ರಾಹುಲ್ ಗಾಂಧಿ ಮೇಲೆ ಕೇಂದ್ರ ಬೇಹುಗಾರಿಕೆ ಮಾಡ್ತಿದೆಯಾ?
ನವದೆಹಲಿ, ಆಗಸ್ಟ್ 08 : ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋಗಿದ್ದಾಗ ರಕ್ಷಣಾ ಸಿಬ್ಬಂದಿಯನ್ನು ಏಕೆ ಕರೆದುಕೊಂಡು ಹೋಗಿರಲಿಲ್ಲ. ಅಸಲಿಗೆ ಅವರು ಹೋಗಿದ್ದಾದರೂ ಎಲ್ಲಿಗೆ? ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ತಿನಲ್ಲಿ ಮಂಗಳವಾರ ಕೇಳಿರುವುದು ಕಾಂಗ್ರೆಸ್ ಪಕ್ಷಯ ಕಣ್ಣು ಕೆಂಪಾಗುವಂತೆ ಮಾಡಿದೆ.
ರಾಹುಲ್ ಅವರು ಕಳೆದ ಎರಡು ವರ್ಷಗಳಲ್ಲಿ 6 ಬಾರಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಅವರು 72 ದಿನಗಳ ಕಾಲ ವಿದೇಶದಲ್ಲಿ ವಿಹರಿಸಿದ್ದಾರೆ. ಅಲ್ಲಿಗೆ ಹೋದಾಗ ಅವರು ಸ್ಪೆಷಲ್ ಪ್ರೊಕೆಕ್ಷನ್ ಗ್ರೂಪ್ ರಕ್ಷಣೆ ಪಡೆದಿರಲಿಲ್ಲ ಎಂದು ರಾಜನಾಥ್ ಸಿಂಗ್ ಅವರು ಲೋಕಸಭೆಯಲ್ಲಿ ಪ್ರಶ್ನಿಸಿದ್ದಾರೆ.

ರಾಜನಾಥ್ ಅವರ ಈ ವಾದ ಕಾಂಗ್ರೆಸ್ ಸಂಸದರನ್ನು ಕೆರಳಿಸಿದೆ. ಕೇಂದ್ರ ಸರಕಾರಕ್ಕೆ, ರಾಹುಲ್ ಎಲ್ಲಿ ಹೋಗುತ್ತಾರೆ, ಯಾರೊಂದಿಗೆ ಏನು ಮಾಡುತ್ತಾರೆ, ಎಷ್ಟು ದಿನ ಕಳೆಯುತ್ತಾರೆ... ಇದೆಲ್ಲ ಏಕೆ ಬೇಕು. ಕೇಂದ್ರ ಸರಕಾರ ರಾಹುಲ್ ಗಾಂಧಿಯ ವಿರುದ್ಧ ಬೇಹುಗಾರಿಕೆ ನಡೆಸಿದೆಯಾ ಎಂದು ಕೆಲವೊಬ್ಬರು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಅವರು ಗುಜರಾತ್ನ ಬನಷ್ಕಂಟಕ್ಕೆ ಪ್ರವಾಹ ಪೀಡಿತರನ್ನು ಭೇಟಿಯಾಗಲು ಹೋಗಿದ್ದಾಗ ಅವರಿದ್ದ ಕಾರಿಗೆ ದುರುಳರು ಕಲ್ಲನ್ನು ಎಸೆದು, ಕಾರಿನ ಗಾಜನ್ನು ಪುಡಿಪುಡಿ ಮಾಡಿದ್ದರು. ಈ ಘಟನೆ ಕಾಂಗ್ರೆಸ್ಸಿಗರಿಂದ ತೀವ್ರ ಟೀಕೆಗೆ ಒಳಗಾಗಿತ್ತು. ರಾಹುಲ್ ಅಂಥವರಿಗೆ ರಕ್ಷಣೆ ನೀಡುವುದು ಸ್ಥಳೀಯ ಬಿಜೆಪಿ ಸರಕಾರದ ಕರ್ತವ್ಯ ಎಂದು ತೀವ್ರ ವಾಗ್ದಾಳಿ ನಡೆಸಿದ್ದರು.
ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಅವರಿಗೆ ಭದ್ರತೆ ನೀಡಲು ವಿನಯ್ ರೂಪಾನಿ ಅವರು ಸಂಪೂರ್ಣ ವಿಫಲವಾಗಿದ್ದಾರೆ. ಗುಜರಾತ್ಗೆ ಭಯೋತ್ಪಾದಕರು ಎಲ್ಲಿಂದ ಬಂದರು. ಅವರು ರಾಹುಲ್ ಅವರು ಜೀವ ತೆಗೆಯಲು ಯತ್ನಿಸಿದರು ಎಂದು ವಾಗ್ದಾಳಿ ನಡೆಸಿದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ರಾಜನಾಥ್ ಸಿಂಗ್ ಅವರು, ರಾಹುಲ್ ಅವರಿಗೆ ಎಸ್ಪಿಜಿ ಭದ್ರತೆ ನೀಡಲಾಗಿದೆ. ಅವರು ಗುಂಡು ವಿರೋಧಿ ಕಾರನ್ನು ನೀಡಲಾಗಿದೆ. ಆದರೂ ಅವರು ಬುಲೆಟ್ ಪ್ರೂಫ್ ಕಾರನ್ನು ಬಳಸಿದ್ಯಾಕೆ? ಇದನ್ನೆಲ್ಲ ನಿರ್ಲಕ್ಷಿಸಿ ಅಡ್ಡಾಡುತ್ತಿರುವುದು ಅವರ ತಪ್ಪಲ್ಲವೆ ಎಂದು ಮರುಪ್ರಶ್ನಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications