'ಲವ್ ಜಿಹಾದ್' ವಿವಾದದಲ್ಲಿ ಯೋಗಿ ಆದಿತ್ಯಾನಾಥ್
ನವದೆಹಲಿ, ಆ.28: ಸಂಸತ್ತಿನಲ್ಲಿ ವಿವಾದಾತ್ಮಕ ಭಾಷಣ ಮಾಡಿದ ಖ್ಯಾತಿ ಬೆನ್ನ ಹಿಂದೆ ಹೊತ್ತಿರುವ ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್ ಅವರು ಈಗ ಲವ್ ಜಿಹಾದ್ ವಿರುದ್ಧ ನೀಡಿರುವ ಹೇಳಿಕೆ ಅನೇಕರನ್ನು ಕೆರಳಿಸಿದೆ.
ಯೋಗಿ ಆದಿತ್ಯಾನಾಥ್ ಅವರ ಹೇಳಿಕೆ ಈಗ ಅಲ್ಪಸಂಖ್ಯಾತ ಮುಸ್ಲಿಂ ಜನಾಂಗದ ನಾಯಕರನ್ನು ಕೆರಳಿಸಿದೆ. ಯೋಗಿ ಆದಿತ್ಯಾನಾಥ್ ಅವರು ವಿಡಿಯೋವೊಂದರಲ್ಲಿ ಮಾತನಾಡುತ್ತಾ 'ಅವರು ಒಬ್ಬ ಹಿಂದು ಹುಡುಗಿಯನ್ನು ತೆಗೆದುಕೊಂಡರೆ, ನಾವು 100 ಹುಡುಗಿಯನ್ನು ತೆಗೆದುಕೊಳ್ಳುತ್ತೇವೆ" ಎಂದಿದ್ದಾರೆ. ಸುಮಾರು ಏಳು ವರ್ಷಗಳ ಹಿಂದೆ ಅಜಮ್ ಘರ್ ನ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀಡಿದ ಭಾಷಣ ಇದಾಗಿದೆ ಎಂದು ತಿಳಿದು ಬಂದಿದೆ.
ಜೊತೆಗೆ ನಮ್ಮ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೇಮಿಸಿ ಮದುವೆಯಾಗಬೇಕು ನಂತರ ಅವರನ್ನು ಹಿಂದೂ ಆಗಿ ಮತಾಂತರ ಮಾಡಿ. ಹಿಂದೂ ಧರ್ಮಕ್ಕೆ ಮತಾಂತರವಾಗುವ ಯಾವುದೇ ಕೋಮಿನವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಆದಿತ್ಯಾನಾಥ್ ಅವರು ಅನೇಕ ಬೆಂಬಲಿಗರ ಮುಂದೆ ನೀಡಿದ ಈ ಹೇಳಿಕೆ ಪ್ರಚೋದನಕಾರಿ ಸಂದೇಶ ರವಾನಿಸಿದಂತೆ ಆಗಿದೆ. ಹಿಂದೂ ಹೆಣ್ಣುಮಕ್ಕಳನ್ನು ಸಮಾಜ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. ಅವರಿಗೆ ಸೂಕ್ತ ಗೌರವ ಸಿಗಬೇಕಿದೆ ಎಂದಿದ್ದಾರೆ.
ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾಧ್ಯಮಗಳು ದನಿ ಎತ್ತುತ್ತಿಲ್ಲ ಏಕೆ, ರಾಷ್ಟ್ರೀಯ ಕ್ರೀಡಾಪಟುವೊಬ್ಬರ ಲವ್ ಜಿಹಾದ್ ಪ್ರಕರಣ ನಮ್ಮ ಕಣ್ಮುಂದೆ ಇದೆ. ಸರಿಯಾದ ನ್ಯಾಯ ಸಿಗಬೇಕಿದೆ ಎಂದಿದ್ದಾರೆ.
ಆದರೆ, ವಿಡಿಯೋದಲ್ಲಿ ನೀಡಿರುವ ಹೇಳಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಆದಿತ್ಯಾನಾಥ್, ನಾನು ಯಾವುದೇ ಸ್ಪಷ್ಟನೆ ನೀಡಬೇಕಾಗಿಲ್ಲ ಎಂದಿದ್ದಾರೆ. ಯೋಗಿ ಆದಿತ್ಯಾನಾಥ್ ಅವರ ಹೇಳಿಕೆಯನ್ನು ಖಂಡಿಸಿರುವ ಸಮಾಜವಾದಿ ಪಕ್ಷ ಈ ಬಗ್ಗೆ ಬಿಜೆಪಿಯಲ್ಲಿ ಸ್ಪಷ್ಟನೆ ಕೇಳಿದೆ. ಮುಸ್ಲಿಂ ಮೌಲ್ವಿಗಳು ಕೂಡಾ ಬಿಜೆಪಿ ಸಂಸದನ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಈ ಹಿಂದೆ ಸಂಸತ್ತಿನಲ್ಲಿ ಮಾತನಾಡುತ್ತಾ, ಪಾಕಿಸ್ತಾನದ ಪರವಾಗಿ ಕಾಂಗ್ರೆಸ್ ನಾಯಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆಯನ್ನು ಆದಿತ್ಯಾನಾಥ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications