ಪಾತಕಿ ಅಬು ಸಲೇಂ ಹಣವನ್ನು ಹೂಡಿಕೆ ಮಾಡಿದ್ದ ವ್ಯಕ್ತಿಯ ಬಂಧನ
ನೊಯ್ಡಾ, ಜುಲೈ 16: ಕುಖ್ಯಾತ ಪಾತಕಿ ಅಬು ಸಲೇಂನ ಅಕ್ರಮ ಆಸ್ತಿಗಳ ವಹಿವಾಟು ನೋಡುಕೊಳ್ಳುತ್ತಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಸ್ಪೆಷಲ್ ಟಾಸ್ಟ್ ಫೋರ್ಸ್ ಬಂಧಿಸಿದೆ.
Recommended Video
ಅಬು ಸಲೇಂ ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ ಪ್ರಕರಣದ ಅಪರಾಧಿಯಾಗಿದ್ದ. ಬಂಧಿತನನ್ನು ಗಜೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಆತ ಕುಖ್ಯಾತ ಗ್ಯಾಂಗ್ಸ್ಟರ್ ಖಾನ್ ಮುಬಾರಕ್ನ ಆಪ್ತ ಕೂಡ ಆಗಿದ್ದ. ಗಜೇಂದ್ರ ಸಿಂಗ್ನ್ನು ಎಸ್ಟಿಎಫ್ ತಂಡ ಮುಂಬೈನಲ್ಲಿ ಬುಧವಾರ ತಡರಾತ್ರಿ ಬಂಧಿಸಿದೆ.
ಈತ ದೆಹಲಿಯ ಎನ್ಸಿಟಿ ಪ್ರದೇಶದಲ್ಲಿ ಅಬು ಸಲೇಂನ ಅಕ್ರಮ ಆಸ್ತಿಗಳ ವಹಿವಾಟು ನೋಡಿಕೊಳ್ಳುತ್ತಿದ್ದ ಎಂದು ಎಎಸ್ಪಿ ರಾಜಕುಮಾರ್ ಮಿಶ್ರಾ ತಿಳಿಸಿದ್ದಾರೆ.

2014ರಲ್ಲಿ ಈತ ದೆಹಲಿ ಮೂಲ ವ್ಯಾಪಾರಿಯಿಂದ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ವಹಿವಾಟಿನಲ್ಲಿ 1.8 ಕೋಟಿ ರೂಪಾಯಿ ಪಡೆದುಕೊಂಡು ವಂಚಿಸಿದ್ದ. ಹಣ ವಾಪಸ್ ಕೇಳಿದ್ದ ವ್ಯಾಪಾರಿಯ ಮೇಲೆ ನೋಯ್ಡಾದ ಸೆಕ್ಟರ್ 18ರಲ್ಲಿ ಖಾನ್ ಮುಬಾರಕ್ನ ಕಡೆಯವರು ಗುಂಡು ಹಾರಿಸಿದ್ದರು. ಕಾರಿನಲ್ಲಿದ್ದ ವ್ಯಾಪಾರಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.
ಆ ಸಂದರ್ಭದಲ್ಲಿ ಶೂಟರ್ಗಳಿಗೆ ಮಿಶ್ರಾ 10 ಲಕ್ಷ ರೂಪಾಯಿ ಪಾವತಿಸಿದ್ದ. ಹಣದ ವಹಿವಾಟಿನ ರಹಸ್ಯ ತನಿಖಾ ಸಂಸ್ಥೆಗೆ ಗೊತ್ತಾಗಿತ್ತು. ಈ ಜಾಡನ್ನು ಬೆನ್ನತ್ತಿದಾಗ ಗಜೇಂದ್ರ ಸಿಂಗ್ನ ಉಳಿದ ವಿಚಾರಗಳು ಬಹಿರಂಗವಾದವು.
ಆತ ಅಬು ಸಲೇಂ ಮತ್ತು ಖಾನ್ ಮುಬಾರಕ್ ಪರವಾಗಿ ಅವರ ಹಣವನ್ನು ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ವಿವಿಧ ಪ್ರಾಪರ್ಟಿಗಳ ಮೇಲೆ ಹೂಡಿಕೆ ಮಾಡಿದ್ದ. ನೊಯ್ಡಾ ಪೊಲೀಸ್ ಠಾಣೆಯಲ್ಲಿ ಸಿಂಗ್ ವಿರುದ್ಧ ಕೆಲವು ಪ್ರಕರಣಗಳು ಬಾಕಿ ಇದ್ದು, ಈಗ ಅವುಗಳ ಮುಂದಿನ ಪ್ರಕ್ರಿಯೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಎಎಸ್ಪಿ ಮಿಶ್ರಾ ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications