ಅಜಂ ಖಾನ್ ಗೆ ಲೋಕಸಭೆಯಲ್ಲಿ ಮಹಿಳಾ ಸಂಸದರ ಒಕ್ಕೊರಲ ಧಿಕ್ಕಾರ!
ನವದೆಹಲಿ, ಜುಲೈ 26: ಸಂಸತ್ತು ಇಂಥ ಘಟನೆಗಳಿಗೆ ಸಾಕ್ಷಿಯಾಗುವುದು ವಿರಳಾತಿವಿರಳ. ಆಡಳಿತ ಪಕ್ಷದ ನಡೆ ಸರಿಯಾಗಿಯೇ ಇದ್ದರು ಅದನ್ನು ಒಪ್ಪದೆ, ವಿರೋಧಿಸಲೇಬೇಕು ಎಂಬ ಪೂರ್ವಗ್ರಹದಿಂದಾಗಿ ಸಂಸತ್ತಿಲ್ಲಿ ಆರೋಗ್ಯಕರ ಚರ್ಚೆಗಿಂತ ಗದ್ದಲವೇ ಹೆಚ್ಚಾಗುತ್ತಿದೆ.
ಆದರೆ ಶುಕ್ರವಾರ ಲೋಕಸಭೆಯಲ್ಲಿದ್ದ ಮಹಿಳಾ ಸಂಸದರೆಲ್ಲರೂ ಪಕ್ಷಭೇದ, ಸೈದ್ಧಾಂತಿಕ ಭಿನ್ನಾಭಿಪ್ರಾಯ ಮರೆತು ಒಂದಾಗಿದ್ದರು. ಮಹಿಳಾ ಸಂಸದರೊಬ್ಬರ ಬಗ್ಗೆ, ಅದರಲ್ಲೂ ಸ್ಪೀಕರ್ ಸ್ಥಾನದಲ್ಲಿ ಕುಳಿತಿದ್ದ ರಮಾದೇವಿ ಅವರ ಬಗ್ಗೆ ಅಸಭ್ಯವಾಗಿ ಮಾತನಾಡಿದ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಅವರನ್ನು ಗುರಿಯಾಗಿಸಿ ಒಕ್ಕೊರಲ ವಿರೋಧದ ಧ್ವನಿ ಮೊಳಗಿತ್ತು.
ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಗಣ್ಯಾತಿಗಣ್ಯರು ಸಂಸತ್ತಿನಲ್ಲಿ ಮಾತನಾಡಿದರು. ರಾಷ್ಟ್ರದ ಶಕ್ತಿ ಕೇಂದ್ರವಾದ ಸಂಸತ್ತಿನಲ್ಲೇ ಮಹಿಳೆಯರಿಗೆ, ಅದರಲ್ಲೂ ಸಂಸದರಾಗಿ ಸ್ಪೀಕರ್ ಖುರ್ಚಿಯಲ್ಲಿ ಕೂತಿದ್ದ ರಮಾದೇವಿ ಅವರಿಗೇ ಗೌರವ ಇಲ್ಲ ಎಂದಾದರೆ ಈ ದೇಶದ ಜನ ನಮ್ಮನ್ನು ಏನೆಂದು ಪರಿಗಣಿಸಬೇಕು ಎಂದು ಸಂಸದೆಯರು ಕಿಡಿಕಾರಿದರು.

"ಇದೊಂದು ಅಸಹ್ಯಕರ ಘಟನೆ. ಕಠಿಣ ಕ್ರಮ ಕೈಗೊಳಲ್ಳುವಂತೆ ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ" ಎಂದು ಹಣಕಾಸು ಸವಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಹೇಳದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಸ್ಮೃತಿ ಇರಾನಿ ಮಾತನಾಡಿ, "ಇಡೀ ದೇಶವೂ ಅವರ ಮಾತನ್ನು ಕೇಳಿಸಿಕೊಂಡಿದೆ. ಸಂಸತ್ತಿನ ಹೊರಗಡೆ ಇಂಥ ವರ್ತನೆಯಾದರೆ ಏನು ಮಾಡುತ್ತಾರೆ? ಪೊಲೀಸರನ್ನು ಕರೆಯುವುದಿಲ್ಲವೇ? ಈಗಲೂ ಅದೇ ಆಗಬೇಕು. ಇವನ್ನೆಲ್ಲ ನೋಡಿಕೊಂಡು ನಾವು ಸುಮ್ಮನೆ ಕೂರುವುದಿಲ್ಲ. ಮಂತ್ರಿ ಎಂಬ ಕಾರಣಕ್ಕಲ್ಲ, ಒಬ್ಬ ಮಹಿಳೆಯಾಗಿ ಎಲ್ಲರೊಂದಿಗೆ ನಾನೂ ಇದನ್ನು ವಿರೋಧಿಸುತ್ತೇನೆ" ಎಂದು ಕಿಡಿಕಾರಿದರು.
ಪಶ್ಚಿಮ ಬಂಗಾಳದ ಸಂಸದೆ ಮೀಮಿ ಚಕ್ರವರ್ತಿ, "ನಾನು ಈ ಸಂಸತ್ತಿನಲ್ಲಿರುವ ಅತ್ಯಂತ ಕಿರಿಯ ಮಹಿಳಾ ಸಂಸದರಲ್ಲೊಬ್ಬಳು. ನಾವು ಸಂಸತ್ತಿನಲ್ಲಿ ಪ್ರತಿದಿನವೂ ಉತ್ತಮವಾದುದನ್ನು ಕಲಿಸಯುತ್ತಿದ್ದೇವೆ. ಆದರೆ ನಿನ್ನೆಯ ಬೆಳವಣಿಗೆ ಯಾವ ಸಂದೇಶ ನೀಡುತ್ತದೆ? ನಾವು ಯಾವ ಪಕ್ಷದವರೇ ಇರಲಿ, ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯವಿರಲಿ. ನಾವೆಲ್ಲ ಮಹಿಳೆಯರು. ಇಂಥ ನಡೆಯನ್ನು ನಾವು ಒಗ್ಗಟ್ಟಿನಿಂದ ಖಂಡಿಸುತ್ತೇವೆ" ಎಂದರು.
ತಮಿಖುನಾಡಿನ ಸಂಸದೆ ಕನ್ನಿಮೋಳಿ, "ಇಂದಿನ ಪ್ರಜಾಪ್ರಭುತ್ವ ಕಾಲದಲ್ಲೂ ಮಹಿಳೆಯರ ಮೇಲೆ ಈ ರೀತಿ ಅಗೌರವ ತೋರಿಸುವವರಿದ್ದಾರೆ ಎಂದರೆ ನಂಬುವುದು ಕಷ್ಟ. ಅವರ ವಿರುದ್ಧ ಕ್ರಮ ಕೈಗೊಳ್ಳಲು ನಾವೆಲ್ಲರೂ ಆಗ್ರಹಿಸುತ್ತೇವೆ" ಎಂದರು.
ಗುರುವಾರ ತ್ರಿವಳಿ ತಲಾಖ್ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ಸಮಯದಲ್ಲಿ ಸ್ಪೀಕರ್ ಕುರ್ಚಿಯಲ್ಲಿದ್ದ ಬಿಹಾರದ ಶಿಯೋಹರ್ ಕ್ಷೇತ್ರದ ಸಂಸದೆ ರಮಾದೇವಿ ಅವರನ್ನು "ನೀವಂದ್ರೆ ನನಗೆ ಇಷ್ಟ, ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕು ಎಂದು ನನಗೆ ಅನ್ನಿಸುತ್ತದೆ' ಎಂದು ಆಜಂ ಖಾನ್ ಹೇಳಿದ್ದರು. ನಂತರ ತಾವೇನೂ ತಪ್ಪು ಮಾಡಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದು ಅವರು ಹೇಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications