ಗೋವಾ; ಬಿಜೆಪಿ ಇನ್ನೂ ಸಿಎಂ ಅಭ್ಯರ್ಥಿ ಅಂತಿಮಗೊಳಿಸಿಲ್ಲ!
ಪಣಜಿ, ಮಾರ್ಚ್ 14; ಗೋವಾ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಾರ್ಚ್ 15ಕ್ಕೆ ಗೋವಾ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಮಾರ್ಚ್ 15ರ ಮಂಗಳವಾರ ಅಧಿವೇಶನ ನಡೆಸಲು ಅಧಿಸೂಚನೆ ಹೊರಡಿಸಿದ್ದಾರೆ. ಗಣೇಶ್ ಗಾಂವ್ಕರ್ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಮಂಗಳವಾರ ನೂತನ ಶಾಸಕರು ಅವರ ಸಮ್ಮುಖದಲ್ಲಿಯೇ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಗೋವಾ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ. ಮೂವರು ಪಕ್ಷೇತರರು, ಎಂಜಿಪಿ ಪಕ್ಷ ಬಿಜೆಪಿಗೆ ಬೆಂಬಲ ನೀಡಿದ್ದು, 25 ಸದಸ್ಯ ಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿದೆ.
ಗೋವಾ ವಿಧಾನಸಭೆಯ ಅವಧಿ ಶನಿವಾರ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಗುಟ್ಟನ್ನು ಬಿಜೆಪಿ ಇನ್ನೂ ಬಿಟ್ಟುಕೊಟ್ಟಿಲ್ಲ.

ಬಿಜೆಪಿಗೆ 20 ಸ್ಥಾನಗಳು
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಮತದಾನ ನಡೆದಿತ್ತು. ಮಾರ್ಚ್ 10ರಂದು ಮತ ಎಣಿಕೆ ನಡೆದಿದೆ. ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ. ಆದರೆ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇತರರು, ಎಂಜಿಪಿ ಪಕ್ಷ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದೆ. ಇದರಿಂದಾಗಿ ಬಿಜೆಪಿ ಬಲ 25 ಆಗಿದ್ದು, ಸರ್ಕಾರ ರಚನೆ ಮಾಡುವುದಾಗಿ ಪಕ್ಷ ಹೇಳಿದೆ.

ಕೇಂದ್ರದಿಂದ ವೀಕ್ಷಕರು ಬಂದಿಲ್ಲ
ಮಂಗಳವಾರ 11.30ಕ್ಕೆ ನಡೆಯುವ ವಿಧಾನಸಭೆ ಕಲಾಪದಲ್ಲಿ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಶಾಸಕಾಂಗ ಪಕ್ಷದ ನಾಯಕ ಯಾರು?, ಸಚಿವ ಸಂಪುಟ ಸೇರುವ ಶಾಸಕರು ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ಕೇಂದ್ರ ಬಿಜೆಪಿ ಘಟಕ ಶಾಸಕಾಂಗ ಪಕ್ಷದ ಸಭೆ ನಡೆಸಲು ವೀಕ್ಷಕರನ್ನು ಕಳಿಸಿಕೊಡಬೇಕಿದೆ. ಇನ್ನೂ ವೀಕ್ಷಕರು ಬರದ ಕಾರಣದಿಂದಾಗಿ ನೂತನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಪ್ರಮೋದ್ ಸಾವಂತ್ ಮುಂದುವರಿಕೆ
ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪ್ರಮೋದ್ ಸಾವಂತ್ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ. ಬಿಜೆಪಿ 2ನೇ ಅವಧಿಗೂ ಪ್ರಮೋದ್ ಸಾವಂತ್ ಅವರನ್ನೇ ಮುಂದುವರೆಸಲಿದೆ ಎಂಬ ಸುದ್ದಿಗಳು ಇವೆ. ಚುನಾವಣಾ ಫಲಿತಾಂಶ ಪ್ರಕಟವಾದ ದಿನದಿಂದ ವಿಶ್ವಜಿತ್ ರಾಣೆ ಹೆಸರು ಸಹ ಸಿಎಂ ಹುದ್ದೆಗೆ ಕೇಳಿ ಬರುತ್ತಿದೆ. ಶನಿವಾರ ಸಂಜೆ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದು, ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಸಂಜೆ ಸಭೆ
ಗೋವಾ ಚುನಾವಣೆ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ನೂತನ ಶಾಸಕರ ಸಭೆ ನಡೆಸಿದ್ದರು. ಆದರೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆದಿಲ್ಲ. ಸೋಮವಾರ ಕೇಂದ್ರದಿಂದ ವೀಕ್ಷಕರು ಆಗಮಿಸುವ ನಿರೀಕ್ಷೆ ಇದ್ದು, ಸಂಜೆ ನಡೆಯುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ, ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications