'ಕೇಜ್ರಿವಾಲ್ ಬಡ ಕಕ್ಷೀದಾರ ಅಂದುಕೊಂಡು ಪುಕ್ಕಟೆ ವಾದ ಮಾಡ್ತೀನಿ'
ಕೇಂದ್ರ ಸಚಿವ ಅರುಣ್ ಜೇಟ್ಲಿ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರವಾಗಿ ವಕೀಲಿಕೆ ಮಾಡುತ್ತಿರುವ ರಾಮ್ ಜೇಠ್ಮಲಾನಿ, ತಮ್ಮ ಶುಲ್ಕ 3 ಕೋಟಿಗೂ ಹೆಚ್ಚು ಮೊತ್ತವನ್ನು ಬಿಟ್ಟುಬಿಡುವುದಾಗಿ ಹೇಳಿದ್ದಾರೆ
ನವದೆಹಲಿ, ಏಪ್ರಿಲ್ 4: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರವಾಗಿ ಪುಕ್ಕಟೆಯಾಗಿ ಕೋರ್ಟ್ ನಲ್ಲಿ ವಾದ ಮಾಡ್ತೀನಿ ಎಂದಿದ್ದಾರೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ. "ದೆಹಲಿ ಸರಕಾರವಾಗಲೀ ಅಥವಾ ಅರವಿಂದ್ ಕೇಜ್ರಿವಾಲ್ ಆಗಲೀ ನನ್ನ ಶುಲ್ಕ ಕೊಡಲಿಲ್ಲ ಅಂದರೂ ನಾನು ಪುಕ್ಕಟೆಯಾಗಿ ವಾದ ಮಾಡಿಕೊಡ್ತೀನಿ. ಕೇಜ್ರಿವಾಲ್ ರನ್ನು ನನ್ನ ಬಡ ಕಕ್ಷೀದಾರರಲ್ಲಿ ಒಬ್ಬರು ಅಂದುಕೊಳ್ತೀನಿ" ಎಂದಿದ್ದಾರೆ ಜೇಠ್ಮಲಾನಿ.
ಕೇಜ್ರಿವಾಲ್ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕೇಜ್ರಿವಾಲ್ ಪರವಾಗಿ ವಕೀಲಿಕೆ ವಹಿಸಿರುವ ಜೇಠ್ಮಲಾನಿ 3.42 ಕೋಟಿ ರುಪಾಯಿ ಬಿಲ್ ಮಾಡಿದ್ದರು. ಆ ಬಿಲ್ ಅನ್ನು ದೆಹಲಿ ಸರಕಾರ ನೀಡಬೇಕು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನವಿ ಮಾಡಿದ್ದರು.[ಕೇಜ್ರಿವಾಲ್ ಕೇಸು ಬಡಿದಾಡಲು ದೆಹಲಿ ಸರಕಾರದ ಕಾಸು!]

ಇದೀಗ ರಾಮ್ ಜೇಠ್ಮಲಾನಿ ಎಎನ್ ಐ ಸುದ್ದಿ ಮಾಧ್ಯಮದ ಜತೆಗೆ ಈ ಬಗ್ಗೆ ಮಾತನಾಡಿದ್ದು, "ನಾನು ಶ್ರೀಮಂತರಿಗಷ್ಟೇ ಫೀ ತೆಗೆದುಕೊಳ್ತೀನಿ ಮತ್ತು ಬಡವರಿಗೆ ನನ್ನ ಸೇವೆ ಉಚಿತ" ಎಂದಿದ್ದಾರೆ. ಡಿಡಿಸಿಎ ಪ್ರಕರಣದ ವಿಚಾರದಲ್ಲಿ ಕೇಜ್ರಿವಾಲ್ ಹೇಳಿಕೆ ವಿರುದ್ಧವಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 10 ಕೋಟಿ ರುಪಾಯಿ ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications