ಫೇಕ್ ಸ್ಟಿಂಗ್ ಆಪರೇಷನ್ ಮಾಡಿದವರನ್ನು ಬಿಡುವುದಿಲ್ಲ : ನಿರ್ಮಲಾ ಸೀತಾರಾಮನ್
ನವದೆಹಲಿ, ಮಾರ್ಚ್ 27 : ಅಪನಗದೀಕರಣದಿಂದ ಬಿಜೆಪಿ ನಾಯಕರು ಲಾಭ ಪಡೆದುಕೊಂಡಿದ್ದಾರೆ ಎಂದು ನಕಲಿ ಸ್ಟಿಂಗ್ ಆಪರೇಷನ್ ಮಾಡಿ, ಬಿಜೆಪಿಯ ಇಮೇಜನ್ನು ಹಾಳು ಮಾಡಲು ಯತ್ನಿಸಿದ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅಪನಗದೀಕರಣದಿಂದ ಬಿಜೆಪಿ ಲಾಭ ಪಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್ ಮತ್ತು ಗುಲಾಮ್ ನಬಿ ಆಝಾದ್ ಅವರು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಸ್ಟಿಂಗ್ ಆಪರೇಷನ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು.
ಟಿಎನ್ಎನ್ ವರ್ಲ್ಡ್ ಎಂಬ ವೆಬ್ ಸೈಟ್ ಮೂಲಕ ಕಾಂಗ್ರೆಸ್ ಪಕ್ಷವೇ ಈ ಸ್ಟಿಂಗ್ ಆಪರೇಷನ್ ಮಾಡಿ, ವಿಡಿಯೋವನ್ನು ಸಾರ್ವಜನಿಕ ಮಾಡಿದೆ. ಇದೇ ವೆಬ್ ಸೈಟ್ ಇವಿಎಂನಲ್ಲಿರುವ ದೋಷದ ಬಗ್ಗೆ ಕಪಿಲ್ ಸಿಬಲ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದನ್ನೂ ಜನವರಿಯಲ್ಲಿ ಪ್ರಸಾರ ಮಾಡಿತ್ತು. ಈ ವೆಬ್ ಸೈಟನ್ನು 2018ರ ಡಿಸೆಂಬರ್ ನಲ್ಲಿ ನೋಂದಾಯಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರ ನೀಡಿದರು.

ಈ ವೆಬ್ ಸೈಟಿನ ನಿರ್ದೇಶಕ ರೋಮಾನಿಯನ್. ಕಳೆದ ವರ್ಷ ಡಿಸೆಂಬರ್ ನಲ್ಲಿ ರಿಜಿಸ್ಟರ್ ಆಗಿದ್ದ ವೆಬ್ ಸೈಟನ್ನು ಚುನಾವಣೆ ಮುಗಿದ ನಂತರ ಬಂದ್ ಮಾಡಲು ಕಾಂಗ್ರೆಸ್ ಯೋಜಿಸಿತ್ತೇನೋ. ಲೋಕಸಭೆ ಚುನಾವಣೆ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ರೂಪಿಸಿರುವ ಷಡ್ಯಂತ್ರವಿದು ಎಂದು ನಿರ್ಮಲಾ ಸೀತಾರಾಮನ್ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಲಹೆಯನ್ನು ಕೇಂದ್ರ ಸರಕಾರ ಪಡೆಯಲಿದೆ. ಈ ಷಡ್ಯಂತ್ರದ ಹಿಂದಿರುವವರನ್ನು ಬಿಜೆಪಿ ಬಿಡುವುದಿಲ್ಲ. ಲೋಕಸಭೆ ಚುನಾವಣೆ ಹತ್ತಿರ ಇರುವ ಸಂದರ್ಭದಲ್ಲಿ, ನಮ್ಮ ಪಕ್ಷದ ಇಮೇಜನ್ನು ಹಾಳು ಮಾಡಲು ಯತ್ನಿಸಿದವರು ವ್ಯಕ್ತಿಯೇ ಆಗಲಿ ಸಂಸ್ಥೆಯೇ ಆಗಲಿ ಅಂಥವರನ್ನು ಕೋರ್ಟಿಗೆ ಎಳೆದು ತರುತ್ತೇವೆ ಎಂದು ಹೇಳಲು ಇಚ್ಛಿಸುತ್ತೇನೆ ಎಂದಿದ್ದಾರೆ ನಿರ್ಮಲಾ.
ಇದು 'ಫೇಕ್' ಸ್ಟಿಂಗ್ ಆಪರೇಷನ್ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದರು. ಯುಪಿಎನ ನಕಲಿ ಸ್ಟಿಂಗ್ ಆಪರೇಷನ್ ಗಳು, ಸುಳ್ಳು ಪ್ರಚಾರಗಳು ಮುಂದುವರಿದಿವೆ. ಬಿಎಸ್ ಯಡಿಯೂರಪ್ಪ ವಿರುದ್ಧ ಆರೋಪಿಸಿ ಮಾಡಲಾಗಿದ್ದ ಭ್ರಷ್ಟಾಚಾರದ ದೂರು ಕೂಡ ಫೇಕ್. ಮಾಡಲು ಯಾವುದೇ ಕೆಲಸವಿಲ್ಲದಾಗ, ಆಡಿಕೊಳ್ಳಲು ಯಾವುದೇ ವಿಷಯವಿಲ್ಲದಾಗ ಇಂಥ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದೇ ಕಾಂಗ್ರೆಸ್ ಕೆಲಸ ಎಂದು ಜರಿದಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications