'ಇಂದಿರಾ ಗಾಂಧಿಗೆ ಮಾರಕ ಕ್ಯಾನ್ಸರ್ ಇತ್ತು'
ನವದೆಹಲಿ, ಏ.26: ಕಾಂಗ್ರೆಸ್ ಪಕ್ಷದ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕ್ಯಾನ್ಸರ್ ಇದ್ದು, ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುದ್ದಿಗಳು ಈ ಹಿಂದೆ ಕೇಳಿಬಂದಿದ್ದವು. ಆದರೆ ತಾಜಾ ಏನಪ್ಪಾ ಅಂದರೆ ಸೋನಿಯಾರ ಅತ್ತೆ, ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರಿಗೆ ಮಾರಕ ಕ್ಯಾನ್ಸರ್ ಇತ್ತು ಎಂಬ ಮಾಹಿತಿ ಬಯಲಾಗಿದೆ.
ಇಂತಹ ಸೂಕ್ಷ್ಮ ಮಾಹಿತಿಯನ್ನು ಪ್ರಸ್ತುತ ಬಿಜೆಪಿಯಲ್ಲಿರುವ ಸುಬ್ರಮಣ್ಯ ಸ್ವಾಮಿ ಅವರು ಅಮೆರಿಕದ ಗುಪ್ತಚರ ದಳಕ್ಕೆ ರವಾನಿಸಿದ್ದರು ಎಂದು ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ 'ವಿಕಿಲೀಕ್ಸ್' ತಿಳಿಸಿದೆ.

ಇಂದಿರಾ ಗಾಂಧಿ ಅವರ ಆರೋಗ್ಯಕ್ಕೆ ಸಂಬಂಧಿಸಿದ ಗುಪ್ತ ಮಾಹಿತಿಯಷ್ಟೇ ಅಲ್ಲ. ಪ್ರಧಾನಿಯಾಗಿ 1977ರಲ್ಲಿ ತುರ್ತುಪರಿಸ್ಥಿತಿ ವೇಳೆ ಇಂದಿರಾ ಏನೆಲ್ಲಾ ಚುನಾವಣಾ ತಂತ್ರಗಳನ್ನು ಅಳವಡಿಸಿಕೊಂಡಿದ್ದರು ಎಂಬುದರ ಕುರಿತೂ ಬಿಜೆಪಿಯ ಹಿರಿಯ ನಾಯಕ ಸುಬ್ರಮಣ್ಯ ಸ್ವಾಮಿ ಅವರು ಅಮೆರಿಕಕ್ಕೆ ಮಾಹಿತಿ ನೀಡಿದ್ದರು.
ಇಂದಿರಾ ಅವರು ಅಂತಿಮ ಹಂತದ ಕ್ಯಾನ್ಸರಿನಿಂದ ಬಳಲುತ್ತಿದ್ದಾರೆ ಎಂಬುದು ಸಂದೇಶದ ತಾತ್ಪರ್ಯವಾಗಿತ್ತು. ಆಗ ಜಗಜೀವನ್ ರಾಮ್ ಅವರು ರಾಜೀನಾಮೆ ಪತ್ರ ಸಲ್ಲಿಸುತ್ತಾ 'ಮೇಡಂ ತಾವು ಬೇಗನೇ ಗುಣಮುಖರಾಗಬೇಕೆಂದು ಪ್ರಾರ್ಥಿಸುವೆ' ಎಂದು ಕೋರಿದ್ದರಂತೆ.
ಅಂದಹಾಗೆ ಭಾರತದಿಂದ ಅಮೆರಿಕಕ್ಕೆ ರವಾನೆಯಾದ ಅತ್ಯುನ್ನತ ಖಾಸಗಿ ಮಾಹಿತಿಗಳ ಪ್ರಮುಖ ಮೂಲವೇ ಸುಬ್ರಮಣ್ಯ ಸ್ವಾಮಿ ಅವರಾಗಿದ್ದರು ಎಂದೂ ವಿಕಿಲೀಕ್ಸ್ (WikiLeaks) ಹೇಳುತ್ತಿದೆ.
'ಆರೋಗ್ಯ ಹದಗೆಡುತ್ತಿದ್ದ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆಸಲು ಇಂದಿರಾ ಬಯಸಿದ್ದಾರೆ' ಎಂದು ಸ್ವಾಮಿ 1977ರಲ್ಲಿ ಅಮೆರಿಕಕ್ಕೆ ತಿಳಿಸಿದ್ದರಂತೆ. 'ಕ್ಯಾನ್ಸರ್ ಇರುವ ಕಾರಣಕ್ಕೆ, ಮುಂದಿನ 60-90 ದಿನಗಳಲ್ಲಿ ಪುತ್ರ ಸಂಜಯ್ ಗಾಂಧಿ ಅವರನ್ನು ದಿಢೀರ್ ಉತ್ತರಾಧಿಕಾರಿ ಮಾಡಲು ಅಚ್ಚರಿಯ ಚುನಾವಣೆಗೆ ಇಂದಿರಾ ಗಾಂಧಿ ಮುಂದಾಗಿದ್ದರು' ಎಂದು ಅಮೆರಿಕ ಮೂಲದ ನ್ಯೂಸ್ ವೀಕ್ ಆಗ ವರದಿ ಪ್ರಕಟಿಸಿತ್ತು ಎಂದು ವಿಕಿಲೀಕ್ಸ್ ಹೇಳಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications