ಸಮಯಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಪೊಲೀಸ್ ಪೇದೆ!
ನಾಸಿಕ್, ಸೆಪ್ಟೆಂಬರ್, 15 : ನಾಸಿಕ್ ಕುಂಭಮೇಳ ಪ್ರಯುಕ್ತ ಗೋದಾವರಿ ನದಿಯಲ್ಲಿ ಮಿಂದು ಪವಿತ್ರರಾಗಲು ಹಲವಾರು ಭಕ್ತರು ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಒಂದು ಸಾಹಸಮಯ ಘಟನೆ ಸೋಮವಾರ ನಡೆದಿದೆ.
ನಾಸಿಕ್ ಮೇಳದ ಜನಸಾಗರವನ್ನು ನಿಯಂತ್ರಣದಲ್ಲಿರಿಸಲು ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿತು. ಅದರಲ್ಲಿ ಮನೋಜ್ ಬರಹಟೆ ಎಂಬ ಪೊಲೀಸ್ ಅಧಿಕಾರಿ 20 ಅಡಿ ಎತ್ತರದ ನಾಲೆಯಿಂದ ನದಿಗೆ ಹಾರಿ ಒಬ್ಬ ವ್ಯಕ್ತಿಯ ಜೀವವನ್ನು ಬದುಕಿಸಿದ್ದಾನೆ. ಸಮಯಪ್ರಜ್ಞೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.[ಚಿತ್ರಗಳಲ್ಲಿ : ನಾಸಿಕ್ ಕುಂಭಮೇಳದಲ್ಲಿ ಪವಿತ್ರ ಸ್ನಾನ]

24 ವರ್ಷದವನಾದ ಮನೋಜ್ ಬರಹಟೆ ಪೊಲೀಸ್ ಕಾನ್ ಸ್ಟೆಬಲ್ ತರಬೇತಿ ಪಡೆಯುತ್ತಿದ್ದನು. ಈ ನಿಮಿತ್ತ ಕುಂಭಮೇಳದ ನಿಯಂತ್ರಣಕ್ಕಾಗಿ ನಿಯೋಜನೆಗೊಂಡಿದ್ದನು. ಈತ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ವ್ಯಕ್ತಿಯ ಪ್ರಾಣವನ್ನು ಉಳಿಸಲು ತನ್ನ ಜೀವದ ಹಂಗು ತೊರೆದು ಅಮರ್ ಧಾಮ್ ಎಂಬ ನಾಲೆಯಿಂದ 20 ಅಡಿ ಆಳಕ್ಕೆ ಧುಮುಕಿದ್ದಾನೆ.
ಕುಂಭಮೇಳದಲ್ಲಿ ಪ್ರಾಣ ಕಳೆದುಕೊಳ್ಳಲು ಒಬ್ಬ ವ್ಯಕ್ತಿ ನಾಲೆಯ ಮೇಲೆ ನಿಂತಿರುವುದನ್ನು ಗಮನಿಸಿದ ಪೊಲೀಸ್ ಅಧಿಕಾರಿಗಳು ಆತನನ್ನು ತಡೆಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ಆತ ನದಿಗೆ ಹಾರಿದ್ದಾನೆ. ಇದನ್ನು ನೋಡಿದ ಮನೋಜ್ ಅವರು ಮೀನ-ಮೇಷ ಎಣಿಸದೆ ನೀರಿಗೆ ಹಾರಿ ಸಾವು ಬದುಕಿನ ಮಧ್ಯೆ ಸಿಲುಕಿದ್ದ ವ್ಯಕ್ತಿಯನ್ನು ಉಳಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Policeman Manoj Barahate jumped off from 20 ft high bridge to save a man. One more life saved! Salute to his #bravery pic.twitter.com/jPDmFy8Aoy
— Praveen Gedam (@praveengedam) September 14, 2015 -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications