Breaking: ಇದೇನು ಗಿಮಿಕ್, ಮೋದಿ ಜೀ?; ಸಿಸೋಡಿಯಾ ವ್ಯಂಗ್ಯ
ನವದೆಹಲಿ, ಆಗಸ್ಟ್ 21: ವಿದೇಶ ಪ್ರವಾಸಕ್ಕೆ ನಿರ್ಬಂಧ ಹೇರಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಗೇಲಿ ಮಾಡಿರುವ ಮನೀಶ್ ಸಿಸೋಡಿಯಾ, "ನಿಮ್ಮ ಎಲ್ಲಾ ದಾಳಿಗಳು ವಿಫಲವಾಗಿವೆ. ದಾಳಿಯಲ್ಲಿ ನಿಮಗೆ ಏನೂ ಕಂಡುಬಂದಿಲ್ಲ. ಒಂದು ಪೈಸೆಯು ನಿಮಗೆ ಸಿಗಲಿಲ್ಲ. ಈಗ ನೀವು ಮನೀಶ್ ಸಿಸೋಡಿಯಾ ಪತ್ತೆಯಾಗಿಲ್ಲ ಎಂದು ಲುಕ್ಔಟ್ ಸುತ್ತೋಲೆ ಹೊರಡಿಸಿದ್ದೀರಿ" ಎಂದಿದ್ದಾರೆ.
ಮುಂದುವರಿದು, "ಇದೇನು ಗಿಮಿಕ್, ಮೋದಿ ಜೀ? ನಾನು ದೆಹಲಿಯಲ್ಲಿ ಮುಕ್ತವಾಗಿ ತಿರುಗುತ್ತಿದ್ದೇನೆ, ಎಲ್ಲಿಗೆ ಬರಬೇಕು ಹೇಳಿ? ನಾನು ಸಿಗುತ್ತಿಲ್ಲವೆ..?" ಎಂದು ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿದ್ದಾರೆ.

ದೆಹಲಿ ಮದ್ಯ ನೀತಿಯ ಕುರಿತು ಸಿಬಿಐ ತನಿಖೆಯನ್ನು ತೀವ್ರಗೊಳಿಸಿದ್ದು, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪ್ರಕರಣದ ಇತರ 12 ಜನರು ವಿದೇಶ ಪ್ರವಾಸ ಕೈಗೊಳ್ಳದಂತೆ ನಿರ್ಬಂಧ ಹೇರಿ ಕೇಂದ್ರ ಸಂಸ್ಥೆ ಸುತ್ತೋಲೆ ಹೊರಡಿಸಿದೆ.
ಶುಕ್ರವಾರ ಸಿಸೋಡಿಯಾ ಅವರ ಮನೆಯಲ್ಲಿ 14 ಗಂಟೆಗಳ ಕಾಲ ಶೋಧ ನಡೆಸಲಾಯಿತು. ಈ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, ಮನೀಶ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ದಾರೆ.
ಇನ್ನು, ಮನೀಶ್ ಸಿಸೋಡಿಯಾ, ನರೇಂದ್ರ ಮೋದಿಯವರ ಹಳೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ ಪ್ರಧಾನಿ (ಗುಜರಾತ್ ಮುಖ್ಯಮಂತ್ರಿಯಾಗಿ) ಆಗಿನ ಕೇಂದ್ರ ಸರ್ಕಾರ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜಕೀಯ ಸೇಡಿಗಾಗಿ ಸಿಬಿಐ ಗುಜರಾತ್ ಅಧಿಕಾರಿಗಳಿಗೆ ತೊಂದರೆ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

ಸಿಬಿಐ ತನಿಖೆಯ ನಡುವೆ, ಸಿಸೋಡಿಯಾ ಮತ್ತು ಇತರ ಎಎಪಿ ನಾಯಕರು ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಕ್ರಮವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸುವ ಕೇಂದ್ರ ಸರಕಾರದ ಯೋಜನೆಯನ್ನು ಬಹಿರಂಗಪಡಿಸುತ್ತದೆ ಎಂದು ಹೇಳುತ್ತಿದ್ದಾರೆ. ದೆಹಲಿ ಮದ್ಯ ನೀತಿಯ ಬಗ್ಗೆ ಬಿಜೆಪಿ ಮತ್ತು ಎಎಪಿ ನಡುವೆ ರಾಜಕೀಯ ಕೆಸರೆರಚಾಟ ನಡೆಯುತ್ತಿದೆ.
ಮನೀಶ್ ಸಿಸೋಡಿಯಾ ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದು, "ದೆಹಲಿ ಅಬಕಾರಿ ನೀತಿ ಸಂಪೂರ್ಣ ಪಾರದರ್ಶಕವಾಗಿದೆ. ಯಾವುದೇ ಹಗರಣ ನಡೆದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ದಾಳಿ ನಡೆದ ದಿನವೇ ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ತಿಳಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications