ನಿರ್ಮಲಾ ಸೀತಾರಾಮನ್ ಲೋಕಸಭೆಗೆ ಸ್ಪರ್ಧಿಸದಿರುವುದು ಏಕೆ?
Recommended Video
ನವದೆಹಲಿ, ಏಪ್ರಿಲ್ 17: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಈಗಾಗಲೇ ಬಿಜೆಪಿಯು ತನ್ನ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲೆಲ್ಲೂ ನಿರ್ಮಲಾ ಸೀತಾರಾಮನ್ ಅವರ ಹೆಸರಿಲ್ಲ!
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಅತ್ಯಂತ ಚಟುವಟಿಕೆಯ ರಕ್ಷಣಾ ಮಂತ್ರಿಯಾಗಿ, ಸಾಮಾನ್ಯರಲ್ಲಿ ಸಾಮಾನ್ಯರಾಗಿ ಮೆಚ್ಚುಗೆ ಗಳಿಸಿರುವ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ಕಾರಣವೇನು?
ಅವರೇ ಹೇಳಿರುವಂತೆ, "ಯಾರು, ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಅದಕ್ಕೆ ತಕ್ಕ ಹಾಗೇ ನಾನೂ ನಡೆದುಕೊಳ್ಳುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಹೇಳಿದರು.

ಪ್ರಸ್ತುತ ರಾಜ್ಯಸಭೆ ಸದಸ್ಯರಾಗಿರುವ ಅವರು, ಕರ್ನಾಟಕದಿಂದಲೆ ರಾಜ್ಯಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಲೋಕಸಭೆಗೆ ಅವರು ಸ್ಪರ್ಧಿಸುವುದು ಅನುಮಾನವಾಗಿದ್ದು, ಅವರು ಮತ್ತೆ ರಾಜ್ಯ ಸಭೆಯಿಂದಲೇ ಸಂಸತ್ತಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ ಏಪ್ರಿಲ್ 11 ರಂದು ಆರಂಭವಾಗಿ ಏಳು ಹಂತಗಳಲ್ಲಿ ನಡೆದು ಮೇ 19 ಕ್ಕೆ ಮುಕ್ತಾಯವಾಗಲಿದೆ. ಫಲಿತಾಂಶ ಮೇ 23 ರಂದು ಹೊರಬೀಳಲಿದೆ.












Click it and Unblock the Notifications