ಯುಯು ಲಲಿತ್ ಪ್ರಕರಣದಿಂದ ಹಿಂದೆ ಸರಿದಿದ್ದಕ್ಕೆ ವಿಹಿಂಪ ಹೇಳಿದ್ದೇನು?
ನವದೆಹಲಿ, ಜನವರಿ 10: ಅಯೋಧ್ಯಾ ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆಯಲ್ಲಿ ಐವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾಗಿದ್ದ ಉದಯ್ ಯು.ಲಲಿತ್ ಹಿಂದಕ್ಕೆ ಸರಿದಿರುವುದು ಸದ್ಯಕ್ಕಂತೂ ಸುದ್ದಿಯಾಗಿದೆ. ಇದಕ್ಕೆ ಕಾರಣ ಆಗಿರುವುದು ಹಿತಾಸಕ್ತಿ ಸಂಘರ್ಷದ ಆರೋಪ. ಈ ಬಗ್ಗೆ ವಿಶ್ವಹಿಂದೂ ಪರಿಷದ್ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠದಲ್ಲಿ ಒಬ್ಬರಾದ ನ್ಯಾಯಮೂರ್ತಿ ಉದಯ್ ಯು.ಲಲಿತ್ ಅವರ ಮೇಲೆ ಬಂದಿರುವ ಆಕ್ಷೇಪ ಬಹಳ 'ನೋವಿನ' ಸಂಗತಿ ಹಾಗೂ ಸತ್ಯಕ್ಕೆ ದೂರವಾದದ್ದು. ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆ ಹಂತದಲ್ಲಿ ಇರಬಹುದು ಅಥವಾ ಅರ್ಜಿ ಸಲ್ಲಿಕೆಯಲ್ಲಿ ಇರಬಹುದು ಅವರೆಂದೂ ವಕೀಲಿಕೆ ಮಾಡಿಲ್ಲ ಎನ್ನಲಾಗಿದೆ.

1997ರಲ್ಲಿ ಲಲಿತ್ ಅವರು ಕಲ್ಯಾಣ್ ಸಿಂಗ್ ಗೆ ವಕೀಲರಾಗಿದ್ದರು. ಅದು ನ್ಯಾಯಾಂಗ ನಿಂದನೆ ಪ್ರಕರಣ. ಅದಕ್ಕೂ ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆಗೂ ಯಾವುದೇ ಸಂಬಂಧ ಇಲ್ಲ. ಈ ಪ್ರಕರಣವನ್ನು ಇನ್ನಷ್ಟು ಮುಂದಕ್ಕೆ ತಳ್ಳುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಲಸಕ್ಕೆ ಬಾರದ ವಿಚಾರವೊಂದನ್ನು ಮುಂದು ಮಾಡಿ, ರಾಮ ಜನ್ಮಭೂಮಿ ವಿಚಾರಣೆಯನ್ನು ಎದುರು ಪಕ್ಷದವರು ಮುಂದಕ್ಕೆ ಹಾಕಿಸುತ್ತಾರೆ ಎಂಬ ಆತಂಕ ನಿಜವಾಯಿತು. ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿರುವುದು ಮೇಲ್ನೋಟಕ್ಕೆ ನಿಷ್ಪ್ರಯೋಜಕ. ಈ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿಗಳ ವಿವೇಚನೆಯೇ ಅಂತಿಮ. ಆ ಪೀಠದ ಬಗ್ಗೆ ನಿರ್ಧಾರ ಹಾಗೂ ಯಾರು ಅಲ್ಲಿ ಕೂರಬೇಕು ಎಂಬುದನ್ನು ಅವರೇ ತೀರ್ಮಾನ ಮಾಡುತ್ತಾರೆ ಎಂದು ವಿಎಚ್ ಪಿ ಹೇಳಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications