ಯುಪಿಯಲ್ಲಿ ಹೊಸ ಮದರಸಾಗಳಿಗೆ ಅನುದಾನ ನಿಲ್ಲಿಸಿದ ಯೋಗಿ ಸರ್ಕಾರ
ನೋಯ್ಡಾ, ಮೇ 18: ಮದರಸಾಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿದ್ದ ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಹೊಸ ಮದರಸಾಗಳಿಗೆ ತನ್ನ ಅನುದಾನದ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ಕ್ಯಾಬಿನೆಟ್ ಅಂಗೀಕರಿಸಿದೆ.
ಯೋಗಿ ಆದಿತ್ಯನಾಥ್ ಸರ್ಕಾರ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಖಿಲೇಶ್ ಯಾದವ್ ಸರ್ಕಾರದ ನೀತಿಗೆ ಅಂತ್ಯವಾಡಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟದಲ್ಲಿ ಇನ್ನು ಮುಂದೆ ಹೊಸ ಮದರಸಾಗಳಿಗೆ ಯಾವುದೇ ಅನುದಾನ ನೀಡದಿರುವುದಕ್ಕೆ ನಿರ್ಧರಿಸಿದೆ.
ಸರಕಾರ ತನ್ನ ಕೊನೆಯ ಬಜೆಟ್ನಲ್ಲಿ ಮದರಸಾ ಆಧುನೀಕರಣ ಯೋಜನೆಯಡಿಯಲ್ಲಿ 479 ಕೋಟಿ ರೂ.ಗಳನ್ನು ವಿನಿಯೋಗಿಸಿತ್ತು. ರಾಜ್ಯದಲ್ಲಿ ಸುಮಾರು 16,000 ನೋಂದಾಯಿತ ಮದರಸಾಗಳ 558 ಸಂಸ್ಥೆಗಳಿಗೆ ಹಣವನ್ನು ಮಂಜೂರು ಮಾಡಿದೆ.

ರಾಷ್ಟ್ರಗೀತೆ ಕಡ್ಡಾಯಗೊಳಿಸಿದ ಒಂದು ವಾರದಲ್ಲೇ ಈ ನಿರ್ಧಾರ:
ಯುಪಿ ಸರಕಾರ ವಾರದ ಹಿಂದೆಯಷ್ಟೇ ರಾಜ್ಯದ ಎಲ್ಲಾ ಮದರಸಾಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತರಗತಿಗಳನ್ನು ಆರಂಭಿಸುವ ಮೊದಲು ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿತ್ತು. ಒಂದು ವಾರದ ಅಂತರದಲ್ಲಿ, ಹೊಸ ಮದರಸಾಗಳಿಗೆ ಧನಸಹಾಯವನ್ನು ನಿಲ್ಲಿಸುವ ನಿರ್ಧಾರವನ್ನು ಪ್ರಕಟಿಸಿದೆ. ಈ ಆದೇಶವನ್ನು ಮೇ 12 ರಂದು ಜಾರಿಗೊಳಿಸಲಾಗಿತ್ತು. ಯುಪಿ ಸರ್ಕಾರ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ ನಂತರ ಬಿಜೆಪಿ ನೇತೃತ್ವದ ಸರಕಾರವಿರುವ , ಮಧ್ಯಪ್ರದೇಶ, ಹರಿಯಾಣ ಮತ್ತು ಕರ್ನಾಟಕದ ಬಿಜೆಪಿ ಸರಕಾರಗಳು ಕೂಡ ಮದರಸಾಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸುವುದರ ಬಗ್ಗೆ ಚಿಂತಿಸುತ್ತಿವೆ.
ಡ್ಯಾನಿಶ್ ಆಜಾದ್ ಅನ್ಸಾರಿ ಘೋಷಣೆ
ಹೊಸ ಮದರಸಾಗಳಿಗೆ ಅನುದಾನ ನಿಲ್ಲಿಸುವ ಈ ಆದೇಶವನ್ನು ಉತ್ತರ ಪ್ರದೇಶದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮಂಡಿಸಿದ ಪ್ರಸ್ತಾವನೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಆದೇಶ ಮಂಡಿಸಿದರು. ಮಾರ್ಚ್ 24 ರಂದು ನಡೆದ ಯುಪಿ ಮದರಸಾ ಶಿಕ್ಷಣ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಕಲಿ ಮದರಸಾಗಳ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಸಮಿತಿಯನ್ನು ಸಹ ಘೋಷಿಸಲಾಗಿತ್ತು. ಉತ್ತರ ಪ್ರದೇಶದಲ್ಲಿ 7,000ಕ್ಕೂ ಹೆಚ್ಚು ಮದರಸಾಗಳಿವೆ. ಇದರ ಪ್ರಕಾರ ಬ್ಲಾಕ್ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್ ಡೆವಲಪ್ಮೆಂಟ್ ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ತಿಳಿಸಲಾಗಿದೆ. ಇತ್ತೀಚೆಗಷ್ಟೇ ಯೋಗಿ ಸರ್ಕಾರ ರಾಜ್ಯದ ಮದರಸಾಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿತ್ತು. ಈ ಆದೇಶವು ಎಲ್ಲಾ ಮಾನ್ಯತೆ ಪಡೆದ, ಅನುದಾನಿತ ಮತ್ತು ಅನುದಾನ ರಹಿತ ಮದರಸಾಗಳಿಗೆ ಅನ್ವಯಿಸುತ್ತದೆ ಎಂದು ಮದರಸಾ ಶಿಕ್ಷಣ ಮಂಡಳಿ ಆದೇಶದಲ್ಲಿ ತಿಳಿಸಿದೆ.
(ಒನ್ಇಂಡಿಯಾ ಸುದ್ದಿ)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications