ಜೈರಾಮ್ ರಮೇಶ್, ನಿರ್ಮಲಾ ಸೀತಾರಾಮನ್ "ಯು ಟರ್ನ್" ವಾಗ್ಯುದ್ಧ
ನವದೆಹಲಿ, ಫೆಬ್ರುವರಿ 13: ಕೇಂದ್ರ ಪರಿಚಯಿಸಿರುವ ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಯು ಟರ್ನ್ ತೆಗೆದುಕೊಂಡಿದೆ. ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಇಂಥ ಕೃಷಿ ಕಾಯ್ದೆಯ ಅಗತ್ಯವನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ಇಂದು ತನ್ನ ಲಾಭಕ್ಕಾಗಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದು, ಇದನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅದೇ ಪ್ರಶ್ನೆಯನ್ನು ನಿರ್ಮಲಾ ಸೀತಾರಾಮನ್ ಅವರಿಗೆ ತಿರುಗಿ ಕೇಳಿದ್ದಾರೆ.
ನೀವೇಕೆ ಯು ಟರ್ನ್ ತೆಗೆದುಕೊಂಡಿದ್ದೀರಿ ಎಂದು ಮರು ಪ್ರಶ್ನೆ ಮಾಡಿದ್ದಾರೆ.
ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಅಗತ್ಯದ ಕುರಿತು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಜೈರಾಮ್ ರಮೇಶ್, ಈ ಯು ಟರ್ನ್ ಬಗ್ಗೆ ಏನು ಹೇಳುತ್ತೀರಾ ಮೇಡಂ? ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಹೊಸ ಕೃಷಿ ಕಾಯ್ದೆಗಳ ಕುರಿತು ವಿರೋಧ ವ್ಯಕ್ತಪಡಿಸಿ ರೈತರಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಡೆಗೆ ನಿರ್ಮಲಾ ಸೀತಾರಾಮನ್ ವಿರೋಧ ವ್ಯಕ್ತಪಡಿಸಿದ್ದು, ಈ ಹಿಂದೆ ಈ ಕಾಯ್ದೆಗಳ ಅವಶ್ಯಕತೆ ಇದೆ ಎಂದಿದ್ದ ಕಾಂಗ್ರೆಸ್ ಇದ್ದಕ್ಕಿದ್ದಂತೆ ಈ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಏಕೆ? ಏಕೆ ಯು ಟರ್ನ್ ತೆಗೆದುಕೊಂಡಿದೆ? ಈ ಬಗ್ಗೆ ಪಕ್ಷದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಆರೋಪಿಸಿದ್ದರು. ಈ ಕೃಷಿ ಕಾಯ್ದೆಗಳ ಕುರಿತು ಏನೂ ತಿಳಿಯದೇ ರಾಹುಲ್ ಮಾತನಾಡಿದ್ದಾರೆ ಎಂದು ಟೀಕಿಸಿದ್ದರು.
ಇದಕ್ಕೆ ಉತ್ತರವಾಗಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications