ಯುಪಿಯಲ್ಲಿ ಜೀ ಸುದ್ದಿವಾಚಕನ ಬಂಧಿಸಿದ ಛತ್ತೀಸ್ ಗಢ ಪೊಲೀಸ್
ಲಕ್ನೋ, ಜುಲೈ 5: ಜೀ ಮಾಧ್ಯಮದ ಅಧೀನ ಸಂಸ್ಥೆಯ ಸುದ್ದಿವಾಚಕ ರೋಹಿತ್ ರಂಜನ್ ಬಂಧನವಾಗಿದೆ. ಉತ್ತರಪ್ರದೇಶದಲ್ಲಿ ರೋಹಿತ್ ರನ್ನು ಛತ್ತೀಸ್ ಗಢ ಪೊಲೀಸ್ ಬಂಧಿಸಿದ್ದಾರೆ. ಆದರೆ, ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಸುಳಿವು ಕೂಡಾ ತಿಳಿದು ಬಂದಿಲ್ಲ. ಜೀ ನ್ಯೂಸ್ ಆಂಕರ್ ಮನೆಗೆ ದಿಢೀರನೇ ಪೊಲೀಸರು ನುಗ್ಗಿ ಬಂಧಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಜೀ ಅಂಗ ಸಂಸ್ಥೆ ಡಿಎನ್ಎಯಲ್ಲಿ ಪ್ರೈಮ್ಟೈಮ್ ಶೋ ನಡೆಸಿ ಕೊಡುವ ಆಂಕರ್ ರೋಹಿತ್ ರಂಜನ್ ಶೋ ನಡುವೆ ಪ್ಲೇ ಮಾಡಿದ ವಿಡಿಯೋಗೆ ಸಂಬಂಧಿಸಿದಂತೆ ಅವರನ್ನು ಛತ್ತೀಸ್ಗಢ ಪೊಲೀಸರು ಮಂಗಳವಾರ ಬೆಳಗ್ಗೆ ಬಂಧಿಸಿದ್ದರು. ಇದೀಗ ಸುದ್ದಿ ನಿರೂಪಕರನ್ನು ಅಧಿಕಾರಿಗಳು ಬಂಧಿಸಿದ ರೀತಿ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಮೂಲಗಳ ಪ್ರಕಾರ, ಛತ್ತೀಸ್ಗಢ ಪೊಲೀಸರು ಮಂಗಳವಾರ ಮುಂಜಾನೆ ರೋಹಿತ್ ರಂಜನ್ ಅವರನ್ನು ಬಂಧಿಸಲು ಅವರ ನಿವಾಸಕ್ಕೆ ಅನುಮತಿ ಇಲ್ಲದೆ ಪ್ರವೇಶಿಸಿದರು, ಝೀ ನ್ಯೂಸ್ ನಿರೂಪಕರನ್ನು ಬಂಧಿಸಿದ ಪೊಲೀಸರು ಸಮವಸ್ತ್ರದಲ್ಲಿರಲಿಲ್ಲ, ಎಲ್ಲರೂ ಮಫ್ತಿಯಲ್ಲಿದ್ದರು ಎಂದು ತಿಳಿದು ಬಂದಿದೆ.

ಗಾಜಿಯಾಬಾದ್ನ ಇಂದ್ರಪುರಂನಲ್ಲಿರುವ ರೋಹಿತ್ ರಂಜನ್ ಅವರ ಮನೆಗೆ ಛತ್ತೀಸ್ಗಢದಿಂದ ಬಂದಿದ್ದ ಸುಮಾರು 15 ಪೊಲೀಸ್ ಸಿಬ್ಬಂದಿ ಪ್ರವೇಶಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಮನೆ ಇರುವ ಸೊಸೈಟಿ ಗೇಟ್ಗಳ ಭದ್ರತಾ ಸಿಬ್ಬಂದಿಯ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ ಸ್ಥಳದಿಂದ ಚದುರಿಸಲು ಅನುಮತಿಸಲಿಲ್ಲ.
ಛತ್ತೀಸ್ಗಢ ಪೊಲೀಸರು ಮೂರು ವಾಹನಗಳಲ್ಲಿ ರೋಹಿತ್ ರಂಜನ್ ಅವರ ಮನೆಗೆ ಬಂದರು ಮತ್ತು ಸೆಕ್ಯುರಿಟಿಗೆ ಏನನ್ನೂ ಹೇಳಲಿಲ್ಲ, ನಂತರ ಅವರ ಮೊಬೈಲ್ಗಳನ್ನು ಕಸಿದುಕೊಂಡು ಎಲ್ಲಿಗೂ ಹೋಗದಂತೆ ಕೇಳಿಕೊಂಡಿದ್ದಾರೆ ಎಂದು ಎಂದು ಭದ್ರತಾ ಗೇಟ್ನಲ್ಲಿ ನಿಯೋಜಿಸಲಾಗಿದ್ದ ಗಾರ್ಡ್ ಹೇಳಿಕೆ ದಾಖಲಿಸಿದ್ದಾರೆ.
ನಿರೂಪಕರ ನಿವಾಸವನ್ನು ಪ್ರವೇಶಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ನಿರೂಪಕರ ಸಹೋದರ ಮತ್ತು ಇಬ್ಬರು ಚಿಕ್ಕ ಮಕ್ಕಳು ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಝೀ ನ್ಯೂಸ್ ಆಂಕರ್ ಬಂಧನದ ಬಗ್ಗೆ ಛತ್ತೀಸ್ಗಢ ಅಧಿಕಾರಿಗಳು ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿಲ್ಲ.
ಮಂಗಳವಾರ ಮುಂಜಾನೆ 5:30 ರ ಸುಮಾರಿಗೆ ರೋಹಿತ್ ರಂಜನ್ ಅವರ ನಿವಾಸಕ್ಕೆ ಪೊಲೀಸ್ ತಂಡ ಆಗಮಿಸಿತು, ನಂತರ ಗಾಜಿಯಾಬಾದ್ನಲ್ಲಿರುವ ಅಧಿಕಾರಿಗಳು ಕೂಡ ಸ್ಥಳಕ್ಕೆ ತಲುಪಿದರು. ರೋಹಿತ್ ರಂಜನ್ ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ಯುಪಿ ಪೊಲೀಸರು ಮತ್ತು ಛತ್ತೀಸ್ಗಢ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ.
ಛತ್ತೀಸ್ಗಢ ಪೊಲೀಸರು ಇನ್ನೂ ಸುದ್ದಿ ನಿರೂಪಕರ ಮನೆಯ ಹೊರಗೆ ಇದ್ದಾರೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಗಾಜಿಯಾಬಾದ್ ಪೊಲೀಸ್ ಅಧಿಕಾರಿಗಳು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಈ ವಿಷಯವನ್ನು ಸ್ಥಳೀಯ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
बिना लोकल पुलिस को जानकारी दिए छत्तीसगढ़ पुलिस मेरे घर के बाहर मुझे अरेस्ट करने के लिए खड़ी है,क्या ये क़ानूनन सही है @myogiadityanath @SspGhaziabad @adgzonelucknow
— Rohit Ranjan (@irohitr) July 5, 2022
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications