ಸುಷ್ಮಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ,ಜೂ.15: ಐಪಿಎಲ್ ಸ್ಥಾಪಕ, ಮಾಜಿ ಚೇರ್ಮನ್ ಲಲಿತ್ ಮೋದಿ ಅವರ ವೀಸಾ ವಿಸ್ತರಣೆಗೆ ಮಾನವೀಯ ನೆಲೆಯಲ್ಲಿ ನೆರವು ನೀಡಿದ ತಪ್ಪಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಮುಂದೆ ಕಾಂಗ್ರೆಸ್ ನ ಯುವ ಪ್ರತಿಭಟನೆ ಮಾಡುವಂತಾಗಿದೆ. ಸುಷ್ಮಾ ಅವರದ್ದು ಸ್ವಹಿತಾಸಕ್ತಿಯೇ ಹೊರತು ಇಲ್ಲಿ ಯಾವ ಮಾನವೀಯ ನೆಲೆಯೂ ಕಂಡು ಬಂದಿಲ್ಲ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ನೈತಿಕ ಹೊಣೆ ಹೊತ್ತು ಸುಷ್ಮಾ ಸ್ವರಾಜ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್ ಎಚ್ಚರಿಸಿದೆ. ['ಸುಷ್ಮಾ ಮೇಡಂ, ಇದೇ ರೀತಿ ದಾವೂದ್ ಗೂ ಹೆಲ್ಪ್ ಮಾಡ್ತೀರಾ?']
700 ಕೋಟಿ ರು.ಗಳ ಐಪಿಎಲ್ ಬೆಟ್ಟಿಂಗ್ ಹಗರಣದಲ್ಲಿ ಸಿಲುಕಿ, ಬಂಧನಕ್ಕೆ ಹೆದರಿ ವಿದೇಶದಲ್ಲಿರುವ ಲಲಿತ್ ಮೋದಿಗೆ ಮಾನವೀಯತೆಯ ನೆಪವೊಡ್ಡಿ ಸಹಾಯ ಮಾಡಿರುವುದು ಎಷ್ಟು ಸರಿ? ಸಚಿವೆ ಸುಷ್ಮಾ ಸ್ವರಾಜ್ ಮತ್ತು ಲಲಿತ್ ಮೋದಿ ಕುಟುಂಬದ ನಡುವೆ ಇರುವ ಸಂಬಂಧಗಳು ಎಲ್ಲರಿಗೂ ತಿಳಿದಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಶಾಂತ್ ಭೂಷಣ್ ಆಗ್ರಹ:
ಈ ಪ್ರಕರಣದಲ್ಲಿ ಮಾನವೀಯ ನೆಲೆ ಎಲ್ಲಿಯೂ ಇಲ್ಲ. ಇದು ಸಂಪೂರ್ಣವಾಗಿ ಅವರ ವೈಯಕ್ತಿಕ ಹಿತಾಸಕ್ತಿಯ ಕೆಲಸವಾಗಿದ್ದು, ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಶುಷ್ಮಾ ಸ್ವರಾಜ್ರವರ ಪುತ್ರಿಯೇ ಲಲಿತ್ ಮೋದಿ ಅವರ ಪರ ವಕೀಲೆ ಎಂಬುದನ್ನು ಮರೆಯುವಂತಿಲ್ಲ ಎಂದಿದ್ದಾರೆ.
|
ಆರೆಸ್ಸೆಸ್ ಕೂಡಾ ಬೆಂಬಲ ನೀಡುತ್ತಿದೆ ಏಕೆ?
ದೇಶದ ವಿಷಯ ಬಂದರೆ ಪಕ್ಷಾತೀತವಾಗಿ ಯೋಚಿಸುವ ಸಂಘಟನೆ ಎನಿಸಿಕೊಂಡಿರುವ ಆರೆಸ್ಸೆಸ್ ಕೂಡಾ ಸುಷ್ಮಾ ಸ್ವರಾಜ್ ಅವರ ಬೆಂಬಲಕ್ಕೆ ನಿಂತಿರುವುದು ಅಚ್ಚರಿಯ ವಿಷಯ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
|
ಯುವ ಕಾಂಗ್ರೆಸ್ ಮುಖಂಡರ ಪ್ರತಿಭಟನೆ
ಯುವ ಕಾಂಗ್ರೆಸ್ ಮುಖಂಡರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ.
|
ಮೋದಿ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ
ಮೋದಿ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಈಗ ಎಂಬುದು ಕುತೂಹಲಕಾರಿಯಾಗಿದೆ ಎಂದು ಸೀತಾರಾಮ್ ಯೆಚೂರಿ ಪ್ರತಿಕ್ರಿಯಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications