ಮಹದಾಯಿ ವಿವಾದ: ಕೇಂದ್ರ ಸಚಿವರಿಗೆ ಸೆಡ್ಡು ಹೊಡೆದ ಗೋವಾ ಬಿಜೆಪಿ ಸಿಎಂ
ಪಣಜಿ, ಜನವರಿ 01: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಪರವಾಗಿರುವ ಕಾನೂನಿನ ಬಗ್ಗೆ ಮಾತನಾಡಿದ ತಮ್ಮದೇ ಪಕ್ಷದ ಹಿರಿಯ ಸಚಿವರ ವಿರುದ್ಧ ಗೋವಾ ಬಿಜೆಪಿ ಸಿಎಂ ಕಿಡಿ ಕಾರಿದ್ದಾರೆ.
ಕೇಂದ್ರ ಸಚಿವ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇತ್ತೀಚಿಗಷ್ಟೆ ಮಹದಾಯಿ ವಿಚಾರದ ಕುರಿತಂತೆ ಕರ್ನಾಟಕದ ಪರವಾಗಿರುವ ಕಾನೂನೊಂದರ ಬಗ್ಗೆ ಪತ್ರ ಬರೆದಿದ್ದರು. ಕರ್ನಾಟಕವು ಕಳಸಾ-ಬಂಡೂರಿ ಯೋಜನೆ ಪ್ರಾರಂಭಿಸಲು ಪರಿಸರ ಇಲಾಖೆ ಅಡ್ಡಿಯಿಲ್ಲ ಎಂದಿದ್ದರು.
ಆದರೆ ಇದರಿಂದ ಬೇಸರಗೊಂಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, 'ಮಹದಾಯಿ ವಿವಾದದ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಕಿಮ್ಮತ್ತಿಲ್ಲ' ಎಂದಿದ್ದಾರೆ.

ತಮ್ಮದೇ ಪಕ್ಷದ ರಾಷ್ಟ್ರ ನಾಯಕರ ವಿರುದ್ಧ ಟೀಕೆ ಮಾಡಿರುವ ಪ್ರಮೋದ್ ಸಾವಂತ್, 'ಪ್ರಕರಣವು ಸುಪ್ರೀಂಕೋರ್ಟ್ ನಲ್ಲಿ ಇದೆ ಹಾಗಾಗಿ ಜಾವಡೇಕರ್ ಅವರು ಹೇಳಿರುವ ಮಾತುಗಳಿಗೆ ಕಿಮ್ಮತ್ತಿಲ್ಲ, ಪ್ರಕರಣದ ತೀರ್ಮಾನ ಸುಪ್ರೀಂಕೋರ್ಟ್ನಲ್ಲಿ ಆಗುತ್ತದೆ' ಎಂದಿದ್ದಾರೆ.
ಕಳಸಾ-ಬಂಡೂರಿ ಯೋಜನೆಗೆ ಪರಿಸರ ಸಚಿವಾಲಯದ ಅನುಮತಿ ಅಗತ್ಯವಿಲ್ಲ ಎಂದು ಕಳೆದ ವಾರ ಜಾವಡೇಕರ್ ಹೇಳಿಕೆ ನೀಡಿದ್ದರು. 'ಮಹದಾಯಿ ವಿವಾದದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದ್ದರೂ ಈ ನದಿಯ ಕೆಲ ಪ್ರಮಾಣದ ನೀರನ್ನುತಿರುಗಿಸಲಾಗಿದೆ ಎಂಬ ಅಂಶವನ್ನು ಅವರು ಒಪ್ಪಿಕೊಂಡರು. ಈ ವಿವಾದದಲ್ಲಿ ನಮ್ಮ ಸ್ಷಷ್ಟ ನಿಲುವನ್ನು ಈಗಾಗಲೇ ಸುಪ್ರೀಂಕೋರ್ಟ್ ತಿಳಿಸಿದ್ದೇವೆ' ಎಂದು ಗೋವಾ ಸಿಎಂ ಹೇಳಿದ್ದಾರೆ.
'ಕೇಂದ್ರ ಪರಿಸರ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆಗೆ ಪತ್ರಗಳ ಮುಖೇನ ಈ ವಿಷಯವನ್ನು ನಾವು ಸ್ಪಷ್ಟಪಡಿಸಿದ್ದೇವೆ' ಎಂದು ಅವರು ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications