ಬಳಕೆದಾರರಿಗೆ ಹೊಸ ನಿಯಮವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ: ವಾಟ್ಸಾಪ್
ನವದೆಹಲಿ, ಜುಲೈ 09: ಬಳಕೆದಾರರಿಗೆ ನೂತನ ಗೌಪ್ಯತಾ ನಿಯಮವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವುದಿಲ್ಲ ಎಂದು ವಾಟ್ಸಾಪ್ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
ದತ್ತಾಂಶ ಸಂರಕ್ಷಣಾ ಮಸೂದೆ ಜಾರಿಗೆ ಬರುವವರೆಗೂ ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಬಳಕೆದಾರರನ್ನು ಒತ್ತಾಯಿಸುವುದಿಲ್ಲ ಎಂದು ಹೇಳಿದೆ.
ವಾಟ್ಸಾಪ್ ಪರ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು, ಹೊಸ ನೀತಿಯನ್ನು ತಡೆ ಹಿಡಿಯಲು ನಿರ್ಧರಿಸಲಾಗಿದ್ದು, ಯಾವುದೇ ಬಳಕೆದಾರರೂ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ನಾವು ಒತ್ತಾಯಿಸುವುದಿಲ್ಲ. ಆದಾಗ್ಯೂ ವಾಟ್ಸಾಪ್ ತನ್ನ ಬಳಕೆದಾರರಿಗೆ ನವೀಕರಣ (ಅಪ್ಡೇಟ್) ವನ್ನು ಪ್ರದರ್ಶಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳದವರ ವಾಟ್ಸಾಪ್ ಬಳಕೆಯನ್ನು ಮಿತಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಾಟ್ಸಾಪ್ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಫೇಸ್ಬುಕ್ ಮತ್ತು ವಾಟ್ಸಾಪ್ ದೆಹಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಫೇಸ್ಬುಕ್ ಒಡೆತನದ ವಾಟ್ಸಾಪ್ ಇಂದು ಹೇಳಿಕೆ ನೀಡಿದ್ದು, ದತ್ತಾಂಶ ಸಂರಕ್ಷಣಾ ಮಸೂದೆ ಜಾರಿಗೆ ಬರುವವರೆಗೂ ಹೊಸ ಗೌಪ್ಯತೆ ನೀತಿಯನ್ನು ಒಪ್ಪಿಕೊಳ್ಳುವಂತೆ ಬಳಕೆದಾರರನ್ನು ಒತ್ತಾಯಿಸುವುದಿಲ್ಲ ಎಂದು ಹೇಳಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications