ರಾಷ್ಟ್ರಪತಿ ಆಯ್ಕೆ, ವೈಎಸ್ ಆರ್ ಕಾಂಗ್ರೆಸ್ ಬೆಂಬಲ ಬಿಜೆಪಿಗೆ
ಬಿಜೆಪಿಯಿಂದ ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಚುನಾವಣೆಗೆ ಕಣಕ್ಕೆ ಇಳಿಸಲಾಗುತ್ತದೋ ಅವರನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ನವದೆಹಲಿಯಲ್ಲಿ ಪ್ರಧಾನಿ ಭೇಟಿ ನಂತರ ಹೇಳಿದ್ದಾರೆ
ನವದೆಹಲಿ, ಮೇ 10: ಬಿಜೆಪಿಯು ಕಣಕ್ಕೆ ಇಳಿಸುವ ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯನ್ನು ವೈಎಸ್ ಆರ್ ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಬುಧವಾರ ಹೇಳಿದ್ದಾರೆ. ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಅವರನ್ನು ಅರ್ಧ ಗಂಟೆ ಕಾಲ ಮಾತನಾಡಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ.
ಬಿಜೆಪಿಯಿಂದ ಕಣಕ್ಕೆ ಇಳಿಸುವ ಯಾವುದೇ ಅಭ್ಯರ್ಥಿಗೆ ನಮ್ಮ ಬೆಂಬಲವಿದೆ. ಏಕೆಂದರೆ ನಮ್ಮ ಅಭಿಪ್ರಾಯದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಭೂಸ್ವಾಧೀನ ಮಸೂದೆ ಮತ್ತು ಆಂಧ್ರಕ್ಕೆ ವಿಶೇಷ ಸ್ಥಾನ ಮಾನ ವಿಚಾರ ಬಿಟ್ಟು ಉಳಿದ ವಿಷಯಗಳಲ್ಲಿ ನಮ್ಮ ಅಭಿಪ್ರಾಯಗಳು ಒಂದೇ ಥರ ಇವೆ" ಎಂದು ಜಗನ್ ಹೇಳಿದ್ದಾರೆ.[ಸಿಬಿಐಗೆ ಹಿನ್ನಡೆ, ಜಗನ್ ರೆಡ್ಡಿ ಜಾಮೀನು ಮುಂದುವರಿಕೆ]

ಅಗತ್ಯ ಸಂಖ್ಯೆಯ ಬಲವಿರುವ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಿದೆ. ಅಂಥದ್ದರಲ್ಲಿ ಆ ಅಭ್ಯರ್ಥಿ ವಿರುದ್ಧ ಮತ್ತೊಬ್ಬರನ್ನು ಕಣಕ್ಕೆ ಇಳಿಸುವುದು ವಿವೇಚನೆಯಲ್ಲ ಎಂದು ಹೇಳಿದ್ದಾರೆ. ಅಚ್ಚರಿ ಸಂಗತಿ ಏನೆಂದರೆ, ಆಂಧ್ರದಲ್ಲಿ ವೈಎಸ್ ಆರ್ ಕಾಂಗ್ರೆಸ್ ವಿಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಧಿಕಾರದಲ್ಲಿರುವುದು ಬಿಜೆಪಿಯ ಮಿತ್ರ ಪಕ್ಷವಾಗಿರುವ ಟಿಡಿಪಿ.
ಅಗ್ರಿಗೋಲ್ಡ್ ಕಂಪೆನಿಯಿಂದ ವಂಚಿತರದವರಿಗೆ ನ್ಯಾಯ ಒದಗಿಸಬೇಕು. ಮೆಣಸಿನಕಾಯಿ ಬೆಳೆಗಾರರಿಗೆ ಉತ್ತಮ ಬೆಂಬಲ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಗನ್ ಮೋಹನ್ ರೆಡ್ಡಿ ಮನವಿ ಮಾಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications