Breaking: ಮಹಿಳೆ ಮೇಲೆ ಹಲ್ಲೆ, ಬಿಜೆಪಿಯ ಶ್ರೀಕಾಂತ್ ತ್ಯಾಗಿ ಬಂಧನ
ನೋಯ್ಡಾ, ಆಗಸ್ಟ್ 09: ಕಳೆದ ವಾರ ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ತ್ಯಾಗಿಯನ್ನು ಮೀರತ್ನಲ್ಲಿ ಬಂಧಿಸಲಾಗಿದ್ದು, ಅವರನ್ನು ನೋಯ್ಡಾಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ, ಶ್ರೀಕಾಂತ್ ತ್ಯಾಗಿ ನೋಯ್ಡಾದ ಸೆಕ್ಟರ್ 93 ರ ಗ್ರಾಂಡ್ ಒಮ್ಯಾಕ್ಸ್ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ನಿಂದನೆ ಮಾಡುತ್ತಿರುವುದು ಕಂಡುಬಂದಿದೆ. ಘಟನೆ ನಂತರ ತ್ಯಾಗಿ ಅಲ್ಲಿಂದ ಪರಾರಿಯಾಗಿದ್ದರು.
ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ತ್ಯಾಗಿ ಜೊತೆಗೆ ತಮಗೆ ಯಾವುದೇ ಸಂಬಂಧವಿಲ್ಲವೆಂದು ಬಿಜೆಪಿ ಹೇಳಿಕೊಂಡಿತ್ತು. ಆದರೆ, ತಾನು ಭಾರತೀಯ ಜನತಾ ಪಕ್ಷದೊಂದಿಗೆ ಸಂಬಂಧ ಹೊಂದಿದ್ದೇನೆ ಎಂದು ತ್ಯಾಗಿ ಹೇಳಿಕೊಂಡಿದ್ದಾರೆ. ತ್ಯಾಗಿ ಬಿಜೆಪಿ ಕಿಸಾನ್ ಮೋರ್ಚಾದ (ರೈತ ವಿಭಾಗ) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ.

ನೊಯ್ಡಾದ ಸೆಕ್ಟರ್-93 ಬಿ ಯಲ್ಲಿನ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಮಹಿಳೆಯೊಬ್ಬರನ್ನು ನಿಂದನೆ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧ ನೋಯ್ಡಾ ಪೊಲೀಸರು ಶುಕ್ರವಾರ ಆಗಸ್ಟ್ 5 ರಂದು ಪ್ರಕರಣ ದಾಖಲಿಸಿದ್ದಾರೆ.
ಶ್ರೀಕಾಂತ್ ತ್ಯಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಯಾವುದೇ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವನ್ನು ಬಳಸುವುದು, ಆಕ್ರೋಶ ವ್ಯಕ್ತಪಡಿಸುವ ಉದ್ದೇಶ) ಅಡಿಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ.

ಗ್ರ್ಯಾಂಡ್ ಓಮ್ಯಾಕ್ಸ್ನಲ್ಲಿರುವ ಅಪಾರ್ಟ್ಮೆಂಟ್ನ ಹೊರಗೆ ಅಕ್ರಮವಾಗಿ ನಿರ್ಮಾಣ ಮಾಡಿರುವ ಆರೋಪ ತ್ಯಾಗಿ ಮೇಲಿತ್ತು. ಅವನ ಸಹಾಯಕರು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಗೆ ನುಗ್ಗಿ ಗದ್ದಲವನ್ನು ಸೃಷ್ಟಿಸಿದ ನಂತರ ಈ ವಿಷಯವು ಉಲ್ಬಣಗೊಂಡಿತು. ಶ್ರೀಕಾಂತ್ ತ್ಯಾಗಿ ಅವರು ಅಕ್ರಮವಾಗಿ ಕೆಲವು ಮರಗಳನ್ನು ನೆಡುವುದಕ್ಕೆ ಮಹಿಳೆ ಆಕ್ಷೇಪಿಸಿದ್ದರು.
ಸೋಮವಾರ, ಉತ್ತರ ಪ್ರದೇಶ ಸರ್ಕಾರ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸಲು ಬುಲ್ಡೋಜರ್ ಬಳಸಿ, ಅಕ್ರಮ ನಿರ್ಮಣಗಳನ್ನು ಕೆಡವಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications