ಮಲ್ಯ ಬಂಧನ- ಬಿಡುಗಡೆ: ಮೋದಿ ಪ್ರತಿಕ್ರಿಯೆ ಏನು?
ಮದ್ಯದ ದೊರೆ ವಿಜಯ ಮಲ್ಯ ಅವರ ಬಂಧನ ಮತ್ತು ಬಿಡುಗಡೆ ಪ್ರಹಸನದ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು ಗೊತ್ತೆ..?
ನವದೆಹಲಿ, ಏಪ್ರಿಲ್ 19: ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಹಣವನ್ನು ಕೊಳ್ಳೆಹೊಡೆದವರು ತಾವು ಕೊಳ್ಳೆ ಹೊಡೆದ ಹಣವನ್ನು ಹಿಂದಿರುಗಿಸಲೇಬೇಕು... ಹೀಗೆಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಲಂಡನ್ನಿನ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರಿಂದ ಬಂಧಿಸಲ್ಪಟ್ಟು, ಮೂರೇ ಗಂಟೆಗಳಲ್ಲಿ ಜಾಮೀನನ್ನೂ ಪಡೆದ ಮದ್ಯದ ದೊರೆ ವಿಜಯ ಮಲ್ಯ ಅವರ ಕುರಿತೇ ಈ ಟ್ವೀಟ್ ಮಾಡಲಾಗಿದೆ ಎನ್ನಲಾಗುತ್ತಿದೆ.
"ಭ್ರಷ್ಟಾಚಾರ ಕೇವಲ ನಾವು ಕಷ್ಟಪಟ್ಟು ದುಡಿದ ಹಣವನ್ನಷ್ಟೇ ಕೊಳ್ಳೆಹೊಡೆಯುತ್ತಿಲ್ಲ, ಬದಲಾಗಿ ನಮ್ಮ ಘನತೆಯನ್ನೂ ಕೊಳ್ಳೆಹೊಡೆಯುತ್ತಿದೆ" ಎಂದು ಮೋದಿಯವರ ಟ್ವಿಟ್ಟರ್ ಫಾಲೋವರ್ ಒಬ್ಬರು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನರೇಂದ್ರ ಮೋದಿ, ಲೂಟಿ ಹೊಡೆದವರು ಆ ಹಣವನ್ನು ದೇಶಕ್ಕೆ ಹಿಂದಿರುಗಿಸಲೇ ಬೇಕು ಎಂದಿದ್ದಾರೆ.[ಮಲ್ಯ ಬಂಗಲೆಗೆ ಹೊಸ ವಾರಸ್ದಾರ, ಹೆಸ್ರು ಬದಲಿಸ್ತೀನಿ ಅಂತಾರ!]

ಏಪ್ರಿಲ್ 18 ರಂದು ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರಿಂದ ಬಂಧನಕ್ಕೊಳಗಾಗಿ ನಂತರ ವೆಸ್ಟ್ ಮಿನಿಸ್ಟರ್ ಕೋರ್ಟಿನಲ್ಲಿ ಜಾಮೀನು ಪಡೆದು ಹೊರಬಂದ ಮಲ್ಯ ಅವರ ಬಂಧನಕ್ಕೆ ಭಾರತವೇ ಕೋರಿತ್ತು. ಮೇ 17 ರಿಂದ ಮಲ್ಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿರುವ ಇಲ್ಲಿನ ನ್ಯಾಯಾಲಯ, ಅವರನ್ನು ಭಾರತಕ್ಕೆ ಹಸ್ತಾಂತರಿಸಬೇಕೆ, ಬೇಡವೆ ಎಂಬುದನ್ನು ನಿರ್ಧರಿಸಲಿದೆ.[ಹಾಸ್ಯ: ಮಲ್ಯಗೆ ಸಿಕ್ತು ಬೇಲು, ಪತ್ತೇದಾರಿ ಪ್ರತಿಭಾಗೆ ಸೋಲು]
ಒಟ್ಟಿನಲ್ಲಿ ಮೋದಿಯವರ ಟ್ವೀಟ್ ನಲ್ಲಿ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂಬ ಪರೋಕ್ಷ ಟಾಂಗ್ ಇರುವುದನ್ನು ಅಲ್ಲಗಲೆಯುವಂತಿಲ್ಲ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications