ವಿಶ್ಲೇಷಣೆ : ಅಕಸ್ಮಾತ್ ಚುನಾವಣೋತ್ತರ ಸಮೀಕ್ಷೆ ಸತ್ಯವಾದರೆ...
ನವದೆಹಲಿ, ಡಿಸೆಂಬರ್ 08: ರಾಜಸ್ಥಾನ ಮತ್ತು ತೆಲಂಗಾಣಗಳಲ್ಲಿ ವಿಧಾನಸಭೆ ಚುನಾವಣೆ ಅಂತ್ಯವಾಗುತ್ತಿದ್ದಂತೆಯೇ ಎಲ್ಲರೂ ಉಸಿರು ಬಿಗಿ ಹಿಡಿದು ಕಾಯುತ್ತಿದ್ದುದು ಚುನಾವಣೋತ್ತರ ಸಮೀಕ್ಷೆಗೆ.
ಬಹುತೇಕ ಸಂದರ್ಭದಲ್ಲಿ ಎಕ್ಸಿಟ್ ಪೋಲ್ ಗಳು ಸತ್ಯವಾಗುತ್ತವೆ ಎಂಬ ಕಾರಣಕ್ಕೆ ಇವುಗಳ ಬಗ್ಗೆ ಕುತೂಹಲ ಜಾಸ್ತಿ. ಅದೇ ರೀತಿ ಡಿಸೆಂಬರ್ 07 ರಂದು ಐದು ರಾಜ್ಯಗಳ ಚುನಾವಣೆಯ ಮತದಾನದ ಸಮಯ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಲೆಕ್ಕಾಚಾರ ಆರಂಭವಾದವು.
ರಾಜಸ್ಥಾನ, ತೆಲಂಗಾಣ, ಮಿಜೋರಾಂ ಗಳಲ್ಲಿ ಬಹುಪಾಲು ಸಮೀಕ್ಷೆಗಳು ಒಂದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢಗಳಲ್ಲಿ ವ್ಯತಿರಿಕ್ತ ಸಮೀಕ್ಷೆಗಳು ಹೊರಬಿದ್ದಿವೆ. ಕೆಲವು ಏಜನ್ಸಿಗಳು ಕಾಂಗ್ರೆಸಿಗೆ ಬಹುಮತ ಎಂದಿದ್ದರೆ, ಕೆಲವು ಬಿಜೆಪಿಗೆ ಎಂದಿವೆ.
ಸಮೀಕ್ಷೆಯ ಒಟ್ಟಾರೆ ಚಿತ್ರಣ ವಿಮರ್ಶಿಸುವುದಾದರೆ, ಈ ಬಾರಿ ಯಾವ ರಾಜ್ಯಗಳಲ್ಲೂ ಬಿಜೆಪಿ ಆಧಿಪತ್ಯ ಸ್ಥಾಪಿಸುವುದಕ್ಕೆ ಸಾಧ್ಯವಿಲ್ಲ! ಅಕಸ್ಮಾತ್ ಈ ಎಕ್ಸಿಟ್ ಪೋಲ್ ಸತ್ಯವೇ ಆದರೆ... ಲೋಕಸಭಾ ಚುನಾವಣೆಯ ಮೇಲೆ ಇದು ಬೀರುವ ಪರಿಣಾಮವೇನು?

ಯಾವ ರಾಜ್ಯದಲ್ಲಿ ಯಾವ ಸರ್ಕಾರ?
ಮಧ್ಯಪ್ರದೇಶದಲ್ಲಿ 'ಅತಂತ್ರ ಸರ್ಕಾರ'ವಾದರೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಪಕ್ಕಾ! ಇನ್ನು ಛತ್ತೀಸ್ ಗಢದಲ್ಲಿ 50-50! ತೆಲಂಗಾಣದಲ್ಲಿ ಟಿಆರ್ ಎಸ್ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾದರೆ, ಮಿಜೋರಾಂ ನಲ್ಲಿ ಮೂರು ಅವಧಿಯ ನಂತರ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ.

ಬಿಜೆಪಿಗೆ ಆಘಾತ!
ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಈ ಬಾರಿ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೂರೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ. ಬಿಜೆಪಿ ವಿರುದ್ಧ ಇದ್ದ ಆಡಳಿ ವಿರೋಧಿ ಅಲೆಯಿಂದಾಗಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದೇ ಆದರೆ ಇದು ಲೋಕಸಭಾ ಚುನಾವಣೆಯ ಹೊತ್ತಲ್ಲಿ ಭಾರೀ ಮುಖಭಂಗವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದ ಹೊರತಾಗಿಯೂ ಮೋದಿ ಅಲೆ ಕೆಲಸ ಮಾಡಿಲ್ಲ ಎಂಬುದು ದಿಟವಾದಂತಾಗುತ್ತದೆ.

ಲೋಕಸಭೆ ಚುನಾವಣೆ ಮೇಲೆ ಪರಿಣಾಮ?
ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಗಳು ಹೇಳಿದಂತೆಯೇ ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಬೇಕಾಗಬಹುದು. ಮಧ್ಯಪ್ರದೇಶದಲ್ಲಿ 29, ರಾಜಸ್ಥಾನದಲ್ಲಿ 25, ಛತ್ತೀಸ್ ಗಢದಲ್ಲಿ 11 ಲೋಕಸಭಾ ಕ್ಷೇತ್ರಗಳಿವೆ. ಈ ಮೂರೂ ರಾಜ್ಯಗಳಲ್ಲೂ ಬಿಜೆಪಿ ಸೋತರೆ, ಲೋಕಸಭಾ ಚುನಾವಣೆಯಲ್ಲೂ ಇದು ಮರುಕಳಿಸಬಹುದು. ಈಗಾಗಲೇ ಬಿಜೆಪಿ ವಿರುದ್ಧ ಈ ರಾಜ್ಯಗಳಲ್ಲಿದ್ದ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಂತಿದೆ. ಲೋಕಸಭಾ ಚುನಾವಣೆಯ ಸಮಯದಲ್ಲೂ ಇದೇ ರೀತಿಯ ಪ್ರಚಾರ ಕ್ರಮವನ್ನು ಅನುಸರಿಸಿದರೆ ಬಿಜೆಪಿಗೆ ಕಷ್ಟ ತಪ್ಪಿದ್ದಲ್ಲ.

ಯಾವ್ಯಾವ ರಾಜ್ಯಗಳಲ್ಲಿ ಚುನಾವಣೆ
ಛತ್ತೀಸ್ ಗಢ(ನವೆಂಬರ್ 12, 20), ಮಧ್ಯಪ್ರದೇಶ ಮತ್ತು ಮಿಜೋರಾಂ(ನವೆಂಬರ್ 28), ರಾಜಸ್ಥಾನ ಮತ್ತು ತೆಲಂಗಾಣ(ಡಿಸೆಂಬರ್ 07) ರಂದು ಚುನಾವಣೆ ನಡೆದಿತ್ತು. ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದ್ದು, ಚುನಾವಣೋತ್ತರ ಸಮೀಕ್ಷೆಗಳು ನಿಜವಾದರೆ ಬಿಜೆಪಿಗೆ ಆತ್ಮಾವಲೋಕನದ ಕಾಲ ಇದಾಗಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications