ರಾಜಕಾರಣಿಗಳ ಬೆಂಬಲವಿಲ್ಲದೆ ಅಯೋಧ್ಯೆಯಲ್ಲಿ ರಾಮಮಂದಿರ!
ನವದೆಹಲಿ, ಮೇ.13: ಯಾವುದೇ ರಾಜಕಾರಣಿಗಳ ಬೆಂಬಲವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ದ್ವಾರಕಾಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಬುಧವಾರ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರಕ್ಕೆ ಸವಾಲೊಡ್ಡಿದ್ದಾರೆ.
ಅಯೋಧ್ಯೆಯಲ್ಲಿ ರಾಮ ದೇಗುಲ ನಿರ್ಮಾಣ ಇತ್ತೀಚಿಗೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದರು. ರಾಜ್ಯಸಭೆಯಲ್ಲಿ ಎನ್ ಡಿಎಗೆ ಬಹುಮತದ ಕೊರತೆ ಇದೆ. ಹೀಗಾಗಿ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆಯಂತೆ ರಾಮ್ ಲೀಲಾ ಮೈದಾನದಲ್ಲಿ ಬುಧವಾರ ಮಾತನಾಡಿದ ಶಂಕರಾಚಾರ್ಯ ಸ್ವಾಮೀಜಿ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ರಾಜಕೀಯ ವ್ಯಕ್ತಿಗಳು ಮಾತನಾಡುವುದನ್ನು ಮೊದಲು ನಿಲ್ಲಿಸಬೇಕು. ರಾಮ ಜನ್ಮ ಭೂಮಿ ಬಗ್ಗೆ ಮಾತನಾಡಬೇಡಿ, ರಾಮ ಮಂದಿರ ನಿರ್ಮಾಣವನ್ನು ನಾವು ಮಾಡುತ್ತೇವೆ ಎಂದು ಹಿಂದೂ ಧರ್ಮ ಸಂಸತ್ ನಲ್ಲಿ ಹೇಳಿದರು.
ಸುಪ್ರೀಂಕೋರ್ಟ್ ಆದೇಶ ನಮ್ಮ ಪರ ಬರುವ ನಿರೀಕ್ಷೆಯಿದೆ. ನಮಗೆ ಯಾವುದೇ ರಾಜಕಾರಣಿಗಳ ಆರ್ಥಿಕ ಬೆಂಬಲದ ನಿರೀಕ್ಷೆಯಿಲ್ಲ. ಜನರೇ ಇದನ್ನು ಭರಿಸಲಿದ್ದಾರೆ. ರಾಮಾಯಣ, ಮಹಾಭಾರತ ಮುಂತಾದ ಧರ್ಮಗ್ರಂಥಗಳಿಂದ ಪಡೆದ ಜ್ಞಾನವನ್ನು ದೇಶದ ಎಲ್ಲಾ ಕಾಲೇಜುಗಳಿಗೆ ಹಂಚಬೇಕಿದೆ. ಗೋಹತ್ಯೆ ನಿಷೇಧ ಹೇರಿದಂತೆ ಮದ್ಯಪಾನದ ಮೇಲೂ ನಿಷೇಧ ಜಾರಿಗೊಳ್ಳಲಿ ಎಂದು ಶಂಕರಾಚಾರ್ಯ ಅವರು ನೆರೆದಿದ್ದ ಸಭೆಯನ್ನು ಉದ್ದೇಶಿಸಿ ಹೇಳಿದರು. (ಪಿಟಿಐ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications