ಪತಿ ರೋಹಿತ್ ಕೊಲೆ ಬಳಿಕ ಅಪೂರ್ವದ್ದು ನಿಮಿಷಕ್ಕೊಂದು ಗೊಂದಲದ ಹೇಳಿಕೆ
ನವದೆಹಲಿ, ಏ.26: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ಡಿ ತಿವಾರಿ ಪುತ್ರ ರೋಹಿತ್ ತಿವಾರಿಯನ್ನು ಆತನ ಪತ್ನಿಯೇ ಕೊಲೆ ಮಾಡಿರುವ ಸಂಗತಿ ಬಯಲಿಗೆ ಬಂದಿದೆ.
ರೋಹಿತ್ ಅವರ ಪತ್ನಿ ಅಪೂರ್ವ ತಿವಾರಿಯನ್ನು ತನಿಖೆ ಮಾಡುವ ವೇಳೆ ನಿಮಿಷಕ್ಕೊಂದು ಗೊಂದಲದ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೆಲವೊಮ್ಮೆ ಹೌದು ಪತಿಯನ್ನು ಕೊಂದಿದ್ದು ನಾನೇ ಎಂದು ಒಪ್ಪಿಕೊಳ್ಳುತ್ತಾರೆ ಇನ್ನೂ ಕೆಲ ಕ್ಷಣ ಏನನ್ನೂ ಉತ್ತರಿಸದೆ ಸುಮ್ಮನಾಗಿಬಿಡುತ್ತಾರೆ.
ಏ.15-16ರ ನಡುವೆ ರೋಹಿತ್ ತಿವಾರಿಯನ್ನು ಅಪೂರ್ವ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಹಾಗೂ ಗಂಡ-ಹೆಂಡತಿ ನಡುವೆ ಅವರ ತಾಯಿ ಪ್ರತಿ ವಿಚಾರ ಮೂಗುತೂರಿಸುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ.

ರೋಹಿತ್ ತಿವಾರಿ ಕೊಲೆಯಾಗಬೇಕಾದರೆ ಎಲ್ಲಿದ್ದರು?
ರೋಹಿತ್ ಕೊಲೆಯಾಗುವ ದಿನ ಡಿಫೆನ್ಸ್ ಕಾಲೊನಿಯ ರೂಮೊಂದರಲ್ಲಿ ರೋಹಿತ್ ತಿವಾರಿ ಹಾಗೂ ಅಪೂರ್ವ ಉಳಿದುಕೊಂಡಿದ್ದರು. ರೋಹಿತ್ ತಿವಾರಿ ಸಹೋದರಿ ಜೊತೆಗೆ ಮನಸ್ತಾಪಗಳಿತ್ತು ಎಂದು ಹೇಳಿಕೆ ನೀಡಿದ್ದಾರೆ.

ಸಹೋದರಿ ಜೊತೆಯಲ್ಲೇ ಕುಳಿತು ಕುಡಿಯುತ್ತಿದ್ದರು
ಸಹೋದರಿ ಜೊತೆಯಲ್ಲಿ ಕುಳಿತು ವಿಪರೀತ ಕುಡಿಯುವುದು ನನಗೆ ಇಷ್ಟವಾಗುತ್ತಿರಲಿಲ್ಲ ಆ ಕುರಿತು ರೋಹಿತ್ಗೂ ಹೇಳಿದ್ದೆ. ಅವರು ಉತ್ತರಾಖಂಡದಿಂದ ವಾಪಸಾದಾಗ ಸಹೋದರಿ ಜೊತೆಗೆ ಕುಳಿತು ಒಂದೇ ಗ್ಲಾಸಿನಲ್ಲಿ ಕುಡಿಯುತ್ತಿದ್ದರು. ಇದು ನನಗೆ ಹೆಚ್ಚು ಕೋಪ ತರಿಸಿತ್ತು. ಕುತ್ತಿಗೆಗೆ ಮೊದಲು ಹೊಡೆದು ಆತ ಕೂಗಿಕೊಳ್ಳಬಾರದು ಎಂದು ಬಳಿಕ ದಿಂಬಿನಿಂದ ಉಸಿರುಗಟ್ಟಿಸಿದ್ದಾಗಿ ತಿಳಿಸಿದ್ದಾರೆ.

ಅಪೂರ್ವಳಿಗೆ ಆಸ್ತಿಯಲ್ಲಿ ಪಾಲು ಕೊಡದಿರಲು ಯೋಚಿಸಿದ್ದರು
ಜಿಲ್ಲಾ ಬಾರ್ ಅಸೋಸಿಯೇಷನ್ ಬರೆದ ಪತ್ರವನ್ನು ಪರಿಶೀಲಿಸಿದಾಗ ರೋಹಿತ್ ತಿವಾರಿ ಕುಟುಂಬವು ಅಪೂರ್ವಳಿಗೆ ಆಸ್ತಿಯಲ್ಲಿ ಪಾಲನ್ನು ನೀಡದಿರಲು ನಿರ್ಧರಿಸಿರುವುದು ಸ್ಪಷ್ಟವಾಗಿತ್ತು.

ರೋಹಿತ್ಗೆ ಹೃದಯಾಘಾತವಾಗಿರಲಿಲ್ಲ ಅದು ಕೊಲೆ
ಪ್ರಕರಣ ಏನು? ರೋಹಿತ್ ತಿವಾರಿ ಕೊಲೆಗೆ ಕಾರಣವೇನು? ರೋಹಿತ್ ತಿವಾರಿ ಅವರು ನವದೆಹಲಿಯಿಂದ ಏ.16ರಂದು ಮನೆಗೆ ಮರಳಿದ್ದರು. ಮನೆಗೆ ಬರುವಾಗ ಮದ್ಯಪಾನ ಮಾಡಿದ್ದು, ನಿಲ್ಲಲಾಗದ ಪರಿಸ್ಥಿತಿಯಲ್ಲಿದ್ದರು. ಬಳಿಕ ಗೋಡೆಯನ್ನು ಹಿಡಿದುಕೊಂಡೇ ಒಳಗೆ ಪ್ರವೇಶಿಸಿದ್ದರು.ಅದೇ ದಿನ ಅವರ ಪತ್ನಿ ಅಪೂರ್ವ ತಿವಾರಿ ರೋಹಿತ್ ಅವರ ಕೋಣೆಗೆ ಹೋಗಿ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಹೃದಯಾಘಾತವೆಂದು ಸುಳ್ಳು ಹೇಳಿದ್ದರು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications