ಪತಿಯನ್ನು ಕೊಂದು 90 ನಿಮಿಷದಲ್ಲಿ ಸಾಕ್ಷ್ಯ ನಾಶಪಡಿಸಿದ್ದ ಅಪೂರ್ವ ತಿವಾರಿ
ನವದೆಹಲಿ, ಏ.24: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ಡಿ ತಿವಾರಿ ಪುತ್ರ ರೋಹಿತ್ ತಿವಾರಿಯನ್ನು ಆತನ ಪತ್ನಿಯೇ ಕೊಲೆ ಮಾಡಿರುವ ಸಂಗತಿ ಬಯಲಿಗೆ ಬಂದಿದೆ.
ಕೇವಲ ಒಂದು ವಾರದೊಳಗೆ ಪೊಲೀಸರು ಕೊಲೆಗಾರರನ್ನು ಪತ್ತೆ ಹಚ್ಚಿದ್ದಾರೆ. ಕೊಲೆ ಮಾಡಿ ಕೇವಲ 90 ನಿಮಿಷಗಳಲ್ಲಿ ಎಲ್ಲಾ ದಾಖಲೆಗಳನ್ನು ಅಪೂರ್ವ ತಿವಾರಿ ನಾಶಪಡಿಸಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
ಆಕೆಯನ್ನು ವಿಚಾರಣೆಗೆ ಒಳಪಡಿಸಿರುವ ವೇಳೆ ಈ ಮಾಹಿತಿಯನ್ನು ಅಪೂರ್ವ ನೀಡಿದ್ದಾಗಿ ಹೇಳಿದ್ದಾರೆ.ಫಾರೆನ್ಸಿಕ್ ರಿಪೋರ್ಟ್ ಪ್ರಕಾರ ಅಪೂರ್ವ ಅವರನ್ನು ಬಂಧಿಸಲಾಗಿದೆ. ಬಳಿಕ ಹೌದು ತಾನೇ ಪತಿಯನ್ನು ಕೊಲೆ ಮಾಡಿದ್ದು ವೈವಾಹಿಕ ಜೀವನದಲ್ಲಿ ಸಂತೃಪ್ತಿ ಇಲ್ಲದಿರುವುದೇ ಕೊಲೆಗೆ ಕಾರಣ ಎಂದು ಒಪ್ಪಿಕೊಂಡಿದ್ದರು.

ಮೊದಲು ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ಹೇಳಲಾಗಿತ್ತು. ಆದರೆ ವೈದ್ಯಕೀಯ ವರದಿಯಲ್ಲಿ ಇದು ಸಹಜ ಸಾವಲ್ಲ ಕೊಲೆ ಎನ್ನುವುದು ಬಹಿರಂಗವಾಗಿತ್ತು.
ಏಪ್ರಿಲ್ 16ರಂದು ಅಪೂರ್ವ ಅವರು ರೋಹಿತ್ ಇದ್ದ ಕೋಣೆಗೆ ಬಂದಿದ್ದರು. ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಕೇವಲ ಒಂದೂವರೆಗಂಟೆಯಲ್ಲಿ ಕೊಲೆ ಮಾಡಲು ಬಳಸಿದ್ದ ಎಲ್ಲಾ ಸಾಕ್ಷ್ಯವನ್ನು ನಾಶ ಪಡಿಸಿ, ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಿ ಅಪರಾಧ ತಂಡದ ಹಾದಿ ತಪ್ಪಿಸಿದ್ದರು.
ತಿವಾರಿ ಅವರು ಏಪ್ರಿಲ್ 12 ರಂದು ದೆಹಲಿಗೆ ಮತದಾನಕ್ಕಾಗಿ ತೆರಳಿದ್ದರು, ಏ.15ರಂದು ಮನೆಗೆ ವಾಪಸಾಗುವ ವೇಳೆ ಗೋಡೆಯನ್ನು ಹಿಡಿದುಕೊಂಡು ಮನೆಯೊಳಗೆ ತೆರಳಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಮರುದಿನ ರೋಹಿತ್ ಅವರ ತಾಯಿ ಆಸ್ಪತ್ರೆಯಲ್ಲಿದ್ದಾಗ ಅವರಿಗೆ ಒಂದು ಕರೆ ಬಂದಿತ್ತು, ರೋಹಿತ್ ಅವರ ಆರೋಗ್ಯ ಸರಿಯಿಲ್ಲ ಹಾಗೂ ಅವರ ಮೂಗಿನಿಂದ ರಕ್ತ ಬರುತ್ತಿದೆ ಎಂದು ಹೇಳಲಾಗಿತ್ತು. ತಕ್ಷಣವೇ ಅಂಬ್ಯುಲೆನ್ಸ್ ಕಳುಹಿಸಿದ್ದರೂ ಕೂಡ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ










Click it and Unblock the Notifications