ರಾಹುಲ್ ಗಾಂಧಿ ಮದುವೆ ಆಗ್ತಾರಾ? ಉತ್ತರಕ್ಕೆ ಈ ವಿಡಿಯೋ ನೋಡಿ!
Recommended Video

ನವದೆಹಲಿ, ಅಕ್ಟೋಬರ್ 27: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮದುವೆ ಆಗ್ತಾರಾ? ಆಗೋದಾದ್ರೆ ಯಾವಾಗ? ಯಾರನ್ನ? ಎಂಬಿತ್ಯಾದಿ ಪ್ರಶ್ನೆಗಳು ಅದೆಷ್ಟೋ ಸಾರಿ ಚರ್ಚೆಯಾಗಿವೆ. ಆದರೆ ತಮ್ಮ ಮದುವೆಗೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರಿಸಿದ ರಾಹುಲ್ ಗಾಂಧಿಯವರ ಜಾಣ್ಮೆಯ ಹೇಳಿಕೆ ಗೊಂದಲವನ್ನುಂಟು ಮಾಡಿದೆ.
ನವದೆಹಲಿಯಲ್ಲಿ ಅ.26 ರಂದು ನಡೆದ ಪಿಎಚ್ ಡಿ ಆನ್ಯುವಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಕ್ಸರ್ ವಿಜೇಂದರ್ ಸಿಂಗ್ ಪ್ರಶ್ನೆಗೆ ಉತ್ತರಿಸಿದರು.

"ನೀವು ಯಾವಾಗ ಮದುವೆ ಆಗುತ್ತೀರಾ?" ಎಂಬ ವಿಜೇಂದರ್ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, "ಆಗಬೇಕೆಂದಿರುವುವದು ಆಗಿಯೇ ಆಗುತ್ತದೆ. ಆದರೆ ನನಗೆ ನಂಬಿಕೆ ಇರುವುವದು ಗುರಿಯ ಮೇಲೆ(ಜಬ್ ಹೋಗಿ ತೋ ಹೋಗಿ, ಐ ಬಿಲೀವ್ ಇನ್ ಡೆಸ್ಟಿನಿ)" ಎಂಬ ಅಡ್ಡಗೋಡೆಯ ಮೇಲೆ ದೀಪವಿಟ್ಟಂಥ ಉತ್ತರ ನೀಡಿದ್ದಾರೆ. ರಾಹುಲ್ ತಮ್ಮ ಮದುವೆಯ ಕುರಿತು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ.
#WATCH: Congress Vice President Rahul Gandhi responds to Boxer Vijender Singh's question on sports, also answers "When will he get married?" pic.twitter.com/uyMEO155vT
— ANI (@ANI) October 26, 2017
ಒಟ್ಟಿನಲ್ಲಿ ಕಾಂಗ್ರೆಸ್ ಯುವರಾಜ ಮದುವೆಯಾಗುತ್ತಾರಾ? ಯಾವಾಗ ಎಂಬಿತ್ಯಾದಿ ಪ್ರಶ್ನೆಗಳಿಗೆ ರಾಹುಲ್ ಅವರು ಕೊಟ್ಟ ಪ್ರತಿಕ್ರಿಯೆಯಿಂದಲೇ ಜನರು ಉತ್ತರ ಹುಡುಕಿಕೊಳ್ಳಬೇಕಷ್ಟೆ!
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications