ಗೆಳತಿಯ ಅಣ್ಣನನ್ನು ಕೊಲೆ ಮಾಡಿದ್ದ ಯೂಟ್ಯೂಬರ್ ಬಂಧನ
ನವದೆಹಲಿ, ನವೆಂಬರ್ 4: ತನ್ನ ಬೈಕ್ ಸ್ಟಂಟ್ ವಿಡಿಯೋಗಳಿಗಾಗಿ ಯೂಟ್ಯೂಬ್ನಲ್ಲಿ ಸುಮಾರು 9 ಮಿಲಿಯನ್ ಸಬ್ಸ್ಕ್ರೈಬರ್ಗಳನ್ನು ಹೊಂದಿದ್ದ ಸಾಮಾಜಿಕ ಮಾಧ್ಯಮದ ಪ್ರಭಾವಿ ವ್ಯಕ್ತಿಯನ್ನು ತನ್ನ ಗೆಳತಿಯ ಸಹೋದರನನ್ನು ಕೊಂದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಯೂಟ್ಯೂಬರ್ ನಿಜಾಮುಲ್ ಖಾನ್ನನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಪರಾಧ ಎಸಗಲು ಸಹಾಯ ಮಾಡಿದ ಆರೋಪದಲ್ಲಿ ಇನ್ನಿಬ್ಬರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಜಾಮುಲ್ ಖಾನ್ ಮತ್ತು ತನ್ನ ಸಹೋದರಿಯ ನಡುವಿನ ಸ್ನೇಹಕ್ಕೆ ಕಮಲ್ ಶರ್ಮಾ (26) ಎಂಬಾತ ವಿರೋಧ ವ್ಯಕ್ತಪಡಿಸಿದ್ದ. ಇದರಿಂದ ಕೋಪಗೊಂಡಿದ್ದ 'ಬೈಕ್ ಸ್ಟಂಟರ್' ನಿಜಾಮುಲ್ ಆತನ ಕೊಲೆಗೆ ಸಂಚು ರೂಪಿಸಿದ್ದ. ಯುವತಿಯ ಸಹೋದರ ಕಮಲ್ ಶರ್ಮಾ, ಜಗಳವೊಂದರಲ್ಲಿ ನಿಜಾಮುಲ್ಗೆ ಹೊಡೆದಿದ್ದಲ್ಲದೆ, ಆತನ ಫೋನ್ ಅನ್ನೂ ಕಿತ್ತುಕೊಂಡಿದ್ದ ಎನ್ನಲಾಗಿದೆ.

ಅಕ್ಟೋಬರ್ 28ರಂದು ನೋಯ್ಡಾದ ಇಸ್ಕಾನ್ ದೇವಸ್ಥಾನ ಸಮೀಪದ ರಸ್ತೆಯಲ್ಲಿ ತೆರಳುತ್ತಿದ್ದ ಕಮಲ್ ಶರ್ಮಾನನ್ನು ಕೆಲವು ದೂರದವರೆಗೆ ಬೈಕ್ನಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದ ನಿಜಾಮುಲ್, ಬಳಿಕ ಆತನಿಗೆ ಹಿಂದಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ಕಮಲ್, ಅದೇ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಕಮಲ್ ದ್ವಿಚಕ್ರ ವಾಹನ ಓಡಿಸುತ್ತಿದ್ದರಿಂದ ಇದು ಅಪಘಾತ ಪ್ರಕರಣ ಎಂದು ಪೊಲೀಸರು ಭಾವಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಅವರ ಕತ್ತಿನಲ್ಲಿ ಗುಂಡು ಪತ್ತೆಯಾಗಿದ್ದರಿಂದ ಇದು ಹತ್ಯೆ ಪ್ರಕರಣ ಎನ್ನುವುದು ಪೊಲೀಸರಿಗೆ ಗೊತ್ತಾಗಿತ್ತು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications