ಕೊವಿಡ್ 19: ದೆಹಲಿಯಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಂದಿ ಸಾವು
ನವದೆಹಲಿ, ನವೆಂಬರ್ 13: ದೆಹಲಿಯಲ್ಲಿ ಕೊರೊನಾ ಸೋಂಕು ತೀವ್ರವಾಗುತ್ತಿದೆ. ಗುರುವಾರ ಒಂದೇ ದಿನದಲ್ಲಿ 104 ಮಂದಿ ಮೃತಪಟ್ಟಿದ್ದಾರೆ. ನಿನ್ನೆ 7053 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಜೂನ್ 16ರಂದು ದೆಹಲಿಯಲ್ಲಿ 93 ಮಂದಿ ಮೃತಪಟ್ಟಿದ್ದರು, ಅದಾದ ಬಳಿಕ ಸಾವಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಕೊರೊನಾ ಮೂರನೇ ಅಲೆ ಶುರುವಾಗಿದ್ದು, ಒಂದೇ ದಿನದಲ್ಲಿ 104 ಮಂದಿಯ ಪ್ರಾಣವನ್ನು ಕಸಿದುಕೊಂಡಿದೆ.
ದೆಹಲಿಯಲ್ಲಿ ಒಟ್ಟು 4,67,028 ಕೊರೊನಾ ಸೋಂಕಿತರಿದ್ದಾರೆ. 4.16 ಲಕ್ಷ ಮಂದಿ ಗುಣಮುಖರಾಗಿದ್ದಾರೆ.ದೆಹಲಿಯಲ್ಲಿ ಚಳಿಗಾಲದ ಸಮಯದಲ್ಲಿ ದಿನಕ್ಕೆ 15 ಸಾವಿರ ಪ್ರಕರಣಗಳು ಪತ್ತೆಯಾಗಬಹುದು ಎಂದು ಅಂದಾಜಿಸಲಾಗಿದೆ. ದೆಹಲಿಯಲ್ಲಿ ವಾಯುಗುಣಮಟ್ಟ ಕೆಟ್ಟದಾಗಿದ್ದು, ಉಸಿರಾಟದ ಸಮಸ್ಯೆಗಳು ತೀವ್ರವಾಗಿವೆ. ಹೀಗಾಗಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.

ನಿತ್ಯ ಆರ್ಟಿ ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಗುರುವಾರ 47,905 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. 1,28,121 ಮಂದಿ ಸಾವನ್ನಪ್ಪಿದ್ದಾರೆ.
ನವದೆಹಲಿಯಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ.ಪ್ರತಿ ನಾಲ್ವರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸೆರೋ ಸಮೀಕ್ಷೆಯ ವರದಿಯಲ್ಲಿ ತಿಳಿದುಬಂದಿದೆ.
ದೆಹಲಿಯಲ್ಲಿ ನಿತ್ಯ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಪರೀಕ್ಷೆ ನಡೆಸಿದ ಕೇವಲ 25ರಷ್ಟು ಮಂದಿಯಲ್ಲಿ ಮಾತ್ರ ಪ್ರತಿಕಾಯಗಳು ಪತ್ತೆಯಾಗಿವೆ.
ಯಾವುದೇ ಮನೆಯನ್ನು ಕೊರೊನಾ ಸೋಂಕು ಪ್ರವೇಶಿಸಿಲ್ಲ ಎನ್ನುವ ಮನೆಗಳೇ ಇಲ್ಲ, ಯಾವ ಮನೆಯನ್ನೂ ಬಿಟ್ಟಿಲ್ಲ, ಕೊರೊನಾ ಲಾಕ್ಡೌನ್ ಸಡಿಲಗೊಳಿಸಿದ ಬಳಿಕ ಮತ್ತಷ್ಟು ಸೋಂಕು ಹೆಚ್ಚಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications