ಅಲೋಕ್ ವರ್ಮಾರನ್ನು ಅಮಾನತು ಮಾಡಿಲ್ಲ, ವಜಾನೂ ಮಾಡಿಲ್ಲ!
ನವದೆಹಲಿ, ಜನವರಿ 11 : ಇಡೀ ದೇಶದ ಸುದ್ದಿ ಕೇಂದ್ರಬಿಂದುವಾಗಿರುವ, ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿರುವ ಸಿಬಿಐನ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಅಮಾನತು ಮಾಡಲಾಗಿಲ್ಲ, ವಜಾ ಕೂಡ ಮಾಡಲಾಗಿಲ್ಲ. ಅವರನ್ನು ವರ್ಗಾವಣೆ ಮಾಡಲಾಗಿದೆಯಷ್ಟೇ.
ಆದರೆ, ಎಲ್ಲೆಡೆ ಅಲೋಕ್ ಕುಮಾರ್ ಅವರನ್ನು ಅನೈತಿಕವಾಗಿ ವಜಾ ಮಾಡಲಾಗಿದೆ, ಅವರನ್ನು ಅವರಿದ್ದ ಹುದ್ದೆಯಿಂದ ಕಿತ್ತು ಬಿಸಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ವಸ್ತುಸ್ಥಿತಿಯೇನು? ಆಯ್ಕೆ ಸಮಿತಿಯಲ್ಲಿ ನ್ಯಾಯಮೂರ್ತಿ ಸಿಕ್ರಿ ಅವರಿಂದ ಏನು ಅಭಿಪ್ರಾಯ ಬಂದಿದೆ ಎಂಬುದನ್ನು ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ ಮಾರ್ಕಡೇಯ್ ಕಾಟ್ಜು ಅವರು ವಿವರಿಸಿದ್ದಾರೆ.
ಭಾರೀ ಚರ್ಚೆಗೊಳಗಾಗಿರುವ ಮತ್ತು ಆಕ್ರೋಶಕ್ಕೂ ಒಳಗಾಗಿರುವ ಈ ಹೈ ಪ್ರೊಫೈಲ್ ಪ್ರಕರಣದ ಬಗ್ಗೆ, ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯಲ್ಲಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರೊಂದಿಗೆ, ಈ ವಿವಾದದ ಬಗ್ಗೆ ಮಾತನಾಡಿದ್ದು, ಅವರ ಅನುಮತಿಯನ್ನು ತೆಗೆದುಕೊಂಡೇ ಸ್ಪಷ್ಟನೆ ನೀಡಿರುವ ಬಗ್ಗೆ ಪ್ರಕಟಿಸಿದ್ದೇನೆ ಎಂದು ಮಾರ್ಕಡೇಯ್ ಕಾಟ್ಜು ಅವರು ಟ್ವೀಟ್ ಮಾಡಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಗೊಗೊಯ್ ಅವರು ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕರಾಗಿ ಅವರಿಗೆ ಸ್ಥಾನ ದೊರಕಿಸಿಕೊಟ್ಟ 24 ಗಂಟೆಗಳೊಳಗೆ, ನರೇಂದ್ರ ಮೋದಿ, ನ್ಯಾಯಮೂರ್ತಿ ಸಿಕ್ರಿ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿದ್ದ ಸಮಿತಿ, 2-1ರ ಬಹುಮತದೊಂದಿಗೆ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿದೆ.
ಕಾಟ್ಜು ಅವರೊಂದಿಗೆ ಸಿಕ್ರಿ ಆಡಿರುವ ಮಾತುಗಳೇನು? ಸಿಕ್ರಿ ಅವರು ಏನು ಸಮಜಾಯಿಷಿ ಕೊಟ್ಟಿದ್ದಾರೆ? ತೀರ್ಮಾನಕ್ಕೆ ಬರುವ ಮೊದಲು ಯಾಕೆ ಅಲೋಕ್ ವರ್ಮಾ ಅವರಿಗೆ ವಿಚಾರಣೆಗೊಳಪಡುವ ಅವಕಾಶ ನೀಡಲಿಲ್ಲ? ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ತೊಲಗಿಸಿ ಬೇರೆ ತತ್ಸಮಾನ ಹುದ್ದೆ ನೀಡಿದ್ದು ನ್ಯಾಯಯುತವೆ? ಇತ್ಯಾದಿ ಚರ್ಚೆ ನಡೆಯಲಿ. ಸಿಕ್ರಿ ಅವರು ಏನು ವಿವರಣೆ ಕೊಟ್ಟಿದ್ದಾರೆ ಎಂಬುದು ಕೆಳಗಿನಂತಿದೆ.

ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿತ್ತು
ಕೇಂದ್ರ ಜಾಗೃತ ಆಯೋಗ (ಸಿವಿಸಿ) ತನಗೆ ಸಿಕ್ಕ ದಾಖಲಾತಿಗಳ ಆಧಾರದ ಮೇಲೆ, ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಲೋಕ್ ವರ್ಮಾ ಅವರ ವಿರುದ್ಧ ಕೆಲ ಗಂಭೀರ ಆರೋಪಗಳಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ದಾಖಲಿಸಿತ್ತು. (ಇದಕ್ಕೂ ಮೊದಲು ಕೇಂದ್ರ ಜಾಗೃತ ಆಯೋಗ ನೀಡಿದ ವರದಿಯ ಆಧಾರದ ಮೇಲೆ ಅಲೋಕ್ ವರ್ಮಾ ಅವರನ್ನು ಬಲವಂತದ ರಜಾ ಮೇಲೆ ಕಳಿಸಲಾಗಿತ್ತು.)

ವಿವರಣೆ ನೀಡಲು ಅವಕಾಶ ನೀಡಿತ್ತು
ಆದರೆ, ಅಲೋಕ್ ವರ್ಮಾ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ನಂತರ, ಅವರ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ದಾಖಲಿಸುವ ಮೊದಲು ಅಲೋಕ್ ವರ್ಮಾ ಅವರ ವಾದವನ್ನು ಆಲಿಸಿತ್ತು ಮತ್ತು ವಿವರಣೆ ನೀಡಲು ಸಾಕಷ್ಟು ಸಮಯಾವಕಾಶವನ್ನೂ ನೀಡಿತ್ತು.

ತೀರ್ಪು ಬರುವವರೆಗೆ ಹುದ್ದೆಯಲ್ಲಿ ಇರಬಾರದು
ದಕ್ಕಿರುವ ದಾಖಲಾತಿಗಳನ್ನು ಪರಿಶೀಲಿಸಿದ ನಂತರ, ಅವುಗಳ ಆಧಾರದ ಮೇಲೆ ಮೇಲ್ನೋಟಕ್ಕೆ ಅಲೋಕ್ ವರ್ಮಾ ಅವರ ವಿರುದ್ಧದ ಭ್ರಷ್ಟಾಚಾರದ ಕೆಲ ಗುರುತರ ಆರೋಪಗಳು ಸಾಬೀತಾಗಿರುವುದರಿಂದ ಸಂಪೂರ್ಣ ತನಿಖೆ ನಡೆದು ಅಂತಿಮ ತೀರ್ಪು ಬರುವವರೆಗೆ ಅಲೋಕ್ ವರ್ಮಾ ಅವರು ನಿರ್ದೇಶಕ ಸ್ಥಾನದಲ್ಲಿ ಇರಬಾರದು ಎಂಬುದು ಸಿಕ್ರಿ ಅವರ ಅಭಿಪ್ರಾಯ. ಬದಲಾಗಿ ಅವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಬೇಕು ಎಂಬುದು ಅವರ ನಿಲುವು.

ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ
ಅಲೋಕ್ ವರ್ಮಾ ಅವರನ್ನು, ಕೆಲವರು ಹೇಳುತ್ತಿರುವಂತೆ ಮತ್ತು ಗ್ರಹಿಸಿರುವಂತೆ ಸೇವೆಯಿಂದ ತೆಗೆದುಹಾಕಿಲ್ಲ. ಅವರನ್ನು ಕೆಲಸದಿಂದ ಅಮಾನತೂ ಮಾಡಿಲ್ಲ, ಆದರೆ ತತ್ಸಮಾನ ಸಂಬಳ ಮತ್ತು ಇತರ ಸೌಲಭ್ಯಗಳಿರುವ ಮತ್ತೊಂದು ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. (ಆದರೆ, ಅವರನ್ನು ಅಮಾನತು ಮಾಡಲಾಗಿದೆ, ವಜಾ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವುದು ತಪ್ಪು ಎಂಬುದು ಸಿಕ್ರಿ ಅವರ ಅಭಿಪ್ರಾಯ.)

ಅಮಾನತಿನಲ್ಲಿಡಲು ಅವಕಾಶವಿದೆ
ಆಯ್ಕೆ ಸಮಿತಿಯ ಮುಂದೆ ವಿಚಾರಣೆಗೆ ಬರಲು ಅಲೋಕ್ ವರ್ಮಾ ಅವರಿಗೆ ಅವಕಾಶ ನೀಡಲಾಗಿಲ್ಲ ಎಂಬ ವಾದದ ಬಗ್ಗೆ, ಅಲೋಕ್ ವರ್ಮಾ ಅವರು ಆರೋಪಿ ಸ್ಥಾನದಲ್ಲಿರುವುದರಿಂದ ಯಾವುದೇ ವಿಚಾರಣೆ ನಡೆಸದೆ, ವಾದ ಮಂಡಿಸಲು ಅವಕಾಶವನ್ನೂ ನೀಡದೆ ಅವರನ್ನು ವಿಚಾರಣೆ ಮುಗಿಯುವವರೆಗೆ ಅಮಾನತಿನಲ್ಲಿಡಬಹುದು ಎಂಬುದು ಗೊತ್ತಿರುವ ಸಂಗತಿ. ಯಾವುದೇ ವಿಚಾರಣೆ ನಡೆಸದೆ ಅಥವಾ ವಾದ ಮಂಡಿಸಲು ಅವಕಾಶ ನೀಡದೆ ವಜಾ ಮಾಡಬಾರದು ಅಷ್ಟೇ.

ಅವರನ್ನು ಅಮಾನತಿನಲ್ಲೂ ಇಡಲಾಗಿಲ್ಲ
ಅಲೋಕ್ ವರ್ಮಾ ಅವರನ್ನು ವಜಾ ಮಾಡುವುದು ಅತ್ಲಾಗಿರಲಿ, ಅವರನ್ನು ಅಮಾನತಿನಲ್ಲೂ ಇಡಲಾಗಿಲ್ಲ. ಅವರನ್ನು ತತ್ಸಮಾನ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ ಎಂದು ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications