ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಗಿಯವರೇ ದಯವಿಟ್ಟು ಅಯೋಧ್ಯೆ ಬಗ್ಗೆ ಮೋದಿ ಬಳಿ ಮಾತನಾಡಿ: ದಿಗ್ವಿಜಯ್ ಸಿಂಗ್

|
Google Oneindia Kannada News

ನವದೆಹಲಿ, ಆಗಸ್ಟ್ 03: 'ಯೋಗಿಯವರೇ ದಯವಿಟ್ಟು ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕುರಿತು ಪ್ರಧಾನಿ ಮೋದಿಯವರ ಬಳಿ ಮಾತನಾಡಿ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕೊರೊನಾ ಸೋಂಕು ದೇಶದಲ್ಲಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಸುವುದು ಬೇಡ ಎಂಬುದು ನಮ್ಮ ಅಭಿಪ್ರಾಯ. ಈಗಾಗಲೇ ಅಮಿತ್ ಶಾ ಸೇರಿದಂತೆ ಹಲವು ನಾಯಕರು, ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಒಂದೊಮ್ಮೆ ಕಾರ್ಯಕ್ರಮ ನಡೆದರೆ ಮತ್ತೆ ನೂರಾರು ಮಂದಿಗೆ ಕೊರೊನಾ ಸೋಂಕು ಹರಡಲು ದಾರಿ ಮಾಡಿಕೊಟ್ಟಂತಾಗುತ್ತದೆ.

ಅಯೋಧ್ಯೆ ಭೂಮಿ ಪೂಜೆಗೆ ಹೋಗಲ್ಲ: ಬಿಜೆಪಿ ನಾಯಕಿ ಉಮಾ ಭಾರತಿಅಯೋಧ್ಯೆ ಭೂಮಿ ಪೂಜೆಗೆ ಹೋಗಲ್ಲ: ಬಿಜೆಪಿ ನಾಯಕಿ ಉಮಾ ಭಾರತಿ

ಹೀಗಾಗಿ ಭೂಮಿ ಪೂಜೆಯನ್ನು ಮುಂದೂಡುವಂತೆ, ಪ್ರಧಾನಿ ಮನವೊಲಿಸಲು ಪ್ರಯತ್ನ ಮಾಡಿ ಎಂದು ಸಿಂಗ್ ಹೇಳಿದ್ದಾರೆ.

Yogi Please Talk To PM Digvijaya Singh Says Defer Ayodhya Event

'ಮೋದಿಯವರೇ ಇನ್ನೆಷ್ಟು ಮಂದಿಯನ್ನು ಆಸ್ಪತ್ರೆಗೆ ಕಳುಹಿಸಬೇಕೆಂದಿದ್ದೀರಾ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ಪೂಜಾರಿ, ಪೊಲೀಸರು, ಉತ್ತರ ಪ್ರದೇಶ ಸಚಿವರು, ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ, ಅಮಿತ್ ಶಾ ಇವರೆಲ್ಲರಿಗೂ ಸೋಂಕು ತಗುಲಿದೆ.

ಕೇವಲ ಸಾಮಾನ್ಯ ಜನರು ಮಾತ್ರ ಗೃಹಬಂಧನದಲ್ಲಿರಬೇಕೆ, ಉತ್ತರ ಪ್ರದೇಶ ಮುಖ್ಯಮಂತ್ರಿ, ಪ್ರಧಾನಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಈಗಾಗಲೇ ಬಿಜೆಪಿ ನಾಯಕಿ ಉಮಾ ಭಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

English summary
Senior Congress leader Digvijaya Singh, in tweets seen as regressive by many, urged Prime Minister Narendra Modi to put off the grand Ram temple launch event at Ayodhya on Wednesday, insisting that the timing was "inauspicious" and hinting that it was why many associated with the function had contracted coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X