ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆಗೆ ಪ್ರವೇಶಿಸಿದ್ದ ಮಹಿಳೆಯರಿಗೆ ಜೀವ ಬೆದರಿಕೆ: ಸುಪ್ರೀಂ ಮೊರೆ

|
Google Oneindia Kannada News

ನವದೆಹಲಿ, ಜನವರಿ 17: ವಿರೋಧಗಳ ನಡುವೆ ಶಬರಿಮಲೆ ಅಯ್ಯಪ್ಪ ದೇಗುವ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ್ದ ಇಬ್ಬರು ಮಹಿಳೆಯರಿಗೆ ಜೀವಬೆದರಿಕೆ ಇದೆ ನಮಗೆ ರಕ್ಷಣೆ ನೀಡಿ ಎಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಶಬರಿಮಲೆ ಪ್ರವೇಶಿಸಿದ್ದ ಕನಕದುರ್ಗಾ ಮೇಲೆ ಅತ್ತೆಯಿಂದ ಹಲ್ಲೆ ಶಬರಿಮಲೆ ಪ್ರವೇಶಿಸಿದ್ದ ಕನಕದುರ್ಗಾ ಮೇಲೆ ಅತ್ತೆಯಿಂದ ಹಲ್ಲೆ

ಸಾಮಾಜಿಕ ಕಾರ್ಯಕರ್ತೆ ಕನಕದುರ್ಗ(39) ಹಾಗೂ ಕೇಳದ ಕಣ್ಣೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಬಿಂದು ಅಮ್ಮನಿ ಸುಪ್ರೀಂಗೆ ಮೊರೆ ಹೋಗಿದ್ದಾರೆ. ರಕ್ಷಣೆ ನೀಡಿ ಎಂದು ಮನವಿ ಮಾಡಿದ್ದಾರೆ. ಕನಕದುರ್ಗ ಅವರ ಮೇಲೆ ಅವರ ಅತ್ತೆಯೇ ಹಲ್ಲೆ ನಡೆಸಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಬರಿಮಲೆಗೆ ತೆರಳಿದ್ದ ಇಬ್ಬರು ಮಹಿಳೆಯರ ಕತೆ ಮುಂದೇನಾಯ್ತು? ಶಬರಿಮಲೆಗೆ ತೆರಳಿದ್ದ ಇಬ್ಬರು ಮಹಿಳೆಯರ ಕತೆ ಮುಂದೇನಾಯ್ತು?

50 ವರ್ಷದೊಳಗಿನ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರೂ ಕನಕ ದುರ್ಗಾ ಅವರು 40 ವರ್ಷದ ಬಿಂದು ಅಮ್ಮಿನಿ ಎಂಬ ಮಹಿಳೆ ಜತೆ ಶಬರಿಮಲೆ ದೇಗುಲ ಪ್ರವೇಶಿಸಿದ್ದರು. ದೇಗುಲ ಪ್ರವೇಶಿದ ಇಬ್ಬರೂ ಮಹಿಳೆಯರಿಗೆ 24 ಗಂಟೆ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಶುಕ್ರವಾರ ಸುಪ್ರೀಂ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ತಿಳಿಸಿದ್ದಾರೆ.

Women Who Entered Sabarimala Seek Protection

ಜ.2ರ ತಡರಾತ್ರಿ ಕನಕದುರ್ಗಾ ಮತ್ತು ಬಿಂದು ಪೊಲೀಸ್​ ಬಿಗಿ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ್ದರು. ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಪಡೆಯಬಹುದು ಎಂದು ಸುಪ್ರೀಂ ತೀರ್ಪು ನೀಡಿದ್ದರೂ ಭಕ್ತರು ಸುಪ್ರೀಂ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಅನುಮತಿ ನೀಡಿದ್ದರೂ ಸಾವಿರಾರು ಭಕ್ತರು ಮಹಿಳೆಯರ ದೇಗುಲ ಪ್ರವೇಶವನ್ನು ತಡೆದಿದ್ದರು.

English summary
Faced with threats, two women who entered Kerala's Sabarimala temple earlier this month - defying a decades-old ban on women of menstrual age - have approached the Supreme Court seeking protection. The top court has agreed to hear their request tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X