ನೋಯ್ಡಾ: ಮೂವರು ವೇಶ್ಯೆಯರ ಮೇಲೆ 9 ಮಂದಿಯಿಂದ ಅತ್ಯಾಚಾರ
ನೋಯ್ಡಾ, ಜೂನ್ 19: ಫಾರ್ಮ್ ಹೌಸ್ ಒಂದರಲ್ಲಿ ಮೂವರು ಲೈಂಗಿಕ ಕಾರ್ಯಕರ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ.
ಒಂಬತ್ತು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಏಳು ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ಆರೋಪಿಗಳು ಖಾಸಗಿ ಸೆಕ್ಯುರಿಟಿ ಗಾರ್ಡ್ಗಳಾಗಿದ್ದಾರೆ. ಮತ್ತೊಬ್ಬ ಕ್ಯಾಬ್ ಚಾಲಕ ಕೂಡ ಸೇರಿದ್ದಾನೆ. ಬುಧವಾರ ಬೆಳಿಗ್ಗೆ 5 ಗಂಟೆಗೆ ಈ ಬಗ್ಗೆ ತಮಗೆ ಮಾಹಿತಿ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಲೈಂಗಿಕ ಕಾರ್ಯಕರ್ತೆಯರಾದ ದೂರುದಾರ ಮಹಿಳೆ ಮತ್ತು ಆಕೆಯ ಇಬ್ಬರು ಸ್ನೇಹಿತರು ಮಂಗಳವಾರ ರಾತ್ರಿ ದೆಹಲಿಯ ಲಾಜ್ಪತ್ ಮೆಟ್ರೋ ನಿಲ್ದಾಣದ ಬಳಿ ಗ್ರಾಹಕರಿಗಾಗಿ ಕಾದಿದ್ದರು. ರಾತ್ರಿ 11.30ರ ವೇಳೆಗೆ ಓಲಾ ಕ್ಯಾಬ್ ಒಂದರಲ್ಲಿ ಇಬ್ಬರು ಪುರುಷರು ಬಂದರು.

ವ್ಯವಹಾರ ಕುದುರಿಸಿದ ಅವರು ಒಬ್ಬರಿಗೆ ಮೂರು ಸಾವಿರ ರೂಪಾಯಿ ನೀಡುವುದಾಗಿ ಮಾತುಕತೆ ನಡೆಸಿದರು. ಮೂರು ಸಾವಿರ ರೂಪಾಯಿ ಮುಂಗಡ ಕೊಟ್ಟು ಅವರನ್ನು ನೋಯಿಡಾ ಸೆಕ್ಟರ್ 18ಗೆ ಬರಬೇಕು ಎಂದರು. ಅದಕ್ಕೆ ಒಪ್ಪಿ ಕಾರಿನಲ್ಲಿ ಕುಳಿತ ವೇಶ್ಯೆಯರನ್ನು ಹೇಳಿದ ಸ್ಥಳಕ್ಕೆ ಬದಲಾಗಿ ಸೆಕ್ಟರ್ 135ನಲ್ಲಿ ಇರುವ ಫಾರ್ಮ್ ಹೌಸ್ ಒಂದಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಇನ್ನೂ ಏಳು ಮಂದಿ ಪುರುಷರು ಬಂದರು.
ಆಗ ಪ್ರತಿರೋಧ ಒಡ್ಡಿದ ವೇಶ್ಯೆಯರು ತಾವು ದೆಹಲಿಗೆ ವಾಪಸ್ ಹೋಗಬೇಕೆಂದು ಕ್ಯಾಬ್ನಲ್ಲಿದ್ದ ವ್ಯಕ್ತಿಗಳಿಗೆ ಹೇಳಿದರು. ಆದರೆ, ಅದಕ್ಕೆ ಕಿವಿಗೊಡದ ಒಂಬತ್ತೂ ಮಂದಿ ಅವರ ಮೇಲೆ ಅತ್ಯಾಚಾರ ಎಸಗಿದರು. ಅವರು ಬೇಡಿಕೊಂಡ ಬಳಿಕ ಕೊನೆಗೆ ಆರೋಪಿಗಳಲ್ಲಿ ಒಬ್ಬಾತ ಬೆಳಗಿನ ಜಾವ ಐದು ಗಂಟೆಗೆ ಅವರನ್ನು ಮುಖ್ಯರಸ್ತೆಯ ಸಮೀಪ ಬಿಟ್ಟುಬಂದ. ಅಲ್ಲಿಂದ ಅವರು ಪೊಲೀಸರ ತುರ್ತು ಸಂಪರ್ಕ ಸಂಖ್ಯೆಗೆ ಕರೆಮಾಡಿ ಮಾಹಿತಿ ನೀಡಿದರು ಎಂದು ಗೌತಮ ಬುದ್ಧನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಕೃಷ್ಣ ತಿಳಿಸಿದ್ದಾರೆ.
ಅವರ ಮಾಹಿತಿ ಅನ್ವಯ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅವರು ನೀಡಿದ ದೂರಿನ ಅನ್ವಯ ಸಾಮೂಹಿಕ ಅತ್ಯಾಚಾರ (ಐಪಿಸಿ ಸೆಕ್ಷನ್ 376ಡಿ) ಮತ್ತು ಉದ್ದೇಶಪೂರ್ವಕವಾಗಿ ಘಾಸಿ ಮಾಡುವುದು (ಸೆಕ್ಷನ್ 323) ಪ್ರಕರಣಗಳನ್ನು ದಾಖಲಿಸಿಕೊಂಡರು.
ತಮ್ಮ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳು ಅತ್ಯಾಚಾರ ನಡೆಸಿದ್ದಲ್ಲದೆ, ತಮಗೆ ನೀಡಿದ್ದ ಮುಂಗಡ ಹಣವನ್ನೂ ಕಿತ್ತುಕೊಂಡರು ಎಂದು ಅವರು ದೂರಿದ್ದಾರೆ.
ಪ್ರಕರಣ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ. ಕ್ಯಾಬ್ ಚಾಲಕ ಸೇರಿದಂತೆ ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಲವಲೇಶ್ ಯಾದವ್ ಫಾರ್ಮ್ ಹೌಸ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಫಾರ್ಮ್ ಹೌಸ್ ದೆಹಲಿಯ ಮೋಟಾರ್ ಟ್ರಾನ್ಸ್ಪೋರ್ಟ್ ಇಲಾಖೆಯ ಅಧಿಕಾರಿಯೊಬ್ಬರಿಗೆ ಸೇರಿದ್ದಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications