"17 ತಿಂಗಳ ಲೆಕ್ಕ ಕೇಳುವ ನೀವು, 70 ವರ್ಷದ ನಿಮ್ಮ ಲೆಕ್ಕ ಕೊಡುತ್ತೀರಾ?"
ನವದೆಹಲಿ, ಫೆಬ್ರುವರಿ 13: ಮೋದಿ ಸರ್ಕಾರದಿಂದ ಅಭಿವೃದ್ಧಿಯ ಲೆಕ್ಕ ಕೇಳುವ ಪಕ್ಷ ಮೊದಲು ಈ ಬೇಡಿಕೆ ಇಡಲು ತಾವು ಯೋಗ್ಯರೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.
ಜಮ್ಮು ಹಾಗೂ ಕಾಶ್ಮೀರದಲ್ಲಿ ಹದಿನೇಳು ತಿಂಗಳಿನಿಂದ ಮೋದಿ ನೇತೃತ್ವದ ಅಭಿವೃದ್ಧಿ ಕೆಲಸಗಳ ಕುರಿತು ಪ್ರಶ್ನೆ ಕೇಳುವ ಮೊದಲು ತಲೆಮಾರುಗಳಿಂದ, 70 ವರ್ಷಗಳ ಆಡಳಿತ ನಡೆಸಿದ ಪಕ್ಷ ತನ್ನ ಲೆಕ್ಕವನ್ನು ಮೊದಲು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಜಮ್ಮು ಹಾಗೂ ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿದ ನಂತರ ಅಲ್ಲಿನ ಜನರಿಗೆ ನೀಡಿದ್ದ ಭರವಸೆಗಳ ಕುರಿತು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿಗೆ ಉತ್ತರ ನೀಡಿದ ಅಮಿತ್ ಶಾ, "ವಿಧಿ ರದ್ದುಗೊಳಿಸಿ ಹದಿನೇಳು ತಿಂಗಳು ಕಳೆದಿದೆ. ನೀವು ಆ ಹದಿನೇಳು ತಿಂಗಳುಗಳ ಲೆಕ್ಕ ಕೇಳುತ್ತಿದ್ದೀರಿ. ಆದರೆ ನೀವು 70 ವರ್ಷಗಳಲ್ಲಿ ಏನು ಮಾಡಿದಿರಿ ಎಂಬ ಲೆಕ್ಕವನ್ನು ನೀಡುತ್ತೀರಾ? ನೀವು ಸರಿಯಾಗಿ ಕೆಲಸ ಮಾಡಿದ್ದೀರಾ? ಎಂದು ಮರು ಪ್ರಶ್ನೆ ಮಾಡಿದ್ದಾರೆ.

"ನನಗೆ ನಿಮ್ಮ ಬೇಡಿಕೆಯಲ್ಲಿ ಯಾವುದೇ ಆಕ್ಷೇಪವಿಲ್ಲ. ನಾನು ಎಲ್ಲದರ ಲೆಕ್ಕವನ್ನೂ ನೀಡುತ್ತೇನೆ. ಆದರೆ ತಲೆಮಾರುಗಳ ಕಾಲ ಆಡಳಿತ ನಡೆಸಿದ ಪಕ್ಷ, ತಾವು ಏನು ಮಾಡಿದ್ದೇವೆ ಹಾಗೂ ಈ ಪ್ರಶ್ನೆ ಕೇಳಲು ನಾವು ಯೋಗ್ಯರೇ ಎಂಬುದನ್ನು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು" ಎಂದು ಹೇಳಿದ್ದಾರೆ.
ಕಾಶ್ಮೀರದ ಕುರಿತು ಮಾತನಾಡಿ, "ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕಾಶ್ಮೀರದಲ್ಲಿ ಸಾವಿರಾರು ಜನರು ಸತ್ತರು. ಕಣಿವೆ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಕಾಶ್ಮೀರದಲ್ಲಿ ಶಾಂತಿ ಎಂಬುದೇ ದೊಡ್ಡ ವಿಷಯ. ಆ ದಿನಗಳನ್ನು ನಾನು ನೆನಪಿಸಿಕೊಳ್ಳಲು ಇಷ್ಟ ಪಡುವುದಿಲ್ಲ. ಆ ದಿನಗಳು ನಮ್ಮ ಸರ್ಕಾರದಲ್ಲಿ ಮರಳುವುದಿಲ್ಲ" ಎಂದು ತಿಳಿಸಿದರು.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications