ದೆಹಲಿಯ ಫ್ಲ್ಯಾಟ್ ನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ದೆಹಲಿಯ ಫ್ಲ್ಯಾಟ್ ವೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮೂವತ್ತೆಂಟು ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯೊಂದಿಗೆ ಇದ್ದ ವ್ಯಕ್ತಿಗೆ ಕ್ರಿಮಿನಲ್ ಹಿನ್ನೆಲೆಯಿದ್ದು, ಆತ ನಾಪತ್ತೆಯಾಗಿದ್ದಾನೆ
ನವದೆಹಲಿ, ಮೇ 6: ಮೂವತ್ತೆಂಟು ವರ್ಷದ ಮಹಿಳೆಯ ಶವವೊಂದು ಬೆತ್ತಲೆ ಸ್ಥಿತಿಯಲ್ಲಿ ಪಶ್ಚಿಮ ತಿಲಕ್ ನಗರ್ ನ ಫ್ಲ್ಯಾಟ್ ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿಲಕ್ ನಗರ್ ನ ಫ್ಲ್ಯಾಟ್ ನಲ್ಲಿ ಮಹಿಳೆಯ ದೇಹ ಇದೆ ಎಂಬ ಮಾಹಿತೆ ಬೆಳಗ್ಗೆ ಹೊತ್ತಿಗೆ ಪೊಲೀಸರಿಗೆ ಸಿಕ್ಕಿದೆ.
ಮಹಿಳೆಯ ದೇಹವನ್ನು ಹೊದಿಕೆಯಿಂದ ಮುಚ್ಚಲಾಗಿತ್ತು. ಆಕೆಯ ದೇಹದ ಮೇಲೆ ಯಾವುದೇ ಬಟ್ಟೆಯಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯೊಂದಿಗೆ ಲಿವ್ ಇನ್ ರಿಲೇಷನ್ ಷಿಪ್ ಇದ್ದ, ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದ ವ್ಯಕ್ತಿ ತಲೆ ತಪ್ಪಿಸಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರಿಗಾಗಿ ಆಕೆ ತರಬೇತಿ ಕೇಂದ್ರವೊಂದನ್ನು ನಡೆಸುತ್ತಿದ್ದರು.[ಈ ಮೃಗಗಳು ಮಾಡಿದ್ದು ಕ್ಷಮಿಸಲು ಅರ್ಹವಲ್ಲದ ಅಪರಾಧ, ಬದುಕಲು ಅರ್ಹರಲ್ಲ!]

ಆಕೆಯ ದೇಹದಲ್ಲಿ ರಕ್ತ ಹೆಪ್ಪುಗಟ್ಟಿದೆ ಮತ್ತು ಆಕೆಯ ಮುಖದ ಮೇಲೆ ಗಾಯಗಳಾಗಿವೆ. ಆಕೆ ಮೊದಲ ಪತಿಯಿಂದ ಬೇರ್ಪಟ್ಟಿದ್ದರು. ಆ ದಾಂಪತ್ಯಕ್ಕೆ ಒಂದು ಗಂಡು ಮಗು ಇದೆ. ಆಕೆ ಸದ್ಯಕ್ಕೆ ವ್ಯಕ್ತಿಯೊಬ್ಬನ ಜತೆ ವಾಸವಿದ್ದರು. ಆತನೊಬ್ಬ ಆಸ್ತಿ ಮಾರಾಟಗಾರ. ಆತನ ಮೇಲೆ ಇಪ್ಪತ್ತು ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.[ಅಮೆರಿಕದಲ್ಲಿ ಮಂಗಳೂರು ಮೂಲದ ದಂಪತಿ ಹತ್ಯೆ]
ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸಲಾಗಿದ್ದು, ಸಾವಿಗೆ ಕಾರಣವನ್ನು ಕಂಡು ಹಿಡಿಯಬೇಕಿದೆ. ಮತ್ತು ಸಾವಿಗೂ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆಯೇ ಎಂದು ಕೂಡ ತಿಳಿದುಕೊಳ್ಳಲಾಗುವುದು ಎಂದು ಆತ ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications