ಭಾರತದಲ್ಲಿ ಕ್ರಿಪ್ಟೋಕರೆನ್ಸಿ ನಿಷೇಧ?, ನಿರ್ಮಲಾ ಸೀತಾರಾಮನ್ ಹೇಳುವುದು ಹೀಗೆ
ನವದೆಹಲಿ, ಫೆಬ್ರವರಿ 11: ಪ್ರಸ್ತುತ ದೇಶದಲ್ಲಿ ಪ್ಟೋಕರೆನ್ಸಿಗಳನ್ನು ನಿಷೇಧಿಸಲಾಗುತ್ತದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಈ ನಡುವೆ ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, "ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ಅಥವಾ ನಿಷೇಧಿಸದಿರುವ ಕುರಿತು ಸೂಕ್ತ ಸಮಾಲೋಚನೆಯ ನಂತರ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು," ಎಂದು ಹೇಳಿದ್ದಾರೆ.
"ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವುದು ಅಥವಾ ನಿಷೇಧಿಸದಿರುವುದನ್ನು ಸಮಾಲೋಚನೆಯ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಕ್ರಿಪ್ಟೋಕರೆನ್ಸಿಗಳನ್ನು (ಅದು) ಕಾನೂನುಬದ್ಧವಾಗಿರಲಿ ಅಥವಾ ಕಾನೂನುಬಾಹಿರವಾಗಿರಲಿ, ಕಾನೂನುಬದ್ಧಗೊಳಿಸಲು ಅಥವಾ ನಿಷೇಧಿಸುವ ಯಾವುದೇ ಕ್ರಮವನ್ನು ಸರ್ಕಾರವು ಕೈಗೊಂಡಿಲ್ಲ. ಇದು ಬೇರೆಯೇ ವಿಚಾರ," ಎಂದು ರಾಜ್ಯಸಭೆಯಲ್ಲಿ ಬಜೆಟ್ ಚರ್ಚೆಗೆ ಪ್ರತಿಕ್ರಿಯಿಸುವಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಣೆ ನೀಡಿದ್ದಾರೆ.
ದೇಶದಲ್ಲಿ ಕ್ರಿಪ್ಟೋಕರೆನ್ಸಿಗಳ ಕಾನೂನುಬದ್ಧತೆಗಳ ಬಗ್ಗೆ ಸ್ಪಷ್ಟಪಡಿಸಿದ ಸೀತಾರಾಮನ್, "ನಾವು ಕ್ರಿಪ್ಟೋಕರೆನ್ಸಿಗಳ ಮೇಲೆ ತೆರಿಗೆ ವಿಧಿಸುತ್ತೇವೆ. ಏಕೆಂದರೆ ಅದು ತೆರಿಗೆಯನ್ನು ವಿಧಿಸಲೇ ಬೇಕಾದದ್ದು," ಎಂದಿದ್ದಾರೆ. ಕ್ರಿಪ್ಟೋಕರೆನ್ಸಿ ಕುರಿತು ಕಾಂಗ್ರೆಸ್ ಸದಸ್ಯೆ ಛಾಯಾ ವರ್ಮಾ ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದ್ದಾರೆ. ಕ್ರಿಪ್ಟೋಕರೆನ್ಸಿಗೆ ತೆರಿಗೆ ವಿಧಿಸುವ ಕಾನೂನುಬದ್ಧತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಣಕಾಸು ಕಾರ್ಯದರ್ಶಿ ಈ ಹಿಂದೆ ಹೇಳಿದ್ದೇನು?
ಬಿಟ್ಕಾಯಿನ್ ಅಥವಾ ಎಥೆರಿಯಮ್ನಂತಹ ಕ್ರಿಪ್ಟೋಕರೆನ್ಸಿಗಳು ಎಂದಿಗೂ ಕಾನೂನುಬದ್ಧ ಆಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನೀಡಿದ ಡಿಜಿಟಲ್ ರೂಪಾಯಿ ಮಾತ್ರ ಕಾನೂನುಬದ್ಧ ಆಗಿರುತ್ತದೆ ಎಂದು ಈ ಸಂದರ್ಭದಲ್ಲೇ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಎಎನ್ಐ ಜೊತೆ ಮಾತನಾಡಿದ ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್, "ಡಿಜಿಟಲ್ ರೂಪಾಯಿಯನ್ನು ಆರ್ಬಿಐ ಬೆಂಬಲಿಸುತ್ತದೆ, ಅದು ಎಂದಿಗೂ ತಪ್ಪು ಅಲ್ಲ. ಹಣ ಆರ್ಬಿಐದ್ದು ಆಗಿರುತ್ತದೆ ಆದರೆ ಸ್ವರೂಪ ಡಿಜಿಟಲ್ ಆಗಿರುತ್ತದೆ. ಆರ್ಬಿಐ ನೀಡುವ ಡಿಜಿಟಲ್ ರೂಪಾಯಿ ಕಾನೂನುಬದ್ಧ ಆಗಿರುತ್ತದೆ," ಎಂದು ತಿಳಿಸಿದ್ದಾರೆ.

ಕ್ರಿಪ್ಟೊದಿಂದಾದ ನಷ್ಟಕ್ಕೆ ಸರ್ಕಾರ ಜವಾಬ್ದಾರಿಯಲ್ಲ
"ಕ್ರಿಪ್ಟೋ ಸ್ವತ್ತುಗಳು ಆಸ್ತಿಗಳಾಗಿದ್ದು, ಅದರ ಮೌಲ್ಯವನ್ನು ಎರಡು ಜನರ ನಡುವೆ ನಿರ್ಧರಿಸಲಾಗುತ್ತದೆ. ನೀವು ಚಿನ್ನ, ವಜ್ರ ಮತ್ತು ಕ್ರಿಪ್ಟೋ ಆಸ್ತಿಗಳನ್ನು ಖರೀದಿಸಬಹುದು. ಆದರೆ ಆ ಮೌಲ್ಯಕ್ಕೆ ಸರ್ಕಾರದಿಂದ ಅಧಿಕೃತತೆ ಇರುವುದಿಲ್ಲ. ಖಾಸಗಿ ಕ್ರಿಪ್ಟೋದಲ್ಲಿ ಹೂಡಿಕೆ ಮಾಡುವ ಜನರು ಅದು ಸರ್ಕಾರದ ಅಧಿಕಾರವನ್ನು ಹೊಂದಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು. ನಿಮ್ಮ ಹೂಡಿಕೆಗಳು ಯಶಸ್ವಿಯಾಗುತ್ತವೆಯೋ ಇಲ್ಲವೋ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಹಣವನ್ನು ಕಳೆದುಕೊಳ್ಳಬಹುದು ಮತ್ತು ಇದಕ್ಕೆ ಸರ್ಕಾರವು ಜವಾಬ್ದಾರರಾಗಿರುವುದಿಲ್ಲ," ಎಂದು ಈ ಸಂದರ್ಭದಲ್ಲೇ ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಎಚ್ಚರಿಕೆ ನೀಡಿದ್ದಾರೆ.

ವರ್ಚುವಲ್ ಡಿಜಿಟಲ್ ಅಸೆಟ್ ವರ್ಗಾವಣೆಗೆ ಶೇ.30ರಷ್ಟು ತೆರಿಗೆ
ವರ್ಚುವಲ್ ಡಿಜಿಟಲ್ ಅಸೆಟ್ (ಕ್ರಿಪ್ಟೋಕರೆನ್ಸಿಯಂಥದ್ದಕ್ಕೆ) ತೆರಿಗೆ ವಿಧಿಸಲಾಗುತ್ತದೆ. ಯಾವುದೇ ವರ್ಚುವಲ್ ಡಿಜಿಟಲ್ ಅಸೆಟ್ ವರ್ಗಾವಣೆಗೆ ಶೇ.30ರ ತೆರಿಗೆ ಕಡಿತಗೊಳ್ಳಲಿದೆ. ಇದರಲ್ಲಿ ಯಾವುದೇ ಡಿಡಕ್ಷನ್ ಇಲ್ಲ. ಆದಾಯ ಯಾವುದೇ ಹೊಂದಾಣಿಕೆಗೆ ಅವಕಾಶ ಇಲ್ಲ. ವರ್ಚುವಲ್ ಡಿಜಿಟಲ್ ಅಸೆಟ್ (ಕ್ರಿಪ್ಟೋಕರೆನ್ಸಿಯಂಥದ್ದಕ್ಕೆ) ಕೊಡುಗೆ(ಗಿಫ್ಟ್ ಮಾಡಿದರೂ) ಪಡೆಯುವವರಿಗೆ ಕೂಡ ತೆರಿಗೆ ಆಗುತ್ತದೆ. ವರ್ಚುವಲ್ ಡಿಜಿಟಲ್ ಅಸೆಟ್ (ಕ್ರಿಪ್ಟೋಕರೆನ್ಸಿಯಂಥದ್ದಕ್ಕೆ) ಶೇ.1ರಷ್ಟು ಟಿಡಿಎಸ್ ಪ್ರಸ್ತಾವಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಕ್ರಿಪ್ಟೋ ಬಗ್ಗೆ ಆರ್ಬಿಐ ಗವರ್ನರ್ ಎಚ್ಚರಿಕೆ
"ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ ಮಾಡುವವರಿಗೆ ಈ ಬಗ್ಗೆ ಎಚ್ಚರಿಕೆ ನೀಡುವುದು ನನ್ನ ಕರ್ತವ್ಯ. ಯಾರು ಹೂಡಿಕೆದಾರರು ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ ಅವರು ತಮ್ಮ ಸ್ವಂತ ಅಪಾಯದಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಎಂಬುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಕ್ರಿಪ್ಟೋಕರೆನ್ಸಿಗಳಿಗೆ ಯಾವುದೇ ಆಧಾರವಾಗಿರುವ ಇಲ್ಲ ಎಂಬುದನ್ನು ಅವರು ನೆನಪಿನಲ್ಲಿಟ್ಟುಕೊಳ್ಳಬೇಕು," ಎಂದು ನಿನ್ನೆಯಷ್ಟೇ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಎಚ್ಚರಿಕೆ ನೀಡಿದ್ದಾರೆ. (ಒನ್ಇಂಡಿಯಾ ಸುದ್ದಿ)
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications