ಪ್ರವೀಣ್ ಕೊಲೆ: ಪಿಎಫ್ಐ ಬ್ಯಾನ್ ಬಗ್ಗೆ ಕೇಂದ್ರದ ಜೊತೆ ಚರ್ಚೆ- ಜೋಶಿ
ನವದೆಹಲಿ ಜುಲೈ 28: ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಬ್ಯಾನ್ ಮಾಡುವ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಂಘಟನೆಯನ್ನು ಬ್ಯಾನ್ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ಮಾಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್ಐ ಸಂಘಟನೆ ಕೈವಾಡ ಇರುವ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾದ ಅಗತ್ಯ ಎದುರಾಗಿದೆ. ಇಂಥಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಮುಖ್ಯಮಂದಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನೊಂದಿಗೆ ಚರ್ಚೆಯಲ್ಲಿ ಪ್ರಸ್ತಾಪಿಸಿದರು ಎಂದರು.

ಪ್ರವೀಣ್ ನೆಟ್ಟಾರು ಕೊಲೆಯಲ್ಲಿ ಪಿಎಫ್ಐ, ಎಸ್ಡಿಪಿಐ ಕೈವಾಡ ಶಂಕೆ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ಪಿಎಫ್,ಐ, ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಸದಸ್ಯರ ಕೈವಾಡ ಇರುವ ಬಗ್ಗೆ ಅನುಮಾನಗಳು ಕೇಳಿ ಬಂದಿವೆ. ಈ ಸಂಘಟನೆಗಳ ಕೈವಾಡ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.

ಕರ್ನಾಟದಲ್ಲಿ ಸರಣಿ ಹತ್ಯೆಗಳು ನಡೆದಿವೆ. ಈ ಸಂಬಂಧ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತಿವಾಗಿದೆ. ಈಕಾರಣಕ್ಕೆ ಕೃತ್ಯಗಳ ಹಿಂದೆ ಅನುಮಾನ ಇರುವ ಅನುಮಾನ ಪಿಎಫ್ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆಸುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications