾ ಕೂಡ ಈ ವಿವಾದಾತ್ಮಕ ಪುಸ್ತಕದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 'ಸಾವರ್ಕರ್ ಅವರನ್ನು ಅವಮಾನಿಸುವ ಜನರ ಮಿದುಳನ್ನು ಮೊದಲು ಪರೀಕ್ಷಿಸಬೇಕು' ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
'ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ. ಮತ್ತು ಅವರು ಎಂದೆಂದಿಗೂ ಮಹಾನ್ ವ್ಯಕ್ತಿಯಾಗಿಯೇ ಉಳಿಯುತ್ತಾರೆ. ಒಂದು ವರ್ಗ ಅವರ ವಿರುದ್ಧ ಹೇಳಿಕೆ ನೀಡುತ್ತಲೇ ಇರುತ್ತದೆ. ಇದು ಅವರ ಮನಸ್ಸಿನಲ್ಲಿರುವ ಕೊಳಕನ್ನು ತೋರಿಸುತ್ತದೆ' ಎಂದು ಕಿಡಿಕಾರಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications