ಮೋದಿ ಪ್ರಧಾನಿಯಾಗಿ ಇಂದೇ ಪ್ರಮಾಣವಚನ ಸ್ವೀಕರಿಸೋದು ಯಾಕೆ ಗೊತ್ತಾ?
Recommended Video
ನವದೆಹಲಿ, ಮೇ 30: ಭಾರತದ ಹದಿನೈದನೇ ಪ್ರಧಾನಿಯಾಗಿ ನರೇಂದ್ರ ದಾಮೋದರದಾಸ್ ಮೋದಿ ಅವರು ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಷ್ಟಕ್ಕೂ ಮೋದಿ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಇದೇ ದಿನವನ್ನು ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ?
ಟ್ರೋಲ್ ಹೈಕ್ಳ ಪ್ರಕಾರ, ಮೇ 30 ಏಕಾದಶಿಯಾಗಿರುವುದರಿಂದ ತಾವೂ ತಿನ್ನದ, ಬೇರೆಯವರಿಗೆ ತಿನ್ನುವುದಕ್ಕೂ ಬಿಡದ ನರೇಂದ್ರ ಮೋದಿ ಅವರು 'ಉಪವಾಸ'ದ ಜೊತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

"ಮೋದಿ ತಾವೂ ಲಂಚ ಮುಟ್ಟುವುದಿಲ್ಲ, ಲಂಚ ತಿನ್ನುವವರಿಗೂ ಅದಕ್ಕೆ ಅವಕಾಶ ನೀಡುವುದಿಲ್ಲ" ಎಂಬ ಮಾತು ಅವರು 2014 ರಲ್ಲಿ ಪ್ರಧಾನಿಯಾದ ದಿನದಿಂದಲೂ ಚಾಲ್ತಿಯಲ್ಲಿತ್ತು. ಅದನ್ನೇ ಮತ್ತೆ ನೆನಪಿಸಿಕೊಂಡಿರುವ ಮೋದಿ ಅಭಿಮಾನಿಗಳು ಏಕಾದಶಿ ದಿನವೇ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದಕ್ಕೆ ಕಾರಣ ಅದೇ ಎಂದಿದ್ದಾರೆ.
ಆದರೆ ಅಸಲಿಗೆ ಇಂದು ಬೆಳಗ್ಗೆ ಮಾತ್ರ ಏಕಾದಶಿ ಇದ್ದು, ಸಂಜೆಯ ಹೊತ್ತಿಗೆ ದ್ವಾದಶಿ ಆರಂಭವಾಗುತ್ತದೆ.
ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಮೋದಿ ಅವರು ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿ ಅವರೊಂದಿಗೆ 50-60 ಸಚಿವರೂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನದ ,ಮುಹೂರ್ತವನ್ನು ವಿಶ್ಲೇಷಿಸಿರುವ ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ, ಅವರಿಗೆ ಶುಭಾಶುಭ ಫಲಗಳೆರಡೂ ಇವೆ ಎಂದಿರುವುದನ್ನು ಇಲ್ಲಿ ಸ್ಮರಿಸಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications