ನೋಯ್ಡಾ: ಮೂವರು ವೇಶ್ಯೆಯರ ಮೇಲೆ 9 ಮಂದಿಯಿಂದ ಅತ್ಯಾಚಾರ
ನೋಯ್ಡಾ, ಜೂನ್ 19: ಫಾರ್ಮ್ ಹೌಸ್ ಒಂದರಲ್ಲಿ ಮೂವರು ಲೈಂಗಿಕ ಕಾರ್ಯಕರ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ.
ಒಂಬತ್ತು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಏಳು ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳು ಖಾಸಗಿ ಸೆಕ್ಯುರಿಟಿ ಗಾರ್ಡ್ಗಳಾಗಿದ್ದಾರೆ. ಮತ್ತೊಬ್ಬ ಕ್ಯಾಬ್ ಚಾಲಕ ಕೂಡ ಸೇರಿದ್ದಾನೆ. ಬುಧವಾರ ಬೆಳಿಗ್ಗೆ 5 ಗಂಟೆಗೆ ಈ ಬಗ್ಗೆ ತಮಗೆ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಲೈಂಗಿಕ ಕಾರ್ಯಕರ್ತೆಯರಾದ ದೂರುದಾರ ಮಹಿಳೆ ಮತ್ತು ಆಕೆಯ ಇಬ್ಬರು ಸ್ನೇಹಿತರು ಮಂಗಳವಾರ ರಾತ್ರಿ ದೆಹಲಿಯ ಲಾಜ್ಪತ್ ಮೆಟ್ರೋ ನಿಲ್ದಾಣದ ಬಳಿ ಗ್ರಾಹಕರಿಗಾಗಿ ಕಾದಿದ್ದರು. ರಾತ್ರಿ 11.30ರ ವೇಳೆಗೆ ಓಲಾ ಕ್ಯಾಬ್ ಒಂದರಲ್ಲಿ ಇಬ್ಬರು ಪುರುಷರು ಬಂದರು.

ವ್ಯವಹಾರ ಕುದುರಿಸಿದ ಅವರು ಒಬ್ಬರಿಗೆ ಮೂರು ಸಾವಿರ ರೂಪಾಯಿ ನೀಡುವುದಾಗಿ ಮಾತುಕತೆ ನಡೆಸಿದರು. ಮೂರು ಸಾವಿರ ರೂಪಾಯಿ ಮುಂಗಡ ಕೊಟ್ಟು ಅವರನ್ನು ನೋಯಿಡಾ ಸೆಕ್ಟರ್ 18ಗೆ ಬರಬೇಕು ಎಂದರು. ಅದಕ್ಕೆ ಒಪ್ಪಿ ಕಾರಿನಲ್ಲಿ ಕುಳಿತ ವೇಶ್ಯೆಯರನ್ನು ಹೇಳಿದ ಸ್ಥಳಕ್ಕೆ ಬದಲಾಗಿ ಸೆಕ್ಟರ್ 135ನಲ್ಲಿ ಇರುವ ಫಾರ್ಮ್ ಹೌಸ್ ಒಂದಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಇನ್ನೂ ಏಳು ಮಂದಿ ಪುರುಷರು ಬಂದರು.
ಆಗ ಪ್ರತಿರೋಧ ಒಡ್ಡಿದ ವೇಶ್ಯೆಯರು ತಾವು ದೆಹಲಿಗೆ ವಾಪಸ್ ಹೋಗಬೇಕೆಂದು ಕ್ಯಾಬ್ನಲ್ಲಿದ್ದ ವ್ಯಕ್ತಿಗಳಿಗೆ ಹೇಳಿದರು. ಆದರೆ, ಅದಕ್ಕೆ ಕಿವಿಗೊಡದ ಒಂಬತ್ತೂ ಮಂದಿ ಅವರ ಮೇಲೆ ಅತ್ಯಾಚಾರ ಎಸಗಿದರು. ಅವರು ಬೇಡಿಕೊಂಡ ಬಳಿಕ ಕೊನೆಗೆ ಆರೋಪಿಗಳಲ್ಲಿ ಒಬ್ಬಾತ ಬೆಳಗಿನ ಜಾವ ಐದು ಗಂಟೆಗೆ ಅವರನ್ನು ಮುಖ್ಯರಸ್ತೆಯ ಸಮೀಪ ಬಿಟ್ಟುಬಂದ. ಅಲ್ಲಿಂದ ಅವರು ಪೊಲೀಸರ ತುರ್ತು ಸಂಪರ್ಕ ಸಂಖ್ಯೆಗೆ ಕರೆಮಾಡಿ ಮಾಹಿತಿ ನೀಡಿದರು ಎಂದು ಗೌತಮ ಬುದ್ಧನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಕೃಷ್ಣ ತಿಳಿಸಿದ್ದಾರೆ.
ಅವರ ಮಾಹಿತಿ ಅನ್ವಯ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅವರು ನೀಡಿದ ದೂರಿನ ಅನ್ವಯ ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376ಡಿ) ಮತ್ತು ಉದ್ದೇಶಪೂರ್ವಕವಾಗಿ ಘಾಸಿ ಮಾಡುವುದು (ಸೆಕ್ಷನ್ 323) ಪ್ರಕರಣಗಳನ್ನು ದಾಖಲಿಸಿಕೊಂಡರು.
ತಮ್ಮ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳು ಅತ್ಯಾಚಾರ ನಡೆಸಿದ್ದಲ್ಲದೆ, ತಮಗೆ ನೀಡಿದ್ದ ಮುಂಗಡ ಹಣವನ್ನೂ ಕಿತ್ತುಕೊಂಡರು ಎಂದು ಅವರು ದೂರಿದ್ದಾರೆ.
ಪ್ರಕರಣ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ. ಕ್ಯಾಬ್ ಚಾಲಕ ಸೇರಿದಂತೆ ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಲವಲೇಶ್ ಯಾದವ್ ಫಾರ್ಮ್ ಹೌಸ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಫಾರ್ಮ್ ಹೌಸ್ ದೆಹಲಿಯ ಮೋಟಾರ್ ಟ್ರಾನ್ಸ್ಪೋರ್ಟ್ ಇಲಾಖೆಯ ಅಧಿಕಾರಿಯೊಬ್ಬರಿಗೆ ಸೇರಿದ್ದಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications