ಸೋನಿಯಾ ಭೇಟಿ ಬಳಿಕ ಚಿದಂಬರಂ ಹೇಳಿದ್ದೇನು?
ನವದೆಹಲಿ, ಸೆಪ್ಟೆಂಬರ್ 23: ಸೋನಿಯಾ ಗಾಂಧಿ ಭೇಟಿ ಬಳಿಕ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.
ತಮ್ಮ ಪರವಾಗಿ ಅವರ ಕುಟುಂಬಸ್ಥರ ಬಳಿ ಟ್ವೀಟ್ ಮಾಡಿಸಿದ್ದು, ನಾನು ಕಾಂಗ್ರೆಸ್ನಷ್ಟೇ ಪ್ರಬಲನಾಗಿದ್ದೇನೆ ಎಂದು ಹೇಳಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳು ಪ್ರಕಟಗೊಳ್ಳುತ್ತಿವೆ. ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೆ ಪ್ರಬಲ ಮತ್ತು ಧೈರ್ಯವಾಗಿರುವುದೋ ಅಲ್ಲಿಯವರೆಗೆ ನಾನೂ ಪ್ರಬಲವಾಗಿ ಮತ್ತು ಧೈರ್ಯಶಾಲಿಯಾಗಿರುತ್ತೇನೆ ಎಂದಿದ್ದಾರೆ.
ಡಿಕೆ ಶಿವಕುಮಾರ್ ಭೇಟಿ ಮಾಡದೆ ಹೊರಟ ಸೋನಿಯಾ: ಕಾರಣಗಳು
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ಇಂದು ಭೇಟಿಯಾಗಿದ್ದರು. ಇಂದು ಬೆಳಗ್ಗೆ ತಿಹಾರ್ ಜೈಲಿಗೆ ಆಗಮಿಸಿದ ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರು ಕೇವಲ ಪಿ. ಚಿದಂಬರಂ ಅವರನ್ನು ಭೇಟಿಯಾಗಲಷ್ಟೇ ಸಾಧ್ಯವಾಯಿತು. ಡಿಕೆಶಿ ಅವರನ್ನು ಭೇಟಿಯಾಗಲು ಕೈ ಅಧಿನಾಯಕಿಗೆ ಅವಕಾಶ ಸಿಗಲಿಲ್ಲ.
ಈ ಇಬ್ಬರು ನಾಯಕರು, ಚಿದಂಬರಂ ಅವರಿಗೆ ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಿ ಧೈರ್ಯ ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. ಅವರ ಪುತ್ರ ಕಾರ್ತಿ ಚಿದಂಬರಂ ಕೂಡ ಇಂದು ತಂದೆಯನ್ನು ಭೇಟಿಯಾಗಿದ್ದರು.