ಚಳಿಗಾಲ ಅಧಿವೇಶನಕ್ಕೂ ಮೊದಲೇ 'ನಮೋ' ಸಂದೇಶ!
ನವದೆಹಲಿ, ನವೆಂಬರ್.18: ಕೇಂದ್ರ ಸರ್ಕಾರದ ಚಳಿಗಾಲ ಅಧಿವೇಶನದಲ್ಲಿ ಎಲ್ಲ ವಿಷಯಗಳ ಮುಕ್ತ ಚರ್ಚೆಗೆ ಸಿದ್ಧವೆಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಈ ಬಾರಿ ಅಧಿವೇಶನದ ಮಹತ್ವವೇನು ಎಂಬುದನ್ನು ವಿಪಕ್ಷ ಸದಸ್ಯರಿಗೂ ತಿಳಿಸಿದ್ದಾರೆ.
ನವೆಂಬರ್.18ರಿಂದ ಆರಂಭವಾಗಿರುವ ಚಳಿಗಾಲ ಅಧಿವೇಶನ ಡಿಸೆಂಬರ್.13ರವರೆಗೂ ನಡೆಯಲಿದೆ. 2019ರಲ್ಲಿ ನಡೆಯುತ್ತಿರುವ ಕೊನೆಯ ಅಧಿವೇಶನವಾಗಿದ್ದು, ಆರೋಗ್ಯಕರ ಚರ್ಚೆಗೆ ಅವಕಾಶ ಕಲ್ಪಿಸಿ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ಸದಸ್ಯರಲ್ಲಿ ಮನವಿ ಮಾಡಿದ್ದಾರೆ.
ಈ ಬಾರಿ ನಡೆಯುತ್ತಿರುವ ಅಧಿವೇಶನ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಇದು ರಾಜ್ಯಸಭೆಯಲ್ಲಿ ನಡೆಯುತ್ತಿರುವ 250ನೇ ಅಧಿವೇಶನವಾಗಿದೆ. ಇದೇ ನವೆಂಬರ್.26ರಂದು ನಾವು ಗಣರಾಜೋತ್ಸವವನ್ನು ಆಚರಿಸುತ್ತಿದ್ದೇವೆ. ಅಂದಿಗೆ ಭಾರತದ ಸಂವಿಧಾನ ರಚನೆಯಾಗಿ 70 ವರ್ಶಗಳು ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ಸಂವಿಧಾನ ರಚನೆಯಾಗಿ 70 ವರ್ಷ ತುಂಬಲಿದ್ದು, ಅದರ ಬಗ್ಗೆ ದೇಶದ ಜನರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದರು.
ಕಳೆದ ಬಾರಿ ಸಂಸತ್ ಅಧಿವೇಶನ ಆರೋಗ್ಯಕರ ಚರ್ಚೆ ಮೂಲಕ ಸಂಪೂರ್ಣ ಯಶಸ್ವಿಯಾಗಿದ್ದು, ಅದಕ್ಕೆ ಎಲ್ಲ ಪಕ್ಷಗಳ ಸದಸ್ಯರು ಕಾರಣವಾಗಿದ್ದರು. ಕಳೆದ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ವಾಪಸ್ ಪಡೆಯುವ 370 ಕಾಯ್ದೆ, ತ್ರಿವಳಿ ತಲಾಖ್ ಸೇರಿದಂತೆ ಮಹತ್ವದ ಮಸೂದೆಗಳು ಪಾಸ್ ಆಗಿದ್ದವು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications