ಒಬಾಮಾ ಪುಸ್ತಕದಲ್ಲಿ ರಾಹುಲ್ ಕುರಿತ ಅಭಿಪ್ರಾಯಕ್ಕೆ ಸಂಜಯ್ ರಾವತ್ ವಿರೋಧ
ನವದೆಹಲಿ, ನವೆಂಬರ್ 14: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ತನ್ನ ಪುಸ್ತಕದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಕ್ಕೆ ಶಿವಸೇನಾ ವಕ್ತಾರ ಸಂಜಯ್ ರಾವತ್ ವಿರೋಧ ವ್ಯಕ್ತಪಡಿಸಿದ್ದಾರೆ.
ಒಬಾಮಾ ಅವರು ತಮ್ಮ ಆತ್ಮ ಚರಿತ್ರೆ ಎ ಪ್ರಾಮಿಸ್ಡ್ ಲ್ಯಾಂಡ್ ಕೃತಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಹುಲ್ ಗಾಂಧಿಯ ಕುರಿತು ಉಲ್ಲೇಖಿಸಿದ್ದಾರೆ.
ಅಧ್ಯಾಪಕರನ್ನು ಮೆಚ್ಚಿಸಲು ತುದಿಗಾಲಲ್ಲಿ ನಿಂತಿರುವ ಕೋರ್ಸ್ ವರ್ಕ್ ಮುಗಿಸಿದ ವಿದ್ಯಾರ್ಥಿಯೆಂಬಂತೆ ಅಳುಕು, ಅಪಕ್ವತೆಯನ್ನು ಹೊಂದಿದವರು ರಾಹುಲ್ ಗಾಂಧಿ ಎಂದು ಬರೆದಿದ್ದಾರೆ.

ನಾವು ಯಾವತ್ತೂ ಡೊನಾಲ್ಡ್ ಟ್ರಂಪ್ಗೆ ಸರಿಯಿಲ್ಲ ಎಂದು ಹೇಳಿಲ್ಲ, ಒಬಾಮಾಗೆ ಭಾರತದ ಬಗ್ಗೆ ಎಷ್ಟು ತಿಳಿದಿದೆ? ಎಂದು ಪ್ರಶ್ನಿಸಿದ್ದಾರೆ.
ವಿದೇಶಿ ರಾಜಕಾರಣಿಯೊಬ್ಬರು ಭಾರತದ ರಾಜಕೀಯ ನಾಯಕರ ಬಗ್ಗೆ ಅಂತಹ ಅಭಿಪ್ರಾಯಗಳನ್ನು ನೀಡುವುದು ತಪ್ಪು, ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ ದೇಶೀಯ ರಾಜಕೀಯ ಪ್ರಹಸನಗಳೂ ಕೆಟ್ಟದದಾಗಿದೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿ ಸಾಕಷ್ಟು ಅಪಹಾಸ್ಯ ಭರಿತ ಮಾತುಗಳು ಹಡಿದಾಡಿದ್ದವು.
ಒಬಾಮಾ ಅವರ ಪುಸ್ತಕದಲ್ಲಿನ ಸಾಲುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ಅವರ ಸಾಮರ್ಥ್ಯವನ್ನು ಅತ್ಯಂತ ವಿಧೇಯವಾಗಿ ಒಬಾಮಾ ಅಣಕಿಸಿದ್ದಾರೆ ಎಂದು ರಾಹುಲ್ ಸೈದ್ಧಾಂತಿಕ ವಿರೋಧಿಗಳು ಟೀಕಿಸಿದ್ದಾರೆ. ಇನ್ನೊಂದೆಡೆ ಅನೇಕರು ಒಬಾಮಾ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಬಾಮಾ ಮೇಲಿನ ಗೌರವ ಇದರಿಂದ ಕಳೆದುಹೋಯಿತು ಎಂದಿದ್ದಾರೆ. ಮನಮೋಹನ್ ಸಿಂಗ್ ಭಾವುಕ ಮನಮೋಹನ್ ಸಿಂಗ್ ಭಾವುಕ ಇನ್ನೊಂದೆಡೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಬಗ್ಗೆಯೂ ಒಬಾಮಾ ಉಲ್ಲೇಖಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಭಾವಪೂರ್ಣ ಸ್ವಭಾವದ ವ್ಯಕ್ತಿಯಂತೆ ಕಂಡುಬಂದಿದ್ದಾರೆ ಎಂದು ಅವರು ಬರೆದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications