ಕೃಷಿ ಮಸೂದೆ ಬಗ್ಗೆ ರಾಹುಲ್ ಹಳೆಯ ಭಾಷಣ ಅಪ್ಲೋಡ್ ಮಾಡಿದ ಜೆಪಿ ನಡ್ಡಾ
ನವದೆಹಲಿ, ಡಿಸೆಂಬರ್ 27:ಕೃಷಿ ಮಸೂದೆ ಕುರಿತು ರಾಹುಲ್ ಗಾಂಧಿ ಮಾಡಿದ್ದ ಭಾಷಣದ ತುಣಕನ್ನು ಕೇಂದ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.
ಲೋಕಸಭೆಯಲ್ಲಿ ಕೃಷಿ ಮಸೂದೆ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಈ ಕೃಷಿ ಕಾಯ್ದೆಗಳಿಂದಾಗಿ ರೈತರಿಗೆ ಮಧ್ಯವರ್ತಿಗಳಿಂದ ಮುಕ್ತಿ ದೊರೆಯಲಿದ್ದು, ತಮ್ಮ ಉತ್ಪನ್ನಗಳನ್ನು ಉದ್ಯಮಿಗಳಿಗೆ ನೇರವಾಗಿ ಮಾರಾಟ ಮಾಡಬಹುದು ಎಂದು ಹೇಳಿರುವುದು ಕಂಡುಬಂದಿದೆ.
ಕನಿಷ್ಠ ಬೆಂಬಲ ಬೆಲೆ ಮುಂದುವರಿಕೆ: ರೈತರ ಜಮೀನನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್
ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.
ये क्या जादू हो रहा है राहुल जी?
— Jagat Prakash Nadda (@JPNadda) December 27, 2020
पहले आप जिस चीज़ की वकालत कर रहे थे, अब उसका ही विरोध कर रहे है।
देश हित, किसान हित से आपका कुछ
लेना-देना नही है।आपको सिर्फ़ राजनीति करनी है।लेकिन आपका दुर्भाग्य है कि अब आपका पाखंड नही चलेगा। देश की जनता और किसान आपका दोहरा चरित्र जान चुके है। pic.twitter.com/Uu2mDfBuIT
ರಾಹುಲ್ ಅವರೇ ಇದೇನು ಮ್ಯಾಜಿಕ್ ನಡೆಯುತ್ತಿದೆ, ಈ ಹಿಂದೆ ನೀವೇ ಒಪ್ಪಿದ್ದನ್ನು ಈಗ ನೀವೇ ವಿರೋಧಿಸುತ್ತಿದ್ದೀರಿ, ನಿಮಗೆ ದೇಶದ, ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಏನೂ ಆಗಬೇಕಿಲ್ಲ, ನಿಮಗೆ ಕೇವಲ ರಾಜಕಾರಣವಷ್ಟೇ ಮಾಡಬೇಕಿದೆ. ದೇಶದ ಜನತೆಗೆ, ರೈತರಿಗೆ ನಿಮ್ಮ ದ್ವಿಮುಖ ನೀತಿ ಅರ್ಥವಾಗಿದೆ ಎಂದು ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
ಈಗ ಕೃಷಿ ಕಾಯ್ದೆಯನ್ನು ವಿರೋಧಿಸುತ್ತಿರುವ ರೈತರನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಇದೇ ವಿಷಯವನ್ನಿಟ್ಟುಕೊಂಡು ಆರೋಪ ಮಾಡಿರುವ ಜೆಪಿ ನಡ್ಡಾ, ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ ಎಂದು ಆರೋಪಿಸಿದ್ದಾರೆ.
ರೈತರ ಪ್ರತಿಭಟನೆಯ ವಿಷಯದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.