ಭಾರತದ ಮುಂದಿನ ರಾಷ್ಟ್ರಪತಿ ಲಾಲ್ ಕೃಷ್ಣ ಅಡ್ವಾಣಿ?
ನವದೆಹಲಿ, ಮಾರ್ಚ್ 16: ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಅಭೂತಪೂರ್ವ ಗೆಲುವಿನಿಂದಾಗಿ ಬೀಗುತ್ತಿರುವ ಬಿಜೆಪಿಗೆ ತನ್ನದೇ ಪಕ್ಷದ ಅಭ್ಯರ್ಥಿಯನ್ನು ರಾಷ್ಟ್ರಪತಿಯನ್ನಾಗಿ ಆರಿಸುವ ಅವಕಾಶ ಸಿಕ್ಕಿದೆ. ಜುಲೈ ತಿಂಗಳಿನಲ್ಲಿ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅಧಿಕಾರಾವಧಿ ಮುಗಿಯಲಿದ್ದು, ಪಕ್ಷದ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬಿಜೆಪಿ ರಾಷ್ಟ್ರಪತಿಯನ್ನಾಗಿ ಮಾಡುವ ಎಲ್ಲಾ ಸಾಧ್ಯತೆಗಳೂ ನಿಚ್ಛಳವಾಗಿದೆ.
ಭಾರತದ ಮೊದಲ ಪ್ರಜೆಯ ಹುದ್ದೆಗೆ ನಡೆಯುವ ಚುನಾವಣೆ ಎಲ್ಲ ಚುನಾವಣೆಯಂತಲ್ಲದೆ ಸ್ವಲ್ಪ ಭಿನ್ನವಾಗಿರುತ್ತದೆ. ಹೊಸ ರಾಷ್ಟ್ರಪತಿಯ ನೇಮಕವಾಗುವುದು ಜುಲೈನಲ್ಲೇ ಅದರೂ ಬಿಜೆಪಿಯಂತೂ ಈಗಾಗಲೇ ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದೆ. ರಾಷ್ಟ್ರಪತಿ ರೇಸಿನಲ್ಲಿ ಹಲವರ ಹೆಸರು ಕೇಳಿಬರುತ್ತಿದ್ದರೂ ಪ್ರಧಾನಿ ಮೋದಿ ಸಹ ಅಡ್ವಾಣಿ ಅವರನ್ನು ರಾಷ್ಟ್ರಪತಿಯನ್ನಾಗಿ ನೇಮಿಸುವುದಕ್ಕೆ ಉತ್ಸುಕತೆ ತೋರುತ್ತಿದ್ದಾರೆ ಎನ್ನಲಾಗುತ್ತಿದೆ.
ಈ ಹೊತ್ತಿನಲ್ಲಿ ರಾಷ್ಟ್ರಪತಿ ಚುನಾವಣೆಯ ಕುರಿತ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ

ಎಲೆಕ್ಟ್ರೋಲ್ ಕಾಲೇಜ್ ಮೂಲಕ ಆಯ್ಕೆ
ಎಲೆಕ್ಟ್ರೋಲ್ ಕಾಲೇಜ್ ಮೂಲಕ ರಾಷ್ಟ್ರಪತಿ ಆಯ್ಕೆ ನಡೆಯುತ್ತದೆ. ಈ ಎಲೆಕ್ಟ್ರೋಲ್ ಕಾಲೇಜ್ ಲೋಕಸಭಾ, ರಾಜ್ಯಸಭಾ, ವಿಧಾನಸಭಾ ಸದಸ್ಯರನ್ನು ಒಳಗೊಂಡಿರುತ್ತದೆ.

ಎರಡು ಕೇಂದ್ರಾಡಳಿತ ಪ್ರದೇಶಗಳೂ ಭಾಗಿ
ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ ಮತ್ತು ಪಾಂಡಿಚೇರಿಯ ಶಾಸಕರೂ ಈ ಚುನಾವಣೆಯಲ್ಲಿ ಭಾಗವಹಿಸುತ್ತಾರೆ.

ಎಲೆಕ್ಟ್ರೋಲ್ ಕಾಲೇಜಿನ ಒಟ್ಟು ಮತಗಳು
ಎಲೆಕ್ಟ್ರೋಲ್ ಕಾಲೇಜಿನ ಒಟ್ಟು ಮತಗಳು 10.98 ಲಕ್ಷ. ರಾಷ್ಟ್ರಪತಿ ಆಯ್ಕೆಗೆ ಬೇಕಾಗಿರುವ ಸರಳ ಬಹುಮತ 5.49 ಲಕ್ಷ ಎಲೆಕ್ಟ್ರೋಲ್ ಮತಗಳು.

ಮತದ ಮೌಲ್ಯ
ಲೋಕಸಭೆ ಮತ್ತು ರಾಜ್ಯಸಭೆಯ ಒಬ್ಬ ಸದಸ್ಯರ ಮತದ ಮೌಲ್ಯ 708 ಎಲೆಕ್ಟ್ರೋಲ್ ಮತಗಳು.

ಶಾಸಕರ ಮತದ ಮೌಲ್ಯ ಭಿನ್ನ
ಆದರೆ ಶಾಸಕರ ಎಲೆಕ್ಟ್ರೋಲ್ ಮತಗಳ ಮೌಲ್ಯ ಆಯಾ ರಾಜ್ಯದ ಜನಸಂಖ್ಯೆಗೆ ಮತ್ತು ಶಾಸಕರ ಸಂಖ್ಯೆಗೆ ತಕ್ಕಂತೆ ಭಿನ್ನವಾಗಿರುತ್ತದೆ. ಆಯಾ ರಾಜ್ಯದ ಒಟ್ಟು ಜನಸಂಖ್ಯೆಯನ್ನು ರಾಜ್ಯದ ಒಟ್ಟು ಶಾಸಕರ ಸಂಖ್ಯೆಯಿಂದ ಭಾಗಿಸಿದಾಗ ಬರುವ ಶೇಷವನ್ನು ಪುನಃ 1000 ದಿಂದ ಭಾಗಿಸಿದಾಗ ಬರುವ ಉತ್ತರವೇ ಆ ರಾಜ್ಯದ ಒಬ್ಬ ಶಾಸಕನ ಎಲೆಕ್ಟ್ರೋಲ್ ವೋಟಿನ ಮೌಲ್ಯವಾಗಿರುತ್ತದೆ.

ಬಿಜೆಪಿಗೆ ಬಹುಮತದ ಕೊರತೆ?
ಸದ್ಯಕ್ಕೆ ಬಿಜೆಪಿಗೆ ರಾಷ್ಟ್ರಪತಿ ಆಯ್ಕೆಗೆ ಅಗತ್ಯವಿರುವ 17,500 ಮತಗಳ ಕೊರತೆ ಉಂಟಾಗುತ್ತಿದೆ. ಎಐಎಡಿ ಎಂಕೆ ಮತ್ತು ಬಿಜೆಡಿ ಪಕ್ಷಗಳು ಬೆಂಬಲ ನೀಡಿದ್ದೇ ಆದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ರಾಷ್ಟ್ರಪತಿಯನ್ನಾಗಿ ಆರಿಸಬಹುದು.

ಅಗತ್ಯವಿರುವ ಮತಗಳು
ಈಗಾಗಲೇ ಬಿಜೆಪಿ ಬಳಿ ಇರುವ ಎಲೆಕ್ಟ್ರೋಲ್ ಮತಗಳು 5.32 ಲಕ್ಷ. ಎಐಎಡಿ ಎಂಕೆ ಮತ್ತು ಬಿಜೆಡಿ ಪಕ್ಷಗಳು ಬೆಂಬಲ ನೀಡಿದರೆ ಬಿಜೆಪಿ 6.28 ಎಲೆಕ್ಟ್ರೋಲ್ ವೋಟುಗಳನ್ನು ಪಡೆಯುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications