ಮಧ್ಯರಾತ್ರಿ ಪ್ರಮಾಣ ವಚನ ಸ್ವೀಕರಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್
ಪಣಜಿ, ಮಾರ್ಚ್ 19: ಗೋವಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಪ್ರಮೋದ್ ಸಾವಂತ್ ಅವರು ಮಂಗಳವಾರ ಮಧ್ಯರಾತ್ರಿ ಪ್ರಮಾಣವಚನ ಸ್ವೀಕರಿಸಿದರು.
ಮನೋಹರ್ ಪರಿಕ್ಕರ್ ಅವರ ಅಗಲಿಕೆಯ ಶೋಕದ ನಡುವೆಯೇ ಕೂಡಲೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಅನಿವಾರ್ಯತೆಗೆ ಬಿಜೆಪಿ ಸಿಲುಕಿತ್ತು. ತ್ವರಿತ ರಾಜಕೀಯ ಬೆಳವಣಿಗೆಯಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿತ್ತು.
ಮಂಗಳವಾರ ನಸುಕಿನ 2 ಗಂಟೆಗೆ ನಡೆದ ಸಮಾರಂಭದಲ್ಲಿ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲರಾದ ಮೃದುಲಾ ಸಿನ್ಹಾ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ ಸುಧಿನ್ ಧವಳಿಕರ್ ಮತ್ತು ಗೋವಾ ಫಾರ್ವರ್ಡ್ ಪಾರ್ಟಿಯ ವಿಜಯ ಸರ್ದೇಸಾಯಿ ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದರು.
ಅವರೊಂದಿಗೆ 10 ಶಾಸಕರು ಸಾವಂತ್ ಅವರ ಸಂಪುಟಕ್ಕೆ ಸೇರ್ಪಡೆಗೊಂಡರು. ಪರಿಕ್ಕರ್ ನಿಧನದ ಬೆನ್ನಲ್ಲೇ ಗೋವಾದಲ್ಲಿ ರಾಜಕೀಯ ಗೊಂದಲ ಉದ್ಭವಿಸಿತ್ತು. ಸುಧಿನ್ ಧವಳಿಕರ್ ಮತ್ತು ವಿಜಯ್ ಸರ್ದೇಸಾಯಿ ಇಬ್ಬರೂ ಮುಖ್ಯಮಂತ್ರಿ ಗಾದಿಗೆ ಬೇಡಿಕೆ ಇರಿಸಿದ್ದರು. ತಾವು ಈ ಹಿಂದೆ ಬೆಂಬಲ ನೀಡಿದ್ದು ಪರಿಕ್ಕರ್ ಅವರಿಗೇ ಹೊರತು ಬಿಜೆಪಿಗಲ್ಲ ಎಂದು ಅವರು ಹೇಳಿದ್ದರು. ಹಿರಿಯ ನಾಯಕ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆಸ ಸಂಧಾನ ಸಭೆಯ ಬಳಿಕ ಇಬ್ಬರೂ ಮಿತ್ರಪಕ್ಷದ ನಾಯಕರು ಬಿಜೆಪಿಗೆ ಬೆಂಬಲ ಮುಂದುವರಿಸಲು ಒಪ್ಪಿಕೊಂಡರು.
40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತುತ 14 ಶಾಸಕರನ್ನು ಹೊಂದಿದ್ದು, 20 ಸದಸ್ಯರ ಬೆಂಬಲ ಹೊಂದಿದೆ. ಪರಿಕ್ಕರ್ ಸೇರಿದಂತೆ ಬಿಜೆಪಿಯ ಇಬ್ಬರು ಸದಸ್ಯರು ಮರಣ ಹೊಂದಿದ್ದಾರೆ. ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಹೀಗಾಗಿ ಪ್ರಸ್ತುತ ವಿಧಾನಸಭೆಯಲ್ಲಿ 36 ಸದಸ್ಯರು ಮಾತ್ರ ಇದ್ದಾರೆ. ಈ ಸಂಖ್ಯೆಯ ಬಲಾಬಲಕ್ಕೆ ಅನುಗುಣವಾಗಿ ಬಿಜೆಪಿ ಬಹುಮತ ಹೊಂದಿದೆ. ಇನ್ನು ಏಕೈಕ ದೊಡ್ಡ ಪಕ್ಷವಾಗಿ ಕಾಂಗ್ರೆಸ್ 15 ಶಾಸಕರನ್ನು ಹೊಂದಿದೆ. ಮ್ಯಾಜಿಕ್ ಸಂಖ್ಯೆ ತಲುಪಲು ಅದಕ್ಕೆ ಇನ್ನೂ ನಾಲ್ವರು ಶಾಸಕರು ಬೆಂಬಲ ಅಗತ್ಯವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications