ಮೃತ ಪತಿಯ ವೀರ್ಯಕ್ಕಾಗಿ ಬೇಡಿಕೆ ಇಟ್ಟ ಪತ್ನಿ
ನವದೆಹಲಿ, ಜುಲೈ 11: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ವೈದ್ಯರ ಮುಂದೆ ನಂಬಲಸಾಧ್ಯವಾದ ಬೇಡಿಕೆಯೊಂದು ಬಂದಿದೆ. ಮೃತ ಪತಿಯ ವೀರ್ಯ ತೆಗೆದುಕೊಡಿ ಎಂದು ಪತ್ನಿಯೊಬ್ಬರು ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಆಸ್ಪತ್ರೆಗೆ ತರುವಾಗ ದಾರಿಮಧ್ಯದಲ್ಲಿ ಯುವಕನೊಬ್ಬ ಮೃತಪಟ್ಟಿದ್ದ. ಸಂತಾನಭಾಗ್ಯ ಕಾಣದ ಆತನ ಪತ್ನಿ ಈಗ ತನ್ನ ಪತಿಯ ವೀರ್ಯದಿಂದಲೇ ಸಂತಾನ ಪಡೆಯಲು ಇಚ್ಛಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.[Manufacturing Defect: ಪುರುಷ ನಾಶ ಸನ್ನಿಹಿತ]
ಈ ದಂಪತಿಗೆ ಮದುವೆಯಾಗಿ ಕೆಲ ವರ್ಷವಾಗಿದ್ದು, ಇನ್ನೂ ಮಕ್ಕಳಾಗಿರಲಿಲ್ಲ. ಇತ್ತೀಚೆಗೆ ಮೃತ ಪಟ್ಟ ಯುವಕನ ತಂದೆ ತಾಯಿ ಕೂಡಾ ಸೊಸೆಯ ಮನವಿಗೆ ದನಿಗೂಡಿಸಿದ್ದಾರೆ

ಹ್ಯೂಮನ್ ರಿಪ್ರೊಡಕ್ಟಿವ್ ಸೈನ್ಸಸ್ ಎಂಬ ನಿಯತಕಾಲಿಕದಲ್ಲಿ ಬರೆದ ಲೇಖನವೊಂದರಲ್ಲಿ ಈ ವಿಷಯವನ್ನು ವೈದ್ಯರು ಬಹಿರಂಗಪಡಿಸಿದ್ದಾರೆ. ಭವಿಷ್ಯದಲ್ಲಿ ಇಂಥ ಗೊಂದಲ ತಪ್ಪಿಸಲು ಸೂಕ್ತ ಮಾರ್ಗಸೂಚಿ ಸಿದ್ಧಪಡಿಸುವಂತೆ ವೈದ್ಯರು ಮನವಿ ಮಾಡಿದ್ದಾರೆ.
ಎಐಐಎಂಎಸ್ನ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಧೀರ್ ಗುಪ್ತಾ ಅವರ ಪ್ರಕಾರ, ವ್ಯಕ್ತಿಯೊಬ್ಬ ಮೃತಪಟ್ಟ ಒಂದು ದಿನದವರೆಗೂ ಆತನ ವೃಷಣದಲ್ಲಿ ವೀರ್ಯ ಜೀವಂತವಿರುತ್ತದೆ. ಅದನ್ನು ಸಂಗ್ರಹಿಸುವುದು ಸುಲಭ ವಿಧಾನ. ಕೇವಲ ಐದು ನಿಮಿಷದಲ್ಲಿ ವೀರ್ಯವನ್ನು ಹೊರತೆಗೆಯಬಹುದು. ಆದರೆ, ಇದರಲ್ಲಿ ನೈತಿಕ ಹಾಗೂ ಕಾನೂನು ಸಂಕೀರ್ಣತೆಗಳಿವೆ ಎಂದಿದ್ದಾರೆ.[ಈ ದಂಪತಿಗಳಿಗೆ ಐಐಟಿ ವಿದ್ಯಾರ್ಥಿಯ ವೀರ್ಯವೇ ಬೇಕಂತೆ!]
ದೇಶದಲ್ಲಿ ಎಆರ್ಟಿ ನಿಯಮಾವಳಿಯ ಪ್ರಕಾರ, ಮೃತ ಪತಿಯ ವೀರ್ಯವನ್ನು ಕೃತಕ ಗರ್ಭಧಾರಣೆ ವಿಧಾನದ ಮೂಲಕ ಮಹಿಳೆಗೆ ಬಳಸಲು ಅವಕಾಶವಿದೆ. ಆದರೆ ಇದು ಪತಿ ಜೀವಂತವಿದ್ದಾಗ ಸಂಗ್ರಹಿಸಿದ ವೀರ್ಯವಾಗಿರಬೇಕು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications