EVM ಪರಿಚಯಿಸಿದ್ದು ಯಾರು? ಸಿಬಲ್ ಗೆ ಸುಪ್ರೀಂ ಪ್ರಶ್ನೆ!
EVM ಅನ್ನು ಪರಿಚಯಿಸಿದ್ದು ನಿಮ್ಮದೇ ಪಕ್ಷವಲ್ಲವೇ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಚುನಾವಣೆಯ ಸೋಲಿಗೆ EVM ಕಾರಣ ಎಂದಿದ್ದ ಅವರ ನಡೆಗೆ ಕೋರ್ಟ್ ನ ಈ ಪ್ರಶ್ನೆ ಮುಖಭಂಗವನ್ನುಂಟು ಮಾಡಿದೆ.
ನವದೆಹಲಿ, ಏಪ್ರಿಲ್ 14: "EVM ಅನ್ನು ಪರಿಚಯಿಸಿದ್ದು ಯಾರು..? ಮೊಟ್ಟಮೊದಲ ಬಾರಿಗೆ ನಿಮ್ಮ ಪಕ್ಷವೇ ಅಲ್ಲವೆ EVM (Elctronic Voting Machine) ಅನ್ನು ಭಾರತದಲ್ಲಿ ಪರಿಚಯಿಸಿದ್ದು?" ಹೀಗೆಂದು ಕಾಂಗ್ರೆಸ್ ಮುಖಂಡ ಮತ್ತು ಹಿರಿಯ ವಕೀಲ ಕಪೀಲ್ ಸಿಬಲ್ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಪಂಚ ರಾಜ್ಯಗಳ ಚುನಾವಣೆಯ ನಂತರ ಹಲವು ಪಕ್ಷಗಳು EVM ಕಾರ್ಯದಕ್ಷತೆಯ ಕುರಿತು ತಕರಾರೆತ್ತಿದ್ದವು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. EVM ಗಳು ದೋಷಪೂರಿತವಾಗುವ ಸಾಧ್ಯತೆ ಇರಬಹುದು ಎಂಬ ಕಾಂಗ್ರೆಸ್ ಸೇರಿದಂತೆ 10 ಕ್ಕೂ ಹೆಚ್ಚು ಪಕ್ಷಗಳ ದೂರಿಗೆ ಕಪಿಲ್ ಸಿಬಲ್ ಸಹ ಬೆಂಬಲ ಸೂಚಿಸಿದ್ದರು.[ಬಿಜೆಪಿ ಗೆಲುವಿಗೆ ಇವಿಎಂ ಲೋಪ ಎನ್ನುತ್ತಿದ್ದ ಕೇಜ್ರಿವಾಲ್ ಈಗ ಏನು ಹೇಳ್ತಾರೋ?]
EVM ಕಾರ್ಯದಕ್ಷತೆಯ ಬಗ್ಗೆ ನಮಗೆ ನಂಬಿಕೆಯಿಲ್ಲ. ಅವು ಹ್ಯಾಕ್ ಆಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಇನ್ನು ಮೇಲೆ ಮತದಾನ ದೃಢೀಕರಣ ಯಂತ್ರವನ್ನೂ (VVPAT) ಉಪಯೋಗಿಸಬೇಕು ಎಂದು ದೂರು ನೀಡಿದ ಪಕ್ಷಗಳು ನ್ಯಾಯಾಲಯದಲ್ಲಿ ಮನವಿ ಮಾಡಿದ್ದವು.
ಕುಣಿಯೋಕೆ ಬಾರದವನು ನೆಲ ಡೊಂಕು ಅಂದನಂತೆ ಎಂಬ ಟೀಕೆಯೂ ಆ ಸಂದರ್ಭದಲ್ಲಿ ಎಲ್ಲೆಡೆ ಹುಟ್ಟಿಕೊಂಡಿತ್ತು!

ಸುಪ್ರೀಂ ಗಂಭೀರ ಪ್ರಶ್ನೆ
ದಕ್ಷಿಣ ಅಮೆರಿಕವನ್ನು ಬಿಟ್ಟೆ ಬೇರೆ ಯಾವ ದೇಶವೂ EVM ಬಳಸುತ್ತಿಲ್ಲ, ಇಂದಿಗೂ ಮತದಾನಕ್ಕೆ ಎಲ್ಲ ದೇಶಗಳೂ ಸಾಂಪ್ರದಾಯಿಕ ವಿಧಾನವನ್ನೇ ಬಳಸುತ್ತಿವೆ ಎಂದಿದ್ದ ಸಿಬಲ್ ಮಾತಿಗೆ ಕೋರ್ಟ್ ಛೀಮಾರಿಹಾಕಿದೆ. EVM ಅನ್ನು ನಿಮ್ಮ ಪಕ್ಷವೇ ಪರಿಚಯಿಸಿದ್ದು ಎಂಬುದು ಗೊತ್ತಿದ್ದರೂ, ಯಾವ ದೇಶವೂ EVM ಬಳಸುತ್ತಿಲ್ಲ ಎಂದು ಯಾವ ಆಧಾರದ ಮೇಲೆ ಹೇಳಿದಿರಿ ಎಂದು ಅವರನ್ನು ಗಂಭೀರವಾಗಿ ಪ್ರಶ್ನಿಸಿದೆ.[ಇವಿಎಂ ಟ್ಯಾಂಪರ್ ಮಾಡಿ ತೋರಿಸಿ - ಇಸಿ ಸವಾಲ್]

ಅಮರೀಂದರ್ ವಿರೋಧ
EVM ಕುರಿತು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ಆರೋಪಕ್ಕೆ ಹಲವು ಕಾಂಗ್ರೆಸ್ಸಿಗರೇ ಬೆಂಬಲ ನೀಡಿರಲಿಲ್ಲ. ಪಂಜಾಬಿನ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಅಕಸ್ಮಾತ್ EVM ನಲ್ಲಿ ದೋಷವಿದ್ದಿದ್ದರೆ ಪಂಜಾಬಿನಲ್ಲಿ ಕಾಂಗ್ರೆಸ್ ಬದಲು ಅಕಾಲಿದಳ ಅಧಿಕಾರಕ್ಕೆ ಬಂದಿರುತ್ತಿತ್ತು, ಇಂಥ ಆರೋಪಗಳಿಗೆ ಅರ್ಥವಿಲ್ಲ ಎಂದಿದ್ದರು.[EVM ನಲ್ಲಿ ಸಮಸ್ಯೆ ಇದ್ದಿದ್ದರೆ ಕಾಂಗ್ರೆಸ್ ಗೆಲ್ಲುತ್ತಿರಲಿಲ್ಲ!: ಅಮರೀಂದರ್]

ಇದು ಅನರ್ಥ ಆರೋಪ ಎಂದಿದ್ದ ಮೋಯ್ಲಿ
"EVM ನಲ್ಲಿ ದೋಷವಿದೆ ಎಂಬ ಮಾತಿಗೆ ಅರ್ಥವಿಲ್ಲ. EVM ಅನ್ನು ನಾನು ಕಾನೂನು ಸಚಿವನಾಗಿದ್ದಾಗಲೇ ಕಾರ್ಯರೂಪಕ್ಕೆ ತಂದಿದ್ದು. ಆ ಸಮಯದಲ್ಲೂ ಈ ಬ್ಗಗೆ ವ್ಯಾಪಕ ಟೀಕೆ ಎದುರಾಗಿತ್ತು. ಆದರೆ ಸರಿಯಾದ ಪರೀಕ್ಷೆಯ ನಂತರವೇ ಅದನ್ನು ಕಾರ್ಯರೂಪಕ್ಕಿಳಿಸಿದ್ದೇವೆ" ಎಂದು ಮಾಜಿ ಕಾನೂನು ಸಚಿವ ವೀರಪ್ಪ ಮೋಯ್ಲಿ ಹೇಳಿದ್ದರು.[ಸೋಲಿಗೆ ಇವಿಎಂ ಹೊಣೆಯಲ್ಲ: ವೀರಪ್ಪ ಮೋಯ್ಲಿ]

ಅಪರ್ಣಾ ಯಾದವ್ ಆರೋಪ
ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಕಿರಿ ಸೊಸೆ ಅಪರ್ಣಾ ಯಾದವ್, ತಮ್ಮ ಸೋಲಿಗೆ EVM ಖಂಡಿತ ಕಾರಣವಲ್ಲ, ನಮ್ಮದೇ ಪಕ್ಷದ ಕೆಲ ಸದಸ್ಯರ ನಂಬಿಕೆ ದ್ರೋಹವೇ ನನ್ನ ಸೋಲಿಗೆ ಕಾರಣ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದರು.[ನನ್ನ ಸೋಲಿಗೆ ಕಾರಣ EVM ಅಲ್ಲ, ನಂಬಿಕೆ ದ್ರೋಹ: ಅಪರ್ಣಾ ಯಾದವ್]

EVM ದೂಷಿಸಿದ್ದವರು
ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಉಳಿದ ಪಕ್ಷಗಳ ಕಳಪೆ ಪ್ರದರ್ಶನದ ನಂತರ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ಹಲವು ಗಣ್ಯರು EVM ಯಂತ್ರದ ಕಾರ್ಯದಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.[ಉಪ ಚುನಾವಣೆ ಫಲಿತಾಂಶದ ಬಗ್ಗೆ ತಕರಾರು ತೆಗೆಯುವಂತೆಯೇ ಇಲ್ಲ]
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications